ರಷ್ಯಾ ವಿದೇಶಾಂಗ ಸಚಿವರ ಎರಡು ದಿನಗಳ ಭಾರತ ಭೇಟಿ
ನವದೆಹಲಿ, ಏಪ್ರಿಲ್ 5: ರಷ್ಯಾದ ವಿದೇಶಾಂಗ ಸಚಿವ ಸರ್ಜೈ ಲಾವ್ರೊವ್ ಅವರು ದ್ವಿಪಕ್ಷೀಯ ಸಹಕಾರಗಳ ಸಂಬಂಧ ಚರ್ಚೆ ನಡೆಸಲು ಎರಡು ದಿನಗಳ ಭೇಟಿಯಾಗಿ ಸೋಮವಾರ ಭಾರತಕ್ಕೆ ಆಗಮಿಸುತ್ತಿದ್ದಾರೆ. ಭಾರತ ಮತ್ತು ರಷ್ಯಾ ನಡುವೆ ನಡೆಯುವ ವಾರ್ಷಿಕ ಸಮ್ಮೇಳನದ ಕುರಿತು ತಯಾರಿ ನಡೆಸಲು ಈ ಸಭೆ ಬುನಾದಿ ಹಾಕಲಿದೆ ಎನ್ನಲಾಗಿದೆ.
ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಮರಿಯಾ ಝಖಾರೊವಾ ಅವರು ಈ ನಿಗದಿಯ ಭೇಟಿಯ ಬಗ್ಗೆ ಗುರುವಾರ ಮಾಸ್ಕೋದಲ್ಲಿ ಮಾಹಿತಿ ನೀಡಿದ್ದರು. ಲಾವ್ರೋವ್ ಅವರು ಏಪ್ರಿಲ್ 5 ಮತ್ತು 6ರಂದು ನವದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದು, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದ್ದರು.
ಪ್ರತಿ ವರ್ಷ ನಡೆಯುವ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನ ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದ ಕಳೆದ ವರ್ಷ ಮುಂದೂಡಲ್ಪಟ್ಟಿತ್ತು. ಕಳೆದ ಎರಡು ದಶಕಗಳಲ್ಲಿ ಸಮ್ಮೇಳನ ನಡೆಯದೆ ಇರುವುದು ಇದು ಮೊದಲ ಸಲ. ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ದೇಶಗಳು ರಚಿಸಿರುವ 'ಕ್ವಾಡ್' ಒಕ್ಕೂಟದ ಕಾರಣದಿಂದ ಮುನಿಸಿಕೊಂಡಿರುವ ರಷ್ಯಾ, ಈ ಸಮ್ಮೇಳನದಿಂದ ಹಿಂದೆ ಸರಿದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು.

ಚೀನಾ ಪ್ರವಾಸದ ನಂತರ ಲಾವ್ರೋವ್ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದು, ಮಂಗಳವಾರ ಭಾರತದಿಂದ ಎರಡು ದಿನಗಳ ಭೇಟಿಗಾಗಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ.
ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಚೀನಾದ ಉಪಟಳವನ್ನು ಎದುರಿಸಲು ರಚಿಸಿದ ಕ್ವಾಡ್ ಒಕ್ಕೂಟದ ಬಗ್ಗೆ ರಷ್ಯಾ ಆಕ್ಷೇಪ ವ್ಯಕ್ತಪಡಿಸಿತ್ತು. ಪ್ರಾದೇಶಿಕ ಸಹಕಾರದ ತತ್ವಕ್ಕೆ ಈ ಒಕ್ಕೂಟ ಅಪಾಯಕಾರಿಯಾಗಲಿದೆ. ಒಂದು ಪ್ರದೇಶದ ಸಮಸ್ಯೆಗಳ ಚರ್ಚೆ ಹಾಗೂ ಪರಿಹಾರಕ್ಕೆ ಆಯಾ ಭಾಗದ ದೇಶಗಳ ನಡುವೆಯೇ ಮಾತುಕತೆ ನಡೆಯಬೇಕು. ಆದರೆ ಕ್ವಾಡ್ ಏಷ್ಯಾದ ದೇಶಗಳನ್ನು ಹೊರಗಿಟ್ಟಿದೆ ಎಂದು ರಷ್ಯಾ ಟೀಕಿಸಿತ್ತು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications