Sabarimala: ಸಂಜೆ 6.43ಕ್ಕೆ ಮಕರ ಜ್ಯೋತಿ ಕಣ್ತುಂಬಿಕೊಂಡ ಅಯ್ಯಪ್ಪನ ಭಕ್ತರು, ಇಲ್ಲಿದೆ ವಿಡಿಯೊ
ಶಬರಿಮಲೆ: ಕೇರಳದ ಶಬರಿಮಲೆಯಲ್ಲಿ ಕಳೆದೊಂದು ದಿನದಿಂದ ಕಾದು ಕುಳಿತಿದ್ದ ಲಕ್ಷಾಂತರ ಭಕ್ತರಿಗೆ ಇಂದು ಮಕರ ಸಂಕ್ರಾಂತಿಯಂದು (ಜನವರಿ 14) ಶಬರಿಮಲೆ ಮಕರ ಜ್ಯೋತಿ (Sabaraimale Makara Jyothi 2026) ದರ್ಶನವಾಯಿತು. ಸಂಜೆ 6.43 ರಿಂದ 6.46ರವರೆಗೆ ಜ್ಯೋತಿ ರೂಪದಲ್ಲಿ ಅಯ್ಯಪ್ಪನನ್ನು ಕಂಡು ದೇವಸ್ಥಾನ ಬಳಿ ನೆರೆದಿದ್ದ ಮಾಲಾಧಾರಿಗಳು ಪುನೀತರಾದರು.
2026 ವರ್ಷದ ಮೊದಲ ಹಬ್ಬ ಈ ಮಕರ ಸಂಕ್ರಾಂತಿ. ಕರ್ನಾಟಕ ಸೇರಿದಂತೆ ಬೇರೆ ಬೇರೆ ಭಾಗದ ಮಾಲಾಧಾರಿಗಳು ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳಿದ್ದರು. ಬುಧವಾರ ಬೆಳಗ್ಗೆಯಿಂದ ವಿಶೇಷ ಪೂಜೆಯಲ್ಲಿ ನಿರತರಾಗಿದ್ದರು. ಇಂದು ಸಂಕ್ರಾಂತಿ ದಿವಸ ಅಯ್ಯಪ್ಪನ ದೇಗುಲದ ಮುಂದೆ ಪೊನ್ನಮೇಡುವಿನಲ್ಲಿ ಜ್ಯೋತಿಯ ದಿವ್ಯ ದರ್ಶನವಾಯಿತು. ಅಯ್ಯಪ್ಪ ಸ್ವಾಮೀಯ ಗೀತೆಯೊಂದಿಗೆ ಭಕ್ತರು ದೇವರ ಗುಣಗಾನ ಮಾಡಿದರು.

ಮಕರ ಸಂಕ್ರಾಂತಿ ಪ್ರಯುಕ್ತ ಬುಧವಾರ ಶಬರಿಮಲೆ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಪುನಃಸ್ಕಾರಗಳು ಜರುಗಿದವು. ಅಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹಿಂದಿನಿಂದಲೂ ಪಂದಳ ರಾಜಮನೆತನದ ಆಭರಣಗಳನ್ನು ತಂದು ಸ್ವಾಮಿಗೆ ಹಾಕಿ ಅಲಂಕಾರ ಮಾಡಲಾಗುತ್ತದೆ. ಅದನ್ನು ಈ ವರ್ಷವು ಮಾಡಿ, ಲಕ್ಷಾಂತರ ಭಕ್ತ ಗಣ ಸಮೂಹದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಹಾಮಂಗಳಾರತಿ ಮಾಡಲಾಯಿತು. ನಂತರ ಸಂಜೆಯು ವಿಶೇಷ ಪೂಜೆ ನಡೆದ ಬೆನ್ನಲ್ಲೆ ಪೊನ್ನಮೇಡುವಿನಲ್ಲಿ ಜ್ಯೋತಿ ಕಾಣಿಸಿತು.
ಶಬರಿಮಲೆ ದೇವಸ್ಥಾನದಲ್ಲಿ ಈ ವರ್ಷ ಜನದಟ್ಟಣೆ ಹೆಚ್ಚಾಗುವ ನಿರೀಕ್ಷೆ ಇತ್ತು. ಹೀಗಾಗಿ 1000 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದಿಂದ 60 ಕಿಲೋ ಮೀಟರ್ ದೂರದಲ್ಲಿ ಎರುಮಲೈ ಪ್ರದೇಶದಲ್ಲಿ ಭಕ್ತರ ವಾಹನಗಳಿಗೆ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಭಕ್ತರು ಕೇರಳ ಸರ್ಕಾರ ನಿಯೋಜಿಸಿದ್ದ ಬಸ್ಗಳಲ್ಲಿ ಗಿರಿಗೆ ತೆರಳಬೇಕಿತ್ತು. ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಒದಗಿಸಲಾಗಿತ್ತು.
ಭಕ್ತರಿಗೆ ಅನಾನುಕೂಲವಾಗದಂತೆ ಅಗತ್ಯ ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇದರ ನಡುವೆ ದೂರದ ಪ್ರದೇಶದಲ್ಲಿ ವಾಹನ ನಿಲುಗಡೆ ಮಾಡುವಂತೆ ಪೊಲೀಸರು ತಡೆ ನೀಡಿದ್ದಕ್ಕೆ ಕರ್ನಾಟಕದ ಚಿಕ್ಕಮಗಳೂರಿನ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಮಕರ ಸಂಕ್ರಾಂತಿ ಜ್ಯೋತಿ ದರ್ಶನಕ್ಕೆಂದೆ ಮಂಗಳವಾರ (ಜನವರಿ 13) ಸಂಜೆ ಹೊತ್ತಿಗೆ ಕರ್ನಾಟಕದ 5000 ಸಾವಿರ ಭಕ್ತರು ಶಬರಿಮಲೆ ತಲುಪಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications