Sabarimala: ಶಬರಿಮಲೆ ಭಕ್ತರೇ ಗಮನಿಸಿ: ಈ ದಿನ ಸ್ಪಾಟ್ ಬುಕ್ಕಿಂಗ್ ದರ್ಶನಕ್ಕೆ ಅವಕಾಶವಿಲ್ಲ!
ಶಬರಿಮಲೆ ಜನವರಿ 2: ಶಬರಿಮಲೆಯಲ್ಲಿ ಭಕ್ತರಿಗೆ ಸುಗಮ ಹಾಗೂ ಸುರಕ್ಷಿತ ದರ್ಶನ ಸೌಲಭ್ಯ ಕಲ್ಪಿಸಲು ಇದೇ ಜನವರಿ 10ರಿಂದ ಸ್ಪಾಟ್ ಬುಕ್ಕಿಂಗ್ ಸೌಲಭ್ಯ ಇರುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. 14 ರಂದು ವರ್ಚುವಲ್ ಕ್ಯೂ ಬುಕಿಂಗ್ ಮಿತಿಯನ್ನು 50000 ಮತ್ತು ಮಕರ ಜ್ಯೋತಿ ದಿನದಂದು 40,000ಕ್ಕೆ ಸೀಮಿತಗೊಳಿಸಲಾಗಿದೆ.
ಭಕ್ತರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ತಪ್ಪಿಸಲು ನಿರ್ಧರಿಸಲಾಗಿದೆ. ಸಾಮಾನ್ಯವಾಗಿ ಮಕರವಿಳಕಕ್ಕೆ ಮೂರು ದಿನ ಮುಂಚಿತವಾಗಿ ದರ್ಶನಕ್ಕೆ ಆಗಮಿಸುವ ಅಯ್ಯಪ್ಪ ಭಕ್ತರು ಮಕರವಿಳಕ್ ಮತ್ತು ತಿರುವಾಭರಣ ದರ್ಶನಕ್ಕಾಗಿ ಸನ್ನಿಧಾನದಿಂದ ಹೊರಡದೆ ಶಬರಿಮಲೆಯ ವಿವಿಧ ಸ್ಥಳಗಳಲ್ಲಿ ಬಿಡಾರ ಹೂಡುತ್ತಾರೆ.

ಹೀಗೆ ಹೆಚ್ಚಿನ ಭಕ್ತರು ಅಯ್ಯಪ್ಪನ ದರ್ಶನಕ್ಕೆ ಬೆಟ್ಟ ಹತ್ತಿದರೆ ಭದ್ರತೆ ಹಾಗೂ ಸುಗಮ ದರ್ಶನ ಸೌಲಭ್ಯದ ಮೇಲೆ ಪರಿಣಾಮ ಬೀರಲಿದೆ. ಶಬರಿಮಲೆಗೆ ಬರುವ ಅಯ್ಯಪ್ಪ ಭಕ್ತರಿಗೆ ಸುರಕ್ಷಿತ ದರ್ಶನ ನೀಡುವ ನಿಟ್ಟಿನಲ್ಲಿ ಸ್ಪಾಟ್ ಬುಕ್ಕಿಂಗ್ ತಪ್ಪಿಸಲು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಮಾಹಿತಿ ನೀಡಿದರು.
14 ರಂದು ವರ್ಚುವಲ್ ಕ್ಯೂ ಬುಕಿಂಗ್ ಮಿತಿ 50,000 ಆಗಿದೆ. ಜನವರಿ 15 ಮಕರ ಜ್ಯೀತಿ ದರ್ಶನದ ದಿನದಂದು ಕೇವಲ 40,000 ಜನರು ಮಾತ್ರ ವರ್ಚುವಲ್ ಸರತಿ ಸಾಲಿನಲ್ಲಿ ಕಾಯ್ದಿರಿಸಬಹುದು. ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನವನ್ನು ತಲುಪಬಹುದು. 14 ಮತ್ತು 15 ರಂದು ಅಪಾರ ಸಂಖ್ಯೆಯ ಭಕ್ತರ ನೂಕುನುಗ್ಗಲು ಇರುವುದರಿಂದ ಆ ದಿನಗಳಲ್ಲಿ ಶಬರಿಮಲೆ ದರ್ಶನವನ್ನು ತಪ್ಪಿಸುವಂತೆ ಹಿರಿಯರಿಗೆ ಮತ್ತು ಮಕ್ಕಳಿಗೆ ಸೂಚಿಸಲಾಗಿದೆ.
ಈ ಸಮಯ ಬಿಟ್ಟರೆ ಭಕ್ತರು ನಿರಾಸೆಗೊಳ್ಳಬೇಕಾಗಿಲ್ಲ. ಮಕರ ಜ್ಯೋತಿ ದಿನ ಹೊರತು ಪಡೆಸಿ 16ರಿಂದ 20ರವರೆಗೆ ಹೆಚ್ಚಿನ ಭಕ್ತರಿಗೆ ಅಯ್ಯಪ್ಪನ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ದೇವಸ್ವಂ ಮಂಡಳಿ ಅಧ್ಯಕ್ಷ ಪರಂಜ್ ತಿಳಿಸಿದ್ದಾರೆ. ಶಬರಿಮಲೆ ದರ್ಶನಕ್ಕೆ ಆಗಮಿಸುವ ಅಯ್ಯಪ್ಪ ಭಕ್ತರಿಗೆ ವರ್ಚುವಲ್ ಕ್ಯೂ ಬುಕ್ಕಿಂಗ್ ಟಿಕೆಟ್ ಕಡ್ಡಾಯ ಎಂದು ದೇವಸ್ವಂಬೋರ್ಡ್ ಹೇಳಿದೆ.
ಹೊಸ ವರ್ಷದ ಬೆನ್ನಲ್ಲೆ ಭಕ್ತರ ದಂಡು
ಹೊಸ ವರ್ಷಾಚರಣೆಯ ಸಂಭ್ರಮದಲ್ಲಿ ಇಡೀ ದೇಶವೇ ಮುಳುಗಿದೆ. ಇದರಿಂದಾಗಿ ಶಬರಿಮಲೆ ದೇವಸ್ಥಾನಕ್ಕೆ ಜನಸಾಗರವೇ ಹರಿದು ಬಂದಿತ್ತು. ಹೊಸ ವರ್ಷವನ್ನು ಅಯ್ಯಪ್ಪ ಸ್ವಾಮಿಯ ದರ್ಶನದ ಮೂಲಕ ಆರಂಭಿಸಲು ಭಕ್ತರು ಶಬರಿಮಲೆಯಕ್ಕೆ ತೆರಳುತಿದ್ದಾರೆ.
ಅಯ್ಯಪ್ಪ ಸ್ವಾಮಿಯ ಆಶೀರ್ವಾದ ಪಡೆಯಲು ಜನರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಸಾಮಾನ್ಯವಾಗಿವೆ. 18 ಮೆಟ್ಟಿಲುಗಳನ್ನು ಹತ್ತಲು ಸಾಕಷ್ಟು ಜನಸಂದಣಿ ಕಂಡು ಬಂದಿದೆ. ಹೊಸ ವರ್ಷದಂದು ಬೆಳಿಗ್ಗೆ 10:00 ರಿಂದ 12:00 ಗಂಟೆಗಳವರೆಗೆ ಭಕ್ತರು ಕೆಳಗೆ ನಿಂತು ಅಯ್ಯಪ್ಪನ ದರ್ಶನ ಪಡೆದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications