ರಜನಿಗೆ ಆರೋಗ್ಯ ಸರಿ ಇಲ್ವಂತೆ, ಗಾಳಿ ಸುದ್ದಿ ಹಬ್ಬುತ್ತಿದೆ!
ಬೆಂಗಳೂರು, ಜೂನ್ 16: 'ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯ ಸ್ಥಿರವಾಗಿದೆ' ಎಂದು ಒಂದು ಸಾಲಿನ ಸ್ಪಷ್ಟನೆಗಾಗಿ ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ರಜನಿಗೆ ಆರೋಗ್ಯ ಸರಿ ಇಲ್ಲ ಎಂಬ ಗಾಳಿ ಸುದ್ದಿ ಕಾಡ್ಗಿಚ್ಚಿನಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬುತ್ತಿದೆ.
ಕಬಾಲಿ ಚಿತ್ರೀಕರಣ ಮುಗಿಸಿಕೊಂಡು ಅಮೆರಿಕದಲ್ಲಿ ಸುತ್ತಾಡಲು ತೆರಳಿರುವ ರಜನಿ ಅವರ ಆರೋಗ್ಯದ ಬಗ್ಗೆ ಮತ್ತೊಮ್ಮೆ ಗಾಳಿಸುದ್ದಿ ಹಬ್ಬುತ್ತಿದೆ. ರಜನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳಿದ್ದಾರೆ ಎಂಬ ಸುದ್ದಿ ಫೇಸ್ ಬುಕ್, ಟ್ವಿಟ್ಟರ್ ಹಾಗೂ ವೆಬ್ ತಾಣಗಳಲ್ಲಿ ಹರಿದಾಡಿದೆ. ['ರಾಜಕೀಯಕ್ಕೆ ರಜನಿಕಾಂತ್ ಬರುವುದು ಬೇಡ']

ರಜನಿ ಅವರ ವಕ್ತಾರ ಸ್ಪಷ್ಟನೆ: ರಜನಿ ಕಾಂತ್ ಅವರು ಯುಎಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ, ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ರೀತಿಯಲ್ಲಿ ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ರಜನಿ ಕಾಂತ್ ಅವರ ಕಚೇರಿ ಪ್ರಕಟಿಸಿದೆ.
ಈ ರೀತಿ ಗಾಳಿಸುದ್ದಿ ಹಬ್ಬಲು ಕಾರಣವೂ ಇದೆ. ಇತ್ತೀಚೆಗೆ ಕಬಾಲಿ ಚಿತ್ರ ಆಡಿಯೋ ರಿಲೀಸ್ ಸರಳವಾಗಿ ನೆರವೇರಿಸಲಾಗಿತ್ತು. ರಜನಿ ಅವರು ಈ ಕಾರ್ಯಕ್ರಮಕ್ಕೂ ಮುಂಚಿತವಾಗಿ ಯುಎಸ್ ಗೆ ತೆರಳಿದ್ದರು. ರಜನಿ ಅನುಪಸ್ಥಿತಿ ಬಗ್ಗೆ ಕಥೆಗಳು ಹುಟ್ಟಿಕೊಂಡು ಸಾಮಾಜಿಕ ಜಾಲ ತಾಣಗಳಲ್ಲಿ ಸುದ್ದಿಯಾಗಿವೆ. [ಶಿಕ್ಷಕಿಯ ಕಷ್ಟಕ್ಕೆ ಮಿಡಿದ ರಜನಿಕಾಂತ್ ಹೃದಯ!]
ಸದ್ಯದಲ್ಲೇ ಈ ಬಗ್ಗೆ ರಜನಿಕಾಂತ್ ಅವರ ಅಧಿಕೃತ ಟ್ವಿಟ್ಟರ್ ಐಡಿ(@superstarrajini)ಯಿಂದ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.
65 ವರ್ಷ ವಯಸ್ಸಿನ ಪದ್ಮವಿಭೂಷಣ ರಜನಿ ಅವರು ಬಹುನಿರೀಕ್ಷಿತ ಚಿತ್ರ ಕಬಾಲಿ ನಂತರ ಶಂಕರ್ ನಿರ್ದೇಶನದ ಎಂದಿರನ್ 2 ಚಿತ್ರಕ್ಕೆ ಸಿದ್ಧವಾಗುತ್ತಿದ್ದಾರೆ. (ಪಿಟಿಐ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications