Sabarimala: ಮಂಡಲ ಪೂಜೆಯ ನಂತರ ಮುಚ್ಚಲಾಗಿದ್ದ ಶಬರಿಮಲೆ ದೇವಸ್ಥಾನ ಮತ್ತೆ ಓಪನ್
ಮಂಡಲ ಪೂಜೆಯ ನಂತರ ಬುಧವಾರ ತಡರಾತ್ರಿ ಮುಚ್ಚಲಾಗಿದ್ದ ಅಯ್ಯಪ್ಪ ದೇಗುಲವನ್ನು ಮಕರವಿಳಕ್ಕು ಮಹೋತ್ಸವಕ್ಕಾಗಿ ಡಿಸೆಂಬರ್ 30 ರಂದು ಸಂಜೆ ಮತ್ತೆ ತೆರೆಯಲಾಗುವುದು ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.
ಜನವರಿ 15 ರಂದು ನಡೆಯುವ ಮಕರವಿಳಕ್ಕು ಉತ್ಸವದ ಪೂರ್ವಭಾವಿಯಾಗಿ ಜನವರಿ 13 ಮತ್ತು 14 ರಂದು "ಪ್ರಸಾದ ಶುದ್ಧ ಕ್ರಿಯೆ" ಮತ್ತು "ಬಿಂಬ ಶುದ್ಧ ಕ್ರಿಯೆ" ಸೇರಿದಂತೆ ವಿವಿಧ ಆಚರಣೆಗಳು ನಡೆಯಲಿವೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮಕರವಿಳಕ್ಕು ದಿನದಂದು ಸನ್ನಿಧಾನಂನಲ್ಲಿ (ದೇವಾಲಯ ಸಂಕೀರ್ಣ) "ತಿರುವಾಭರಣಂ" ಸ್ವಾಗತ ಮತ್ತು ಆಭರಣಗಳಿಂದ ಅಯ್ಯಪ್ಪ ಮೂರ್ತಿಯನ್ನು ಅಲಂಕರಿಸುವ "ದೀಪಾರಾಧನೆ" ಯನ್ನು ಭಕ್ತರು ವೀಕ್ಷಿಸುತ್ತಾರೆ. ಮಕರವಿಳಕ್ಕು ದರ್ಶನದ ನಂತರ, ಯಾತ್ರಾರ್ಥಿಗಳಿಗೆ ಪ್ರಾರ್ಥನೆ ಸಲ್ಲಿಸಲು ಬೆಟ್ಟದ ದೇವಾಲಯವು ಜನವರಿ 20 ರವರೆಗೆ ತೆರೆದಿರುತ್ತದೆ ಎಂದು ಟಿಡಿಬಿ ಪ್ರಕಟಣೆ ತಿಳಿಸಿದೆ.
ಮಂಡಲ ಪೂಜೆ
ಬೆಟ್ಟದ ದೇಗುಲದಲ್ಲಿ ಮಂಡಲ ಪೂಜೆಯ ವೇಳೆ ಸಾವಿರಾರು ಯಾತ್ರಾರ್ಥಿಗಳು ಬುಧವಾರ ಅಯ್ಯಪ್ಪ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮಂಗಳವಾರ ಸಂಜೆ ವಿಧ್ಯುಕ್ತ ಮೆರವಣಿಗೆಯಲ್ಲಿ ದೇವಾಲಯಕ್ಕೆ ತರಲಾದ ಪವಿತ್ರ ಚಿನ್ನದ ವಸ್ತ್ರದಿಂದ ಪ್ರಧಾನ ದೇವರಾದ ಅಯ್ಯಪ್ಪ ದೇವರ ವಿಗ್ರಹವನ್ನು ಅಲಂಕರಿಸಿ ಪೂಜೆಯನ್ನು ನೆರವೇರಿಸಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಮಹೇಶ್ ಮೋಹನರು ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು, ಅವರು ಮೂರ್ತಿಯನ್ನು ಪವಿತ್ರ ವಸ್ತ್ರದಿಂದ ಅಲಂಕರಿಸಿದರು. ಈ ಸಂದರ್ಭದಲ್ಲಿ 'ಕಲಭಂಹಿಷೇಕ' ಮತ್ತು 'ಕಲಶಾಭಿಷೇಕ' ಸೇರಿದಂತೆ ವಿಶೇಷ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು.
ಶಬರಿಮಲೆ ಯಾತ್ರೆ
ಶಬರಿಮಲೆ ಋತು ಆರಂಭವಾಗಿದೆ. ಈ ದಿನಗಳಲ್ಲಿ ಅಯ್ಯಪ್ಪನ ದರ್ಶನ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಕಾರ್ತಿಕ ಮಾಸ ಆರಂಭವಾಗುತ್ತಿದ್ದಂತೆ ಅಯ್ಯಪ್ಪ ಭಕ್ತರು ಮಾಲೆ ಧರಿಸಿ ಉಪವಾಸ ಆರಂಭಿಸುತ್ತಾರೆ. ಇದರಿಂದ ಶಬರಿಮಲೆ ದೇಗುಲ ತೆರೆಯಲಾಗಿದ್ದು, ನಿತ್ಯ ಪೂಜೆಗಳು ನಡೆಯುತ್ತಿವೆ. ಸತತ 41 ದಿನಗಳ ಕಾಲ ಪೂಜೆಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ಭಕ್ತರು ಶಬರಿಮಲೆಗೆ ತೆರಳಲು ಆರಂಭಿಸಿದ್ದಾರೆ.
ಅಯ್ಯಪ್ಪಸ್ವಾಮಿ ದರ್ಶನಕ್ಕಾಗಿ ಶಬರಿಮಲೆ ಯಾತ್ರೆ ಕೈಗೊಳ್ಳುವವರು ಕಟ್ಟುನಿಟ್ಟಾದ ಸಂಪ್ರದಾಯವನ್ನು ಹಲವು ದಿನಗಳ ಮೊದಲೇ ಪಾಲಿಸಿಕೊಂಡು ಬರುತ್ತಾರೆ. ಸಾಕಷ್ಟು ಭಕ್ತರು ಮನೆಯಿಂದ ದೂರವುಳಿದು ಸ್ವತ: ಅಡುಗೆ ಮಾಡಿಕೊಳ್ಳುತ್ತಾರೆ. ದುಶ್ಚಟಗಳಿಂದಲೂ ದೂರ ಇರುತ್ತಾರೆ. ಮಡಿಮೈಲಿಗೆಯನ್ನು ಎಚ್ಚರಿಕೆಯಿಂದ ಪಾಲಿಸುತ್ತಾರೆ. ಬಳಿಕ ಕೋಟ್ಯಾನುಕೋಟಿ ಭಕ್ತರು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗುತ್ತಾರೆ.
41 ದಿನ ಕಠಿಣ ವ್ರತವನ್ನು ಮಾಡಿ ಶಬರಿಮಲೆಯಕ್ಕೆ ಭೇಟಿ ನೀಡುವ ಭಕ್ತರು ಈ ಸಮಯದಲ್ಲಿ ಕ್ಷೌರ, ಅಸಭ್ಯ ಭಾಷೆ ಬಳಕೆ, ತಂಬಾಕು ಅಥವಾ ಮದ್ಯ ಸೇವನೆ ಸೇರಿದಂತೆ ದುರ್ವಾಸೆಯಿಂದ ದೂರವಿರುತ್ತಾರೆ. ಭಕ್ತರು ಕಪ್ಪು, ಕೇಸರಿ ಅಥವಾ ಸರಳ ನೀಲಿ ಬಟ್ಟೆಗಳನ್ನು ಧರಿಸುತ್ತಾರೆ. ಹೀಗೆ ಕಟ್ಟುನಿಟ್ಟಾಗಿ ಭಕ್ತರು ನಿಯಮಗಳನ್ನು ಪಾಲಿಸುತ್ತಾರೆ. ಹೀಗಿರುವಾಗ ಹಣದ ಆಸೆಗೆ ಕೆಲ ವ್ಯಾಪಾರಿಗಳು ಕಳಪೆ ಗುಣಮಟ್ಟದ ಆಹಾರ ನೀಡಿ ಭಕ್ತರಿಗೆ ವಂಚಿಸಿದ್ದು ಬೇಸರ ತಂದಿದೆ. ಇದರಿಂದಾಗಿ ಈ ಬಗ್ಗೆ ಭಕ್ತರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications