Dollar vs Rupee: ಬೆಲೆ ಏರಿಕೆಗೆ ರೆಡಿಯಾಗಿ: ಪಾತಾಳಕ್ಕೆ ಬಿತ್ತು ರೂಪಾಯಿ ಮೌಲ್ಯ!
ದೇಶದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಹಣದುಬ್ಬರ ಹಾಗೂ ವಿವಿಧ ವಸ್ತುಗಳ ಬೆಲೆ ಏರಿಕೆ ಗಣನೀಯವಾಗಿ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿ ಕಾಣಿಸುತ್ತಿದೆ. ಇದಕ್ಕೆ ಮುಖ್ಯ ಕಾರಣ ಭಾರತದ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಮುಂದೆ ಇನ್ನೊಮ್ಮೆ ಸಾರ್ವಕಾಲಿಕ ಕುಸಿತ ಕಂಡಿರುವುದು. ಹೌದು ಭಾರತದ ರೂಪಾಯಿ ಇನ್ನೊಮ್ಮೆ ಡಾಲರ್ ಮುಂದೆ ಮುಗ್ಗರಿಸಿದೆ. ಈ ಬಾರಿ ಎಲ್ಲಾ ಹಳೆಯ ದಾಖಲೆಗಳನ್ನು ಮರಿದಿದ್ದು, ಷೇರು ಮಾರುಕಟ್ಟೆಯಲ್ಲಿ ಏರಿಳಿತ ಮುಂದಿವರಿದಿರುವಾಗಲೇ ಈ ಬೆಳವಣಿಗೆ ಆಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಲೆ ಏರಿಕೆಯಾಗುವ ಆತಂಕ ಶುರುವಾಗಿದೆ. ಅದರ ವಿವರ ಇಲ್ಲಿದೆ.
ಡಾಲರ್ನ ಮುಂದೆ ರೂಪಾಯಿಯ ಮೌಲ್ಯ ಕುಸಿತ ಕಂಡಾಗಲೆಲ್ಲ ಬೆಲೆ ಏರಿಕೆ ಆಗಿರುವುದು ಇದೆ. ಅದರಲ್ಲೂ ಈ ಬಾರಿ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದಿನಕ್ಕೊಂದು ಆದೇಶ ಮಾಡುತ್ತಿದ್ದು. ಇದು ವಿಶ್ವದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಈಗಾಗಲೇ ಅಮೆರಿಕದ ಹೊಸ ಆರ್ಥಿಕ ನೀತಿ ಹಾಗೂ ಹೊಸ ತೆರಿಗೆ ನೀತಿಯಿಂದಾಗಿ ಭಾರತವೂ ಸೇರಿದಂತೆ ವಿವಿಧ ರಾಷ್ಟ್ರಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಇದೀಗ ಭಾರತದ ರೂಪಾಯಿ ಮೌಲ್ಯವು ಭಾರತದ ಇತಿಹಾಸದಲ್ಲೇ /ಸಾರ್ವಕಾಲಿಕ ದಾಖಲೆಯೊಂದನ್ನು ಮಾಡಿದೆ. ಅದೇನು ಎನ್ನುವ ವಿವರ ಮುಂದೆ ನೋಡೋಣ.

ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿಯನ್ನು ಪರಿಶೀಲನೆ ಮಾಡುವುದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗಲೇ ಈ ಬೆಳವಣಿಗೆ ನಡೆದಿದೆ. ರೂಪಾಯಿ ಮೌಲ್ಯದ ಆಧಾರದ ಮೇಲೆ ವಿವಿಧ ವಸ್ತುಗಳ ಮೇಲೆ ಪರಿಣಾಮ ಬೀರುತ್ತದೆ. ಈ ಬಾರಿ ಭಾರತದ ರೂಪಾಯಿಯೂ ಅಮೆರಿಕದ ಡಾಲರ್ನ ಮುಂದೆ ಭಾರೀ ಕುಸಿತ ಕಂಡಿದೆ. ಯುಎಸ್ ಡಾಲರ್ ವಿರುದ್ಧ ಭಾರತದ ರೂಪಾಯಿ 87 ರೂಪಾಯಿಗಿಂತ ಕಡಿಮೆಯಾಗಿದೆ. ಇದರಿಂದ ಆಮದು ವಸ್ತುಗಳ ಹಣದುಬ್ಬರ ಹಾಗೂ ದೇಶದ ಆಮದಿನ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸೋಮವಾರ ಭಾರತದ ಕರೆನ್ಸಿಯು ಪ್ರತಿ ಡಾಲರ್ಗೆ 87.29ರೂ. ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಇದು ಮುಂದಿನ ದಿನಗಳಲ್ಲಿ ಭಾರತದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಚರ್ಚೆ ಶುರುವಾಗಿದೆ. ಹಣದುಬ್ಬರ ನಿಶ್ಚಿತ ಎಂದೇ ಹೇಳಲಾಗುತ್ತಿದೆ.

ಅಮೆರಿಕದ ಟ್ಯಾಕ್ಸ್ ವಾರ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ ಅವರು ಅಮೆರಿಕ ಫಸ್ಟ್ ಎನ್ನುವುದನ್ನು ಶುರು ಮಾಡಿದ್ದಾರೆ. ಆದರೆ, ಅಮೆರಿಕದ ಈ ಟ್ಯಾಕ್ಸ್ ವಾರ್ನಿಂದ ಭಾರತವೂ ಸೇರಿದಂತೆ ವಿವಿಧ ದೇಶಗಳು ವಿಲವಿಲ ಎನ್ನುತ್ತಿವೆ. ಈಗಾಗಲೇ ಅಮೆರಿಕ ಕೆನಡಾ, ಮೆಕ್ಸಿಕೊ ಹಾಗೂ ಚೀನಾದ ಮೇಲೆ ಭಾರೀ ತೆರಿಗೆ ವಿಧಿಸುತ್ತಿದೆ. ವಿಶ್ವದ ಪ್ರಮುಖ ದೇಶಗಳ ಕರೆನ್ಸಿಯಲ್ಲಿ ಯುಎಸ್ ಡಾಲರ್ ಸಹ ಪ್ರಮುಖವಾಗಿದೆ.
ಯುಎಸ್ನ ಪ್ರತಿ ಸಣ್ಣ ನಿರ್ಧಾರವೂ ಸಹ ವಿಶ್ವದ ವಿವಿಧ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಹೊಸ ತೆರಿಗೆ ನೀತಿಯು ಈ ಮಾದರಿಯ ಸಮಸ್ಯೆಗಳಿಗೆ ಕಾರಣವಾಗಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications