ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ಕೆಲಸದಿಂದ ಕಿತ್ತುಬಿಸಾಡಿ: ಕೇಂದ್ರ
ನವದೆಹಲಿ, ಜೂನ್ 16: ಪರಿಶಿಷ್ಟ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ನಕಲಿ ಪ್ರಮಾಣ ಪತ್ರ ನೀಡಿದವರನ್ನು ಕೆಲಸದಿಂದ ವಜಾ ಮಾಡಿ ಎಂದು ಕೇಂದ್ರ ಸರಕಾರ ಹೇಳಿದೆ.
ಕೇಂದ್ರ ಸರಕಾರದ ಎಲ್ಲ ಇಲಾಖೆಗಳಿಗೂ ಅಂಥ ನೇಮಕಾತಿಯ ಬಗ್ಗೆ ವಿವರಗಳನ್ನು ಕೇಳಲಾಗಿದೆ. ಸಾವಿರದ ಎಂಟನೂರು ಮಂದಿ ನಕಲಿ ಜಾತಿ ಪತ್ರ ನೀಡಿ ಉದ್ಯೋಗ ಪಡೆದಿದ್ದಾರೆ. ಆ ಪೈಕಿ ಸಾರ್ವಜನಿಕ ವಲಯದ ಬ್ಯಾಂಕಿಂಗ್ ಮತ್ತು ಇನ್ಷೂರೆನ್ಸ್ ಕಂಪೆನಿಗಳಲ್ಲಿ ಆ ರೀತಿ ನೇಮಕಾತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಿರುವುದಾಗಿ ಅಧಿಕಾರಿಗಳು ಮಾಹಿತಿ ಬಹಿರಂಗ ಪಡಿಸಿದ್ದಾರೆ.

ಕೆಲಸಕ್ಕೆ ಸೇರುವ ಸಂದರ್ಭದಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ ಅಂತ ಗೊತ್ತಾದರೆ ನಿಯಮಾವಳಿ ಅನುಸಾರ ಅಂಥ ಉದ್ಯೋಗಿಯನ್ನು ತೆಗೆದುಹಾಕುವುದಕ್ಕೆ ಅಥವಾ ವಜಾ ಮಾಡುವುದಕ್ಕೆ ಕ್ರಮ ಜರುಗಿಸಲು ಮುಂದಾಗಬೇಕು ಎಂದು ಸರಕಾರಿ ಇಲಾಖೆಯಿಂದ ನಿರ್ದೇಶನ ನೀಡಲಾಗಿದೆ.
ನಕಲಿ ಪ್ರಮಾಣ ಪತ್ರ ನೀಡಿ ನೇಮಕವಾದವರ ಮಾಹಿತಿಯನ್ನು ಎಲ್ಲ ಇಲಾಖೆಯಿಂದಲೂ ಸಂಗ್ರಹಿಸಿ, ಸಮಗ್ರ ವರದಿ ಸಲ್ಲಿಸುವುದಕ್ಕೆ ಸೂಚನೆಯನ್ನು ನೀಡಲಾಗಿದೆ. ಈ ಬಗ್ಗೆ ಕಳೆದ ಮಾರ್ಚ್ ನಲ್ಲಿ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದ ಸಚಿವ ಜಿತೇಂದ್ರ ಸಿಂಗ್, 1832 ಮಂದಿ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದರು.
ಆ ಪೈಕಿ 276 ಮಂದಿಯನ್ನು ವಜಾ ಅಥವಾ ಅಮಾನತು ಮಾಡಲಾಗಿದೆ. 521 ಮಂದಿ ವಿರುದ್ಧ ವ್ಯಾಜ್ಯ ಹೂಡಲಾಗಿದೆ. 1035 ಮಂದಿ ವಿರುದ್ಧ ಶಿಸ್ತು ಕ್ರಮ ಬಾಕಿಯಿದೆ. 1296 ಮಂದಿ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಕೆಲಸ ಪಡೆದಿರುವುದು ಆರ್ಥಿಕ ಸೇವಾ ಇಲಾಖೆಯಲ್ಲೇ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 157, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 135, ಇಂಡಿಯನ್ ಓವರ್ ಸೀಸ್ ಬ್ಯಾಂಕ್ 112, ಸಿಂಡಿಕೇಟ್ ಬ್ಯಾಂಕ್ 103 ಹಾಗೂ 41 ಮಂದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಹಾಗೂ ಯುನೈಟೆಡ್ ಇಂಡಿಯಾ ಅಶ್ಯುರೆನ್ಸ್ ನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ನೀಡಿ, ಉದ್ಯೋಗ ಪಡೆದಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications