ರಷ್ಯಾದ ಭಾರತ ರಾಯಭಾರಿ ಅಲೆಕ್ಸಾಂಡರ್ ನಿಧನ
2009ರಿಂದ ಭಾರತದಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಲೆಕ್ಸಾಂಡರ್. ಪಾಕಿಸ್ತಾನದ ಉಗ್ರ ಬೆಂಬಲದ ವಿರುದ್ಧ ಭಾರತ ಸಿಡಿದೆದ್ದಾಗಲೆಲ್ಲಾ ಭಾರತದ ಬೆಂಬಲಕ್ಕೆ ನಿಲ್ಲುತ್ತಿದ್ದ ರಷ್ಯಾ ರಾಯಭಾರಿ.
ನವದೆಹಲಿ, ಜನವರಿ 26: ಭಾರತದಲ್ಲಿ ರಷ್ಯಾದ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಲೆಕ್ಸಾಂಡರ್ ಕಡಾಕಿನ್ (67) ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 2009ರಿಂದ ಅವರು, ಭಾರತದಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಕೆಲ ದಿನಗಳಿಂದಲೂ ಅವರು ಅನಾರೋಗ್ಯ ಪೀಡಿತರಾಗಿದ್ದರು. ಹಾಗಾಗಿ, ಹೆಚ್ಚಿನ ಸಮಯವನ್ನು ವಿಶ್ರಾಂತಿಯಲ್ಲೇ ಕಳೆಯುತ್ತಿದ್ದ ಅವರು ಗುರುವಾರ ಹೃದಯಾಘಾತಕ್ಕೀಡಾಗಿದ್ದಾರೆಂದು ಮೂಲಗಳು ಹೇಳಿವೆ.

ಪಾಕಿಸ್ತಾನದ ಉಗ್ರ ಬೆಂಬಲವನ್ನು ಕಟುವಾಗಿ ಟೀಕಿಸುತ್ತಿದ್ದ ಭಾರತಕ್ಕೆ ಅಲೆಕ್ಸಾಂಡರ್ ಯಾವಾಗಲೂ ಬೆಂಬಲ ಸೂಚಿಸುತ್ತಿದ್ದರು. ಕಳೆದ ವರ್ಷ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯು ಉಗ್ರರ ಅಡಗುದಾಣಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದಾಗಲೂ ಭಾರತದ ನಡೆಯನ್ನು ಸಮರ್ಥಿಸಿದ್ದ ಅವರು, ಉಗ್ರರನ್ನು ಪಾಕಿಸ್ತಾನವೇ ಪೋಷಿಸುತ್ತಿದೆ. ಇದನ್ನು ರಷ್ಯಾ ಖಂಡಿತವಾಗಿಯೂ ಸಹಿಸುವುದಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದರು.
ಇದಲ್ಲದೆ, ಭಾರತೀಯ ಸೇನಾ ಶಕ್ತಿಯ ವೃದ್ಧಿಯ ವಿಚಾರ ಬಂದಾಗಲೆಲ್ಲಾ ಅವರು ರಷ್ಯಾದಿಂದ ಸಿಗಬಹುದಾದ ನೆರವುಗಳ ಬಗ್ಗೆ ಪ್ರಯತ್ನಿಸುತ್ತಿದ್ದರು.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications