Sabarimala:ನೆಚ್ಚಿನ ನಟರು, ರಾಜಕಾರಣಿಗಳ ಫೋಟೋ ತೆಗೆದುಕೊಂಡು ಹೋದರೆ ಶಬರಿಮಲೆಗೆ ಪ್ರವೇಶವಿಲ್ಲ: ಕೇರಳ ಹೈಕೋರ್ಟ್
ತಿರುವನಂತಪುರಂ, ಜ. 09 : ಅಯ್ಯಪ್ಪನ ದರ್ಶನಕ್ಕೆ ಹೋಗುವವರು ತಮ್ಮ ಜೊತೆಗೆ ನೆಚ್ಚಿನ ನಟ, ರಾಜಕಾರಣಿ ಅಥವಾ ಸೆಲಬ್ರಿಟಿಯ ಚಿತ್ರಗಳನ್ನು ತೆಗೆದುಕೊಂಡು ಹೋಗುವುದು ಇತ್ತಿಚಿನ ಟ್ರೆಂಡ್ ಆಗಿದೆ. ಇದಕ್ಕೆ ಕೇರಳ ಹೈಕೋರ್ಟ್ ಬ್ರೇಕ್ ಹಾಕಿದೆ.
ಶಬರಿಮಲೆ ಸನ್ನಿಧಾನಂ ಪ್ರವೇಶಿಸುವ ಯಾತ್ರಾರ್ಥಿಗಳು ಚಲನಚಿತ್ರ ತಾರೆಯರು, ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್ಗಳು ಮತ್ತು ದೊಡ್ಡ ಛಾಯಾಚಿತ್ರಗಳನ್ನು ಹೊಂದಿದ್ದರೆ ಅವರಿಗೆ ಪ್ರವೇಶ ನಿರಾಕರಿಸಲಾಗುವುದು ಎಂದು ಕೇರಳ ಹೈಕೋರ್ಟ್ ಸೋಮವಾರ ತೀರ್ಪು ನೀಡಿದೆ.
ಇತ್ತಿಚೆಗೆ ನಟ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಗಳನ್ನು ಹಲವು ಯಾತ್ರೆಗಳು ಶಬರಿಮಲೆಗೆ ಹೋಗುವಾಗ ತೆಗೆದುಕೊಂಡು ಹೋದ ಉದಾಹರಣೆಗಳಿವೆ. ಇನ್ನು ಮುಂದೆ ಹೀಗೆ ಪೋಟೋಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲ.

ಈ ಕುರಿತು ಶಬರಿಮಲೆ ಯಾತ್ರಾರ್ಥಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ನಡೆಸಿದ ಕೇರಳ ನ್ಯಾಯಾಲಯವು, ಶಬರಿಮಲೆಯಲ್ಲಿ ದೇವಸ್ಥಾನದ ಅಭ್ಯಾಸ ಮತ್ತು ಸಂಪ್ರದಾಯಕ್ಕೆ ಅನುಗುಣವಾಗಿ ಅಯ್ಯಪ್ಪ ಸ್ವಾಮಿಯ ಭಕ್ತರು ತಮ್ಮ ಪೂಜೆಯ ಹಕ್ಕನ್ನು ಚಲಾಯಿಸಲು ಅನುವು ಮಾಡಿಕೊಡಬೇಕು ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಗೆ ಸೂಚಿಸಿದೆ.
"ಯಾವುದೇ ಯಾತ್ರಾರ್ಥಿಗಳು ಶಬರಿಮಲೆ ಸನ್ನಿಧಾನಕ್ಕೆ ಪಥಿನೆಟ್ಟಂಪಾಡಿ ಮೂಲಕ ಅಥವಾ ಶಬರಿಮಲೆ ಸನ್ನಿಧಾನಂನ ಸೋಪಾನಂನ ಮುಂದೆ ದರ್ಶನ ಪಡೆಯಲು, ನಟರು, ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್ಗಳು ಅಥವಾ ಬೃಹತ್ ಛಾಯಾಚಿತ್ರಗಳನ್ನು ತೆಗೆದುಕೊಂಡು ಬಂದಿದ್ದರೇ ಅವರಿಗೆ ಸನ್ನಿಧಾನಕ್ಕೆ ಪ್ರವೇಶ ಅನುಮತಿಸಲಾಗುವುದಿಲ್ಲ" ಎಂದು ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿಜಿ ಅಜಿತ್ಕುಮಾರ್ ಅವರ ವಿಭಾಗೀಯ ಪೀಠವು ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಶಬರಿಮಲೆಯಲ್ಲಿನ ಆಚರಣೆ ಮತ್ತು ಸಂಪ್ರದಾಯಕ್ಕೆ ಒಳಪಟ್ಟು ಒಗ್ಗಿಕೊಂಡಿರುವ ರೀತಿಯಲ್ಲಿ ಪೂಜೆ ಮಾಡುವ ಹಕ್ಕನ್ನು ಚಲಾಯಿಸುವುದು ಭಕ್ತರ ಕರ್ತವ್ಯ ಎಂದು ಸಜೀವ್ ಶಾಸ್ತ್ರಾಂ ವರ್ಸಸ್ ಸ್ಟೇಟ್ ಆಫ್ ಕೇರಳ ಮತ್ತು ಇತರರ ಹಿಂದಿನ ಆದೇಶವನ್ನು ನ್ಯಾಯಾಲಯ ಮತ್ತೊಮ್ಮೆ ಉಲ್ಲೇಖಿಸಿದೆ.
ಅರ್ಜಿ ವಿಚಾರಣೆಯ ಸಂದರ್ಭದಲ್ಲಿ, ಶಬರಿಮಲೆ ಸನ್ನಿಧಾನಂನ ಸೋಪಾನಂ ಮುಂದೆ ಡ್ರಮ್ಮರ್ ಶಿವಮಣಿ ಅವರ ಕಾರ್ಯಕ್ರಮದ ಕುರಿತು ಮಾಧ್ಯಮ ವರದಿಯನ್ನು ಗಮನಿಸಿದ ಪೀಠವು, ದೇವಸ್ಥಾನದಲ್ಲಿ ಡ್ರಮ್ ಅಥವಾ ಇತರ ರೀತಿಯ ವಾದ್ಯಗಳನ್ನು ನುಡಿಸುವುದನ್ನು ನಿರ್ಬಂಧಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications