ರಜನಿಗೆ ಆರೋಗ್ಯ ಸರಿ ಇಲ್ವಂತೆ, ಗಾಳಿ ಸುದ್ದಿ ಹಬ್ಬುತ್ತಿದೆ!
ಬೆಂಗಳೂರು, ಜೂನ್ 16: 'ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯ ಸ್ಥಿರವಾಗಿದೆ' ಎಂದು ಒಂದು ಸಾಲಿನ ಸ್ಪಷ್ಟನೆಗಾಗಿ ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ರಜನಿಗೆ ಆರೋಗ್ಯ ಸರಿ ಇಲ್ಲ ಎಂಬ ಗಾಳಿ ಸುದ್ದಿ ಕಾಡ್ಗಿಚ್ಚಿನಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬುತ್ತಿದೆ.
ಕಬಾಲಿ ಚಿತ್ರೀಕರಣ ಮುಗಿಸಿಕೊಂಡು ಅಮೆರಿಕದಲ್ಲಿ ಸುತ್ತಾಡಲು ತೆರಳಿರುವ ರಜನಿ ಅವರ ಆರೋಗ್ಯದ ಬಗ್ಗೆ ಮತ್ತೊಮ್ಮೆ ಗಾಳಿಸುದ್ದಿ ಹಬ್ಬುತ್ತಿದೆ. ರಜನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳಿದ್ದಾರೆ ಎಂಬ ಸುದ್ದಿ ಫೇಸ್ ಬುಕ್, ಟ್ವಿಟ್ಟರ್ ಹಾಗೂ ವೆಬ್ ತಾಣಗಳಲ್ಲಿ ಹರಿದಾಡಿದೆ. ['ರಾಜಕೀಯಕ್ಕೆ ರಜನಿಕಾಂತ್ ಬರುವುದು ಬೇಡ']

ರಜನಿ ಅವರ ವಕ್ತಾರ ಸ್ಪಷ್ಟನೆ: ರಜನಿ ಕಾಂತ್ ಅವರು ಯುಎಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ, ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ರೀತಿಯಲ್ಲಿ ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ರಜನಿ ಕಾಂತ್ ಅವರ ಕಚೇರಿ ಪ್ರಕಟಿಸಿದೆ.
ಈ ರೀತಿ ಗಾಳಿಸುದ್ದಿ ಹಬ್ಬಲು ಕಾರಣವೂ ಇದೆ. ಇತ್ತೀಚೆಗೆ ಕಬಾಲಿ ಚಿತ್ರ ಆಡಿಯೋ ರಿಲೀಸ್ ಸರಳವಾಗಿ ನೆರವೇರಿಸಲಾಗಿತ್ತು. ರಜನಿ ಅವರು ಈ ಕಾರ್ಯಕ್ರಮಕ್ಕೂ ಮುಂಚಿತವಾಗಿ ಯುಎಸ್ ಗೆ ತೆರಳಿದ್ದರು. ರಜನಿ ಅನುಪಸ್ಥಿತಿ ಬಗ್ಗೆ ಕಥೆಗಳು ಹುಟ್ಟಿಕೊಂಡು ಸಾಮಾಜಿಕ ಜಾಲ ತಾಣಗಳಲ್ಲಿ ಸುದ್ದಿಯಾಗಿವೆ. [ಶಿಕ್ಷಕಿಯ ಕಷ್ಟಕ್ಕೆ ಮಿಡಿದ ರಜನಿಕಾಂತ್ ಹೃದಯ!]
ಸದ್ಯದಲ್ಲೇ ಈ ಬಗ್ಗೆ ರಜನಿಕಾಂತ್ ಅವರ ಅಧಿಕೃತ ಟ್ವಿಟ್ಟರ್ ಐಡಿ(@superstarrajini)ಯಿಂದ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.
65 ವರ್ಷ ವಯಸ್ಸಿನ ಪದ್ಮವಿಭೂಷಣ ರಜನಿ ಅವರು ಬಹುನಿರೀಕ್ಷಿತ ಚಿತ್ರ ಕಬಾಲಿ ನಂತರ ಶಂಕರ್ ನಿರ್ದೇಶನದ ಎಂದಿರನ್ 2 ಚಿತ್ರಕ್ಕೆ ಸಿದ್ಧವಾಗುತ್ತಿದ್ದಾರೆ. (ಪಿಟಿಐ)
-
ಕಣ್ಣು ಸಮಸ್ಯೆಗಳು ಹೆಚ್ಚುತ್ತಿವೆಯೇ? ಈ ಆಹಾರಗಳು ನಿಮ್ಮ ದೃಷ್ಟಿಯನ್ನು ರಕ್ಷಿಸುತ್ತವೆ -
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ -
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ












Click it and Unblock the Notifications