25 ದಿನದಲ್ಲಿ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 101 ಕೋಟಿ ರೂ.ಆದಾಯ
ತಿರುವನಂತಪುರ, ಡಿಸೆಂಬರ್ 13 : ಹಿಂದೂ ಪುರಾಣ ಪ್ರಸಿದ್ದ ದೇವಾಲಯ ಕೇರಳದಲ್ಲಿರುವ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಕೋಟ್ಯಾಂತರ ರೂ. ಆದಾಯ ಹರಿದುಬಂದಿದೆ.
ಕಳೆದ ವರ್ಷಕ್ಕಿಂತ ಈ ವರ್ಷ ದೇವಸ್ಥಾನದಕ್ಕೆ ಬರುತ್ತಿರುವ ಆದಾಯಲ್ಲಿ ಅಧಿಕವಾಗಿದೆ. 25 ದಿನಗಳಲ್ಲಿ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಬರೊಬ್ಬರಿ 101 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 86 ಕೋಟಿ ರೂ. ಸಂಗ್ರಹವಾಗಿತ್ತು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಈ ಅವಧಿಯಲ್ಲಿ ಪಾಯಸಂ ಮಾರಾಟದ ಮೂಲಕ 44 ಕೋಟಿ ರೂ. ಮತ್ತು ಹುಂಡಿಗೆ ಭಕ್ತರು ಹಾಕಿದ ಕಾಣಿಕೆಯಿಂದ 35 ಕೋಟಿ ರೂ. ಮತ್ತು ಇತರೆ ಮೂಲಗಳಿಂದ 22 ಕೋಟಿ ರೂ. ಆದಾಯ ಸಂಗ್ರಹವಾಗಿದೆ.
ಅಯ್ಯಪ್ಪ ದೇಗುಲದಲ್ಲಿ 2 ತಿಂಗಳ ಅವಧಿಯಲ್ಲಿ ಉತ್ಸವ ಕಾರ್ಯಕ್ರಮಗಳು ಪ್ರತಿ ವರ್ಷ ನಡೆಯುತ್ತವೆ. ಈ ವರ್ಷ ನವೆಂಬರ್ 16ರಿಂದ ಉತ್ಸವ ಆರಂಭವಾಗಿದ್ದು, ದೇಶದ ಮೂಲೆ-ಮೂಲೆಗಳಿಂದ ಭಕ್ತರು ಅಯ್ಯಪ್ಪನ ದರ್ಶನ ಪಡೆಯುಲು ಕೇರಳದ ಶಬರಿಮಲೆಗೆ ಬರುತ್ತಾರೆ.
ಈ ಬಾರಿಯ ಶಬರಿಮಲೆ ಉತ್ಸವಕ್ಕೆ ಉಗ್ರರ ಭೀತಿ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದರು, ಭಕ್ತರು ಮತ್ತು ಅದ್ಯಾವುದನ್ನು ಲೆಕ್ಕಿಸದೆ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ.
ಶಬರಿಮಲೆ ದೇವಾಲಯದ ವಿರುದ್ಧ ದಿಕ್ಕಿನಲ್ಲಿರುವ ಪೊನ್ನಂಬಲಮೇಡು ಗಿರಿಯಲ್ಲಿ, ಪ್ರತಿವರ್ಷ ಜನವರಿ 14ರಂದು ಅಯ್ಯಪ್ಪ ಸ್ವಾಮಿಗೆ ಸಂಜೆಯ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿಯ ದರ್ಶನವಾಗುತ್ತದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications