ತಾಯಿ ಮಗನನ್ನು ಕಳೆದುಕೊಂಡಿದ್ದಾಳೆ: ನರೇಂದ್ರ ಮೋದಿ
ಲಖನೌ, ಜನವರಿ, 22: ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಬಗ್ಗೆ ಪ್ರಧಾನಿ ಮಾತನಾಡಿದ್ದಾರೆ. 'ಸಾವಿನಲ್ಲಿ ರಾಜಕೀಯ ಮಾಡಬೇಡಿ, ಒಬ್ಬ ತಾಯಿ ತನ್ನ ಮಗನನ್ನು ಕಳೆದುಕೊಂಡ ನೋವಿಗೆ ಎಲ್ಲರೂ ಸ್ಪಂದಿಸಿ' ಎಂದು ಹೇಳಿದ್ದಾರೆ.
ಅವರ ಕುಟುಂಬ ಸದಸ್ಯರು ನೋವು ಅನುಭವಿಸುತ್ತಿದ್ದಾರೆ. ಭಾರತವು ಒಬ್ಬ ಯುವ ಪುತ್ರನನ್ನು ಕಳೆದುಕೊಂಡಿದೆ ಎಂಬುದು ವಾಸ್ತವಾಂಶ ಎಂದು ಲಖನೌನಲ್ಲಿ ನಡೆದ ಅಂಬೇಡ್ಕರ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಶುಕ್ರವಾರ ಪ್ರಧಾನಿ ಮಾತನಾಡುತ್ತಾ ಹೇಳಿದರು.
ಆದರೆ ಕೆಲ ವಿದ್ಯಾರ್ಥಿಗಳು ಘೊಷಣೆ ಕೂಗಿ ಪ್ರಧಾನಿ ಭಾಷಣಕ್ಕೆ ಅಡ್ಡಿಪಡಿಸಲು ಮುಂದಾದರು. ನಂತರ ಘೊಷಣೆ ಕೂಗುತ್ತಿದ್ದ ವಿದ್ಯಾರ್ಥಿಗಳನ್ನು ಸಭಾಂಗಣದಿಂದ ಹೊರಕ್ಕೆ ಕಳುಹಿಸಲಾಯಿತು.[ಹೌದು, ನಾನು ಹಿಂದೂ ಎಂದಿದ್ದಕ್ಕೆ ಆತ ತೆತ್ತ ಬೆಲೆ ಏನು?]

ಹೈದರಾಬಾದ್ ಸೆಂಟ್ರಲ್ ವಿಶ್ವವಿದ್ಯಾಲಯದ 26ರ ಹರೆಯದ ಸಂಶೋಧನಾ ವಿದ್ಯಾರ್ಥಿ ವೇಮುಲಾ ಆತ್ಮಹತ್ಯೆ ದಿನೇ ದಿನೇ ಬೇರೆ ಬೇರೆ ಚಿತ್ರಣ ಪಡೆದುಕೊಳ್ಳುತ್ತದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಮೇಲೆಯೂ ದೂರುಗಳು ಕೇಳಿಬಂದಿದ್ದವು. ಇದೀಗ ಸ್ವತಃ ಪ್ರಧಾನಿಯೇ ಸಾವಿಗೆ ಬೇರೆ ಬಣ್ಣ ಹಚ್ಚಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.[ಬೂದಿಮುಚ್ಚಿದ್ದ 'ಅಸಹಿಷ್ಣುತೆ' ಕೆಂಡ ಕೆದಕಿದ ಕರಣ್ ಜೋಹರ್!]
ಬಿಜೆಪಿ ದಲಿತರ ವಿರುದ್ಧ ಕೆಲಸ ಮಾಡುತ್ತಿದೆ ಎಂಬ ಆರೋಪಗಳಿಗೆ ಆಧಾರವಿಲ್ಲ. ನಮ್ಮ ಸರ್ಕಾರಕ್ಕೆ ಅಂಥ ಯಾವ ಚಿಂತನೆಗಳು ಇಲ್ಲ. ಸಾವಿನ ನೋವು ಎಲ್ಲರಲ್ಲೂ ಇದೆ. ಆದರೆ ಅದನ್ನು ಬೇರೆಯದಕ್ಕೆ ಬಳಸಿಕೊಳ್ಳುವುದು ತರವಲ್ಲ ಎಂದು ಹೇಳಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications