Dollar vs Rupee: ಬೆಲೆ ಏರಿಕೆಗೆ ರೆಡಿಯಾಗಿ: ಪಾತಾಳಕ್ಕೆ ಬಿತ್ತು ರೂಪಾಯಿ ಮೌಲ್ಯ!
ದೇಶದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಹಣದುಬ್ಬರ ಹಾಗೂ ವಿವಿಧ ವಸ್ತುಗಳ ಬೆಲೆ ಏರಿಕೆ ಗಣನೀಯವಾಗಿ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿ ಕಾಣಿಸುತ್ತಿದೆ. ಇದಕ್ಕೆ ಮುಖ್ಯ ಕಾರಣ ಭಾರತದ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಮುಂದೆ ಇನ್ನೊಮ್ಮೆ ಸಾರ್ವಕಾಲಿಕ ಕುಸಿತ ಕಂಡಿರುವುದು. ಹೌದು ಭಾರತದ ರೂಪಾಯಿ ಇನ್ನೊಮ್ಮೆ ಡಾಲರ್ ಮುಂದೆ ಮುಗ್ಗರಿಸಿದೆ. ಈ ಬಾರಿ ಎಲ್ಲಾ ಹಳೆಯ ದಾಖಲೆಗಳನ್ನು ಮರಿದಿದ್ದು, ಷೇರು ಮಾರುಕಟ್ಟೆಯಲ್ಲಿ ಏರಿಳಿತ ಮುಂದಿವರಿದಿರುವಾಗಲೇ ಈ ಬೆಳವಣಿಗೆ ಆಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಲೆ ಏರಿಕೆಯಾಗುವ ಆತಂಕ ಶುರುವಾಗಿದೆ. ಅದರ ವಿವರ ಇಲ್ಲಿದೆ.
ಡಾಲರ್ನ ಮುಂದೆ ರೂಪಾಯಿಯ ಮೌಲ್ಯ ಕುಸಿತ ಕಂಡಾಗಲೆಲ್ಲ ಬೆಲೆ ಏರಿಕೆ ಆಗಿರುವುದು ಇದೆ. ಅದರಲ್ಲೂ ಈ ಬಾರಿ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದಿನಕ್ಕೊಂದು ಆದೇಶ ಮಾಡುತ್ತಿದ್ದು. ಇದು ವಿಶ್ವದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಈಗಾಗಲೇ ಅಮೆರಿಕದ ಹೊಸ ಆರ್ಥಿಕ ನೀತಿ ಹಾಗೂ ಹೊಸ ತೆರಿಗೆ ನೀತಿಯಿಂದಾಗಿ ಭಾರತವೂ ಸೇರಿದಂತೆ ವಿವಿಧ ರಾಷ್ಟ್ರಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಇದೀಗ ಭಾರತದ ರೂಪಾಯಿ ಮೌಲ್ಯವು ಭಾರತದ ಇತಿಹಾಸದಲ್ಲೇ /ಸಾರ್ವಕಾಲಿಕ ದಾಖಲೆಯೊಂದನ್ನು ಮಾಡಿದೆ. ಅದೇನು ಎನ್ನುವ ವಿವರ ಮುಂದೆ ನೋಡೋಣ.

ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿಯನ್ನು ಪರಿಶೀಲನೆ ಮಾಡುವುದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗಲೇ ಈ ಬೆಳವಣಿಗೆ ನಡೆದಿದೆ. ರೂಪಾಯಿ ಮೌಲ್ಯದ ಆಧಾರದ ಮೇಲೆ ವಿವಿಧ ವಸ್ತುಗಳ ಮೇಲೆ ಪರಿಣಾಮ ಬೀರುತ್ತದೆ. ಈ ಬಾರಿ ಭಾರತದ ರೂಪಾಯಿಯೂ ಅಮೆರಿಕದ ಡಾಲರ್ನ ಮುಂದೆ ಭಾರೀ ಕುಸಿತ ಕಂಡಿದೆ. ಯುಎಸ್ ಡಾಲರ್ ವಿರುದ್ಧ ಭಾರತದ ರೂಪಾಯಿ 87 ರೂಪಾಯಿಗಿಂತ ಕಡಿಮೆಯಾಗಿದೆ. ಇದರಿಂದ ಆಮದು ವಸ್ತುಗಳ ಹಣದುಬ್ಬರ ಹಾಗೂ ದೇಶದ ಆಮದಿನ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸೋಮವಾರ ಭಾರತದ ಕರೆನ್ಸಿಯು ಪ್ರತಿ ಡಾಲರ್ಗೆ 87.29ರೂ. ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಇದು ಮುಂದಿನ ದಿನಗಳಲ್ಲಿ ಭಾರತದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಚರ್ಚೆ ಶುರುವಾಗಿದೆ. ಹಣದುಬ್ಬರ ನಿಶ್ಚಿತ ಎಂದೇ ಹೇಳಲಾಗುತ್ತಿದೆ.

ಅಮೆರಿಕದ ಟ್ಯಾಕ್ಸ್ ವಾರ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ ಅವರು ಅಮೆರಿಕ ಫಸ್ಟ್ ಎನ್ನುವುದನ್ನು ಶುರು ಮಾಡಿದ್ದಾರೆ. ಆದರೆ, ಅಮೆರಿಕದ ಈ ಟ್ಯಾಕ್ಸ್ ವಾರ್ನಿಂದ ಭಾರತವೂ ಸೇರಿದಂತೆ ವಿವಿಧ ದೇಶಗಳು ವಿಲವಿಲ ಎನ್ನುತ್ತಿವೆ. ಈಗಾಗಲೇ ಅಮೆರಿಕ ಕೆನಡಾ, ಮೆಕ್ಸಿಕೊ ಹಾಗೂ ಚೀನಾದ ಮೇಲೆ ಭಾರೀ ತೆರಿಗೆ ವಿಧಿಸುತ್ತಿದೆ. ವಿಶ್ವದ ಪ್ರಮುಖ ದೇಶಗಳ ಕರೆನ್ಸಿಯಲ್ಲಿ ಯುಎಸ್ ಡಾಲರ್ ಸಹ ಪ್ರಮುಖವಾಗಿದೆ.
ಯುಎಸ್ನ ಪ್ರತಿ ಸಣ್ಣ ನಿರ್ಧಾರವೂ ಸಹ ವಿಶ್ವದ ವಿವಿಧ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಹೊಸ ತೆರಿಗೆ ನೀತಿಯು ಈ ಮಾದರಿಯ ಸಮಸ್ಯೆಗಳಿಗೆ ಕಾರಣವಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications