Get Updates
Get notified of breaking news, exclusive insights, and must-see stories!

Sabarimala Issues: ಸಮಸ್ಯೆ ಪರಿಹಾರಕ್ಕೆ ಅನುಭವಿಗಳ ನೇಮಕಕ್ಕೆ ಎನ್‌ಎಸ್‌ಎಸ್‌ ಆಗ್ರಹ, ಕಾರ್ಯದರ್ಶಿ ಹೇಳಿದ್ದೇನು?

ಬೆಂಗಳೂರು, ಡಿಸೆಂಬರ್ 14: ಈ ಬಾರಿ ಶಬರಿಮಲೆಯಲ್ಲಿ ಮಾಲಾಧಾರಿಗಳು/ಭಕ್ತರ ಜನಸಂದಣಿ ನಿರ್ವಹಣಾ ಕ್ರಮಗಳ ಬಗ್ಗೆ ಸರ್ಕಾರವು ಸಾರ್ವಜನಿಕರಿಗೆ ಭರವಸೆ ನೀಡಲು ಪ್ರಯತ್ನಿಸುತ್ತಿದೆ. ಈ ಮಧ್ಯೆ ನಾಯರ್ ಸರ್ವೀಸ್ ಸೊಸೈಟಿ (NSS) ಬುಧವಾರ ಪವಿತ್ರ ಶಬರಿಮಲ ಬೆಟ್ಟದ ಇಂದಿನ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದೆ.

ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ನಾಯರ್ ಸರ್ವೀಸ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಜಿ.ಸುಕುಮಾರನ್ ನಾಯರ್ ಅವರು, ಶಬರಿಮಲೆಯಲ್ಲಿನ ಪರಿಸ್ಥಿತಿಯನ್ನು ಪುನಃಸ್ಥಾಪಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Sabarimala Issue: NSS Urge to Govt To Take Immediate Action For Solved the ease Crowding

ಸದ್ಯ ಶಬರಿಮಲೆಯಲ್ಲಿ ದರ್ಶನಕ್ಕೆ ನೂಕು ನುಗ್ಗಲು ಉಂಟಾಗಿದೆ. ಊಟ ನೀರಿಲ್ಲದೇ ಭಕ್ತರು ಪರದಾಡುಂತಾಗಿದೆ. ಕೆಲವರು ದರ್ಶನವಿಲ್ಲದೇ ದಿನಗಟ್ಟಲೆ ಕಾದು ವಾಪಾಸ್ ಮರಳಿದ್ದಾರೆ. ಇಂತಹ ಇನ್ನಿತರ ಸಮಸ್ಯೆಗಳನ್ನು ಪರಿಹರಿಸಲು ಸಮರ್ಥ ಮತ್ತು ಅನುಭವಿ ಅಧಿಕಾರಿಗಳನ್ನು ಸರ್ಕಾರ ಬೆಟ್ಟದಲ್ಲಿ ನಿಯೋಜಿಸುವ ಅಗತ್ಯತೆ ಇದೆ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಸಮರ್ಥ ಅಧಿಕಾರಿಗಳನ್ನು ನೇಮಿಸಿ

ಶಬರಿಮಲೆಗೆ ಸಮರ್ಥ ಮತ್ತು ದಕ್ಷ ಅಧಿಕಾರಿಗಳನ್ನು ನೇಮಿಸುವ ಮೂಲಕ ಭಕ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಬಹುದು ಎಂದು ಅವರು ಕೇರಳ ಸರ್ಕಾರವನ್ನು ಕೇಳಿಕೊಂಡಿದ್ದಾರೆ. ಸರ್ಕಾರ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಮ್ಮ ಹೇಳಿಕೆಯಲ್ಲಿ ಅವರು ಉಲ್ಲೇಖಿಸಿದ್ದಾರೆ.

Sabarimala Issue: NSS Urge to Govt To Take Immediate Action For Solved the ease Crowding

ಯಾವತ್ತು ನಡೆಯದ ಅಸ್ತವೆಸ್ತತೆ ಈ ಬಾರಿ ಶಬರಿಮಲೆಯಲ್ಲಿ ನಡೆದಿದೆ. ಈ ವಿಚಾರ ಭಾರಿ ಸದ್ದು ಮಾಡುತ್ತಿದೆ. ಅಸ್ತವ್ಯಸ್ತವಾಗಿರುವ ಪರಿಸ್ಥಿತಿಗೆ ಅಧಿಕಾರಿಗಳ ದುರಾಡಳಿತವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

18 ಮೆಟ್ಟಿಲು ಏರುವಲ್ಲಿ ಅತ್ಯಧಿಕ ದಟ್ಟಣೆ

ಸದ್ಯದ ಪರಿಸ್ಥಿತಿಯಲ್ಲಿ ಅಯ್ಯಪ್ಪನ ದರ್ಶನ, ಪೂಜೆ ಪುನಸ್ಕಾರಗಳಿಗಾಗಿ ಪವಿತ್ರ 18 ಮೆಟ್ಟಿಲುಗಳನ್ನು ಏರುವ ಯಾತ್ರಿಕರ ಹರಿವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ಹಿಂದಿನ ವರ್ಷಗಳಲ್ಲಿ ಪ್ರತಿ ನಿಮಿಷಕ್ಕೆ ಸರಿಸುಮಾರು 90 ಯಾತ್ರಿಕರು ಈ ಮೆಟ್ಟಿಲು ಏರಲು ಸಾಧ್ಯವಾಗುತ್ತಿತ್ತು. ಆದರೆ ಈಗ ಈ ಸಂಖ್ಯೆ ಪ್ರತಿ ನಿಮಿಷಕ್ಕೆ 50-60 ಯಾತ್ರಿಗಳಿಗೆ ಮಾತ್ರ ಸಾಧ್ಯವಾಗುತ್ತಿದೆ. ಅಷ್ಟರ ಮಟ್ಟಿನ ಪರಿಸ್ಥಿತಿ ಅಲ್ಲಿದೆ ಎಂದು ಅವರು ವಿವರಿಸಿದರು.

ಯಾತ್ರಾರ್ಥಿಗಳಿಗೆ ಪಂಪಾ ತಲುಪಲು KSRTC ಬಸ್‌ಗಳನ್ನು ಅವಲಂಬಿಸುವಂತೆ ಮಾಡಿದ್ದಾರೆ. ಈ ಬಸ್‌ಗಳು ಆಗಾಗ್ಗೆ ಕಿಕ್ಕಿರಿದು ತುಂಬಿರುತ್ತವೆ ಅಲ್ಲದೇ ಯಾತ್ರಾರ್ಥಿಗಳ ಮೇಲೆ ದುಬಾರಿ ಶುಲ್ಕವನ್ನು ವಿಧಿಸುತ್ತವೆ. ಸಾಕಷ್ಟು ಸಂಖ್ಯೆಯ ಬಸ್‌ಗಳ ಕೊರತೆಯೂ ನೀಲಕಲ್‌ನಲ್ಲಿ ದಟ್ಟಣೆಗೆ ಕಾರಣವಾಗಿದೆ.

ಪಾರ್ಕಿಂಗ್ ವ್ಯವಸ್ಥೆ ಇಲ್ಲ: ಭಕ್ತರಿಗೆ ಮೂಲಸೌಕರ್ಯ ಸಿಗುತ್ತಿಲ್ಲ

ಇನ್ನೂ ಪಂಪಾ ಸೇರಿದಂತೆ ಬೆಟ್ಟದಲ್ಲಿ ವಾಹನಗಳಿಗೆ ಸೂಕ್ತ ನಿಲುಗಡೆಗೆ ವ್ಯವಸ್ಥೆ ಇಲ್ಲದಾಗಿದೆ. ಈ ಕಾರಣದಿಂದಲೇ ಅನೇಕ ವಾಹನಗಳು ಮಾರ್ಗಮಧ್ಯೆದಲ್ಲಿಯೇ ನಿಲ್ಲುವ ಅನಿವಾರ್ಯತೆ ಎದುರಾಗಿದೆ. ಇಲ್ಲಿ ಮಕ್ಕಳು ಸೇರಿದಂತೆ ಭಕ್ತರು ಕನಿಷ್ಠ ಮೂಲಭೂತ ಸೌಕರ್ಯಗಳು ಸಿಗದೇ ಪರಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಪಂಪಾದಲ್ಲಿ ಸಣ್ಣ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯಗಳನ್ನು ಸ್ಥಾಪಿಸುವುದು ನಿರ್ಣಾಯಕ ಪಾತ್ರ ವಹಿಸುತ್ತದೆ. ಕಾರಣ ಇದು ವಾಹನ ದಟ್ಟಣೆ ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಈ ಬಾರಿ ಇದು ಸಹ ಸಾಧ್ಯವಾಗಿಲ್ಲ. ಆದ್ದರಿಂದ ಹಾಲಿ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ತರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಪುನರುಚ್ಚರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+