ಖೋಟಾ ಜಾತಿ ಪ್ರಮಾಣ ಪತ್ರ ನೀಡಿದವರ ಕೆಲಸಕ್ಕೆ ಕುತ್ತು
ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡಿ ಕೆಲಸಕ್ಕೆ ಸೇರಿದವರನ್ನು ಕೆಲಸದಿಂದ ಕಿತ್ತುಹಾಕುವಂತೆ ಕೇಂದ್ರ ಸರ್ಕಾರ ತನ್ನ ಅಧೀನದ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದೆ.
ನವದೆಹಲಿ, ಜೂನ್ 16: ನೌಕರಿ ಗಿಟ್ಟಿಸುವ ಸಲುವಾಗಿ ತಾವು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿದವರೆಂದು ನಕಲಿ ಜಾತಿ ಪ್ರಮಾಣ ಪತ್ರ ನೀಡಿರುವ ಎಲ್ಲಾ ಉದ್ಯೋಗಿಗಳ ಕೆಲಸಕ್ಕೆ ಕುತ್ತು ಬರಲಿದೆ. ಹೀಗೆ, ಖೋಟಾ ಜಾತಿ ಪ್ರಮಾಣ ಪತ್ರ ನೀಡಿ ಕೆಲಸಕ್ಕೆ ಸೇರಿದವರ ಬಗ್ಗೆ ಮಾಹಿತಿ ಸಂಗ್ರಹಿಸಿ ಅಂಥವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕೇಂದ್ರ ಸರ್ಕಾರ ತನ್ನ ಅಧೀನದ ಎಲ್ಲಾ ಇಲಾಖೆಗಳಿಗೆ ಆದೇಶ ಹೊರಡಿಸಿದೆ.
ಇತ್ತೀಚಿನ ವರ್ಷಗಳಲ್ಲಿ ವಿತ್ತೀಯ ಹಾಗೂ ವಿಮಾ ವಲಯದ ಸಂಸ್ಥೆಗಳಲ್ಲಿ, ಇಲಾಖೆಗಳಲ್ಲಿ ನಡೆದಿರುವ ಸುಮಾರು 1,800 ಪರಿಶಿಷ್ಠ ಜಾತಿ, ಪಂಗಡಗಳ ಆಧಾರಿತ ನೇಮಕಾತಿಗಳಲ್ಲಿ ಹಲವಾರು ಅಭ್ಯರ್ಥಿಗಳು ಖೋಟಾ ಜಾತಿ ಪ್ರಮಾಣ ಸಲ್ಲಿಸಿ ಕೆಲಸ ಗಿಟ್ಟಿಸಿಕೊಂಡಿದ್ದಾರೆಂಬ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಈ ಕುರಿತಂತೆ ತನ್ನ ಅಧೀನ ಇಲಾಖೆಗಳಿಗೆ ಸಂದೇಶ ರವಾನಿಸಿರುವ ಕೇಂದ್ರ ಸರ್ಕಾರ, ತಮ್ಮಲ್ಲಿನ ಎಲ್ಲಾ ಉದ್ಯೋಗಿಗಳ ಜಾತಿ ಪ್ರಮಾಣ ಪತ್ರಗಳನ್ನು ಪುನರ್ ಪರಿಶೀಲಿಸಿ ವಿವರಣೆ ಕಳುಹಿಸುವಂತೆ ಸೂಚಿಸಿದೆ.
ಲೋಕಸಭೆಯಲ್ಲೂ ಈ ವಿಚಾರ ಈಗಾಗಲೇ ಪ್ರಸ್ತಾಪವಾಗಿದೆ. ಕೇಂದ್ರ ಸಿಬ್ಬಂದಿ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು, ಈ ಆರೋಪಗಳ ಬಗ್ಗೆ ಲಿಖಿತ ಉತ್ತರ ನೀಡಿ, ಇತ್ತೀಚೆಗೆ ಆಗಿರುವ 1,800 ನೇಮಕಾತಿಗಳಲ್ಲಿ ಸುಳ್ಳು ಜಾತಿ ಪ್ರಮಾಣ ಸಲ್ಲಿಸಿರುವವರ ಬಗ್ಗೆ ಮೇಲ್ನೋಟಕ್ಕೆ ಅನುಮಾನಾಸ್ಪದವಾಗಿ ಕಂಡುಬಂದಿರುವ ಸುಮಾರು 276 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಇನ್ನು, 521 ನೇಮಕಾತಿಗಳಲ್ಲಿ ಈಗಾಗಲೇ ಅವರ ಸುಳ್ಳು ಜಾತಿ ಪ್ರಮಾಣ ಪತ್ರವು ಸಾಬೀತಾಗಿದ್ದು ಅವರು, ಕಾನೂನು ಕ್ರಮ ಎದುರಿಸುತ್ತಿದ್ದಾರೆ. ಇನ್ನುಳಿದ, 1051 ನೇಮಕಾತಿಗಳ ಬಗ್ಗೆ ಇನ್ನಷ್ಟೇ ಕೂಲಂಕಷ ವಿಚಾರಣೆ ನಡೆಸಬೇಕಿದೆ ಎಂದು ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications