Sabarimala pilgrimage: ಶಬರಿಮಲೆ ಯಾತ್ರಿಗಳ ಗಮನಕ್ಕೆ- ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಈ ನಿಲ್ದಾಣದಲ್ಲಿ ನಿಲುಗಡೆ, ಮಾಹಿತಿ,
ತಿರುವನಂತಪುರಂ, ಅಕ್ಟೋಬರ್ 20: ಮುಂಬರುವ ಶಬರಿಮಲೆ ಯಾತ್ರೆಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಶಬರಿಮಲೆ ಸಮೀಪದ ಚೆಂಗನ್ನೂರಿನಲ್ಲಿ ಕಾಸರಗೋಡು-ತಿರುವನಂತಪುರಂ ವಂದೇ ಭಾರತ್ ರೈಲನ್ನು ನಿಲ್ಲಿಸಲು ಭಾರತೀಯ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಇಲಾಖೆಯಿಂದ ದಕ್ಷಿಣ ರೈಲ್ವೇಗೆ ಅಧಿಸೂಚನೆ ಕಳುಹಿಸಲಾಗಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ರಾಜ್ಯ ರೈಲ್ವೆ ಸಚಿವ ಮತ್ತು ಬಿಜೆಪಿ ನಾಯಕ ವಿ ಮುರಳೀಧರನ್ ಅಧಿಸೂಚನೆಯನ್ನು ಪೋಸ್ಟ್ ಮಾಡಿದ್ದಾರೆ.

ಅಧಿಸೂಚನೆಯ ಪ್ರಕಾರ, ಚೆಂಗನ್ನೂರಿನಲ್ಲಿ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಗುತ್ತದೆ. ಟಿಕೆಟ್ಗಳ ಮಾರಾಟದ ಮೇಲೆ ತೀವ್ರ ನಿಗಾ ಇರಿಸಲಾಗುತ್ತದೆ.
ಸೆಪ್ಟೆಂಬರ್ನಲ್ಲಿ ಮುರಳೀಧರನ್ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಚೆಂಗನ್ನೂರು ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
'ಚೆಂಗನ್ನೂರ್ ರೈಲು ನಿಲ್ದಾಣವು ಪ್ರಾಥಮಿಕವಾಗಿ ನಾಲ್ಕು ಜಿಲ್ಲೆಗಳಿಗೆ ಅವಕಾಶ ಕಲ್ಪಿಸುತ್ತದೆ. ಅಲಪ್ಪುಳ, ಕೊಲ್ಲಂ, ಪತ್ತನಂತಿಟ್ಟ ಮತ್ತು ಕೊಟ್ಟಾಯಂಗೆ ಇದು ಸೇವೆ ಸಲ್ಲಿಸುತ್ತದೆ. 2009 ರಲ್ಲಿ ಚೆಂಗನ್ನೂರ್ ರೈಲು ನಿಲ್ದಾಣವನ್ನು 'ಗೇಟ್ವೇ ಆಫ್ ಶಬರಿಮಲೆ' ಎಂದು ಭಾರತೀಯ ರೈಲ್ವೆ ಘೋಷಿಸಿದೆ.

ಶಬರಿಮಲೆಯು ಭಗವಾನ್ ಅಯ್ಯಪ್ಪನ ಪವಿತ್ರ ವಾಸಸ್ಥಾನವಾಗಿದೆ. ಇದು ದೇಶದ ಪ್ರಮುಖ ಹಿಂದೂ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ ಎಂದು ಮುರುಳಿದರನ್ ಅವರು ಪತ್ರದಲ್ಲಿ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಚೆಂಗನ್ನೂರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ನಿಲ್ಲಿಸಲು ಮನವಿ ಮಾಡಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಅಯ್ಯಪ್ಪ ದೇವರ ಭಕ್ತರಿಗೆ ಒಳ್ಳೆಯ ಸುದ್ದಿ. ವಿನಂತಿಯನ್ನು ಪರಿಗಣಿಸಿ ಕಾಸರಗೋಡಿಗೆ ಅನುಕೂಲ ಕಲ್ಪಿಸಿದ್ದಕ್ಕಾಗಿ ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವ ಅಶ್ವೀನಿ ವೈಷ್ಣವ್ ಅವರಿಗೆ ಧನ್ಯವಾದಗಳು. ಶಬರಿಮಲೆಯ ಹೆಬ್ಬಾಗಿಲು ಎಂದು ಕರೆಯಲ್ಪಡುವ ಚೆಂಗನ್ನೂರಿನಲ್ಲಿ ವಂದೇ ಭಾರತ್ ರೈಲು ನಿಲುಗಡೆಯಾಗಲಿದೆ' ಎಂದು ಮುರಳೀಧರನ್ 'ಎಕ್ಸ್' ನಲ್ಲಿ ಬರೆದುಕೊಂಡಿದ್ದಾರೆ.
ಹೊಸ ನಿಲ್ದಾಣವು ಶಬರಿಮಲೆ ಯಾತ್ರಾರ್ಥಿಗಳಿಗೆ ಭಾರೀ ಅನುಕಲು ಮಾಡಿಕೊಡಲಿದೆ. ಆಲಪ್ಪುಳ, ಕೊಲ್ಲಂ, ಪತ್ತನಂತಿಟ್ಟ ಮತ್ತು ಕೊಟ್ಟಾಯಂನ ಜನರ ಪ್ರಯಾಣವನ್ನು ಸುಗಮಗೊಳಿಸುತ್ತದೆ ಎಂದು ಮುರಳೀಧರನ್ ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇರಳದ ಜನರ ಕಲ್ಯಾಣಕ್ಕಾಗಿ ಹೊಂದಿರುವ ಕಾಳಜಿಯನ್ನು ಈ ನಿರ್ಧಾರವು ಪ್ರತಿಬಿಂಬಿಸುತ್ತದೆ ಎಂದು ಬರೆಕೊಂಡಿದ್ದಾರೆ.

ಹೊಸ ನಿಲ್ದಾಣದ ಪರಿಚಯದೊಂದಿಗೆ ವಂದೇ ಭಾರತ್ ಎಕ್ಸ್ಪ್ರೆಸ್ನ ಸಮಯ ಬದಲಾಗುತ್ತದೆ. ಶಬರಿಮಲೆಯ ವಾರ್ಷಿಕ ಮಂಡಲ-ಮಕರವಿಳಕ್ಕು ಋತುವು ನವೆಂಬರ್ 17 ರಂದು ಪ್ರಾರಂಭವಾಗುತ್ತದೆ.
-
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications