ಪ್ರದ್ಯುಮ್ನ ಹತ್ಯೆ ಪ್ರಕರಣಕ್ಕೆ ಮತ್ತೆ ಹೊಸ ತಿರುವು!
ಗುರುಗ್ರಾಮ, ನವೆಂಬರ್ 14 : ರಾಯನ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್ ಹತ್ಯೆ ಪ್ರಕರಣಕ್ಕೆ ಮತ್ತೆ ತಿರುವು ಸಿಕ್ಕಿದೆ. ಸಿಬಿಐ ಬಂಧಿಸಿದ್ದ ಬಾಲಾಪರಾಧಿ ತನ್ನ ಹೇಳಿಕೆಯನ್ನು ಬದಲಾಯಿಸಿದ್ದಾನೆ.
ಕೊಲೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು ಎಂದು ಜಿಲ್ಲಾ ಮಕ್ಕಳ ಹಿತರಕ್ಷಣಾ ಸಮಿತಿ, ಸಿಬಿಐ ಅಧಿಕಾರಿಗಳ ಮುಂದೆ ಆತ ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಯೂ ಟರ್ನ್ ಸಿಕ್ಕಿದೆ.

ಕಳೆದ ವಾರ ಬಾಲಾಪರಾಧಿಯನ್ನು ಬಂಧಿಸಿದ್ದ ಸಿಬಿಐ, ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಪ್ರದ್ಯುಮ್ನ ಠಾಕೂರ್ ನನ್ನು ಹತ್ಯೆ ಮಾಡಿರುವುದಾಗಿ ನ್ಯಾಯಾಲಯ ಮುಂದೆ ಆತ ಹೇಳಿಕೆ ನೀಡಿದ್ದ. ಆದರೆ, ಈಗ ಹೇಳಿಕೆ ಹಿಂಪಡೆದಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಪರೀಕ್ಷೆ ಮತ್ತು ಪೋಷಕರ ಸಭೆ ಮುಂದೂಡಲು ಹತ್ಯೆ ಮಾಡಿರುವುದಾಗಿ ಆತ ಹೇಳಿಕೆ ನೀಡಿದ್ದ. ಆದರೆ, ಈಗ ಹೇಳಿಕೆ ವಾಪಸ್ ಪಡೆದಿದ್ದು ಸಿಬಿಐ ತನಿಖೆಗೆ ಹಿನ್ನಡೆ ಉಂಟು ಮಾಡಿದೆ.
ಸಿಬಿಐ ಸೂಕ್ತವಾದ ಸಾಕ್ಷಿಗಳನ್ನು ಒದಗಿಸುವ ತನಕ ನ್ಯಾಯಾಲಯ ಬಾಲಾಪರಾಧಿಯ ಹೇಳಿಕೆಯನ್ನು ಪರಿಗಣನೆ ಮಾಡುವುದಿಲ್ಲ. ಬಾಲಪರಾಧಿಯನ್ನು ಫೋಷಕರು ಸೋಮವಾರ ಭೇಟಿ ಮಾಡಿದ್ದಾರೆ ಎಂಬ ಮಾಹಿತಿಯನ್ನು ಸಿಬಿಐ ಸಂಗ್ರಹಿಸಿದೆ.
ಬಾಲಾಪರಾಧಿಗಳನ್ನು ಸೋಮವಾರ ಭೇಟಿಯಾಗಲು ಅವಕಾಶವಿಲ್ಲ. ಮಂಗಳವಾರ ಮತ್ತು ಶುಕ್ರವಾರ ಮಾತ್ರ ಭೇಟಿ ಮಾಡಬಹುದು. ಆದರೂ ಪೋಷಕರು ಸೋಮವಾರ ಏಕೆ ಭೇಟಿ ಮಾಡಿದರು? ಎಂದು ಸಿಬಿಐ ಮಾಹಿತಿ ಸಂಗ್ರಹಿಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದೆ.
ಸೆಪ್ಟೆಂಬರ್ 8ರಂದು ಬೆಳಗ್ಗೆ ಎಂಟು ಗಂಟೆಗೆ ಶಾಲೆಗೆ ಹೋದೆ. ಸ್ನೇಹಿತನನ್ನು ಭೇಟಿ ಮಾಡಿ ನಂತರ, ಸಂಗೀತ ಶಿಕ್ಷಕರನ್ನು ಭೇಟಿಯಾಗಲು ಹೋದೆ. ಶಿಕ್ಷಕರು ಅಲ್ಲಿ ಇಲ್ಲದ ಕಾರಣ ವಾಶ್ ರೂಂಗೆ ಹೋದೆ. ಅಲ್ಲಿ ರಕ್ತ ಮತ್ತು ಮೃತ ದೇಹ ನೋಡಿ ಓಡಿಬಂದೆ ಎಂದು ಹೇಳಿಕೆ ನೀಡಿದ್ದಾನೆ.
ಸೆ.8ರಂದು ಶಾಲೆಗೆ ತೆರಳಿದ್ದ 2ನೇ ತರಗತಿ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್ ಮೃತದೇಹ ಶಾಲೆಯ ಶೌಚಾಲಯದಲ್ಲಿ ಪತ್ತೆಯಾಗಿತ್ತು. ಮೊದಲು ಈ ಕೊಲೆ ಪ್ರಕರಣದ ತನಿಖೆಗೆ ಹರ್ಯಾಣ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ನಂತರ ತನಿಖೆ ಸಿಬಿಐಗೆ ಹಸ್ತಾಂತರವಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications