Sadhguru: ಮಗಳಿಗೆ ಮದುವೆ ಮಾಡಿದ ಸದ್ಗುರು ಇತರ ಮಹಿಳೆಯರನ್ನು ಸನ್ಯಾಸಿಯಾಗಲು ಏಕೆ ಪ್ರೋತ್ಸಾಹಿಸುತ್ತಾರೆ? ಮದ್ರಾಸ್ ಹೈಕೋರ್ಟ್
ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಹೆಣ್ಣುಮಕ್ಕಳಿಗೆ ಬ್ರೈನ್ ವಾಶ್ ಮಾಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರಾಧ್ಯಾಪಕ ಎಸ್ ಕಾಮರಾಜ್ ಮದ್ರಾಸ್ ಹೈಕೋರ್ಟ್ನಲ್ಲಿ ದೂರು ನೀಡಿದ್ದರು. ವಿಚಾರಣೆ ವೇಳೆ ಕೋರ್ಟ್ ಮಹತ್ವದ ಪ್ರಶ್ನೆಯನ್ನು ಎತ್ತಿದೆ.
ನಿವೃತ್ತ ಪ್ರಾಧ್ಯಾಪಕ ಎಸ್ ಕಾಮರಾಜ್ ತಮ್ಮ ಇಬ್ಬರು ವಿದ್ಯಾವಂತ ಹೆಣ್ಣುಮಕ್ಕಳನ್ನು ಬ್ರೈನ್ ವಾಶ್ ಮಾಡಲಾಗಿದೆ ಮತ್ತು ಈಶಾ ಯೋಗ ಕೇಂದ್ರದಲ್ಲಿ ಒತ್ತಾಯಪೂರ್ವಕವಾಗಿ ಇರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಅವರು ತಮ್ಮ ಇಬ್ಬರು ಮಕ್ಕಳನ್ನು ಖುದ್ದು ವಿಚಾರಣೆಗೆ ಹಾಜರುಪಡಿಸುವಂತೆ ನ್ಯಾಯಾಲಯದ ಮುಂದೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ 'ತನ್ನ ಮಗಳನ್ನು ಮದುವೆ ಮಾಡಿಸಿ ಆಕೆಯನ್ನು ಜೀವನದಲ್ಲಿ ಉತ್ತಮವಾಗಿರಿಸಿದ ಸದ್ಗುರುಗಳು, ಇತರರ ಹೆಣ್ಣುಮಕ್ಕಳನ್ನು ಏಕಾಂತ ಜೀವನ ನಡೆಸುವಂತೆ ಏಕೆ ಪ್ರೋತ್ಸಾಹಿಸುತ್ತಿದ್ದಾರೆ' ಎಂದು ತರಾಟೆಗೆ ತೆಗೆದುಕೊಂಡಿದೆ.

ನೊಂದ ತಂದೆಯಿಂದ ಅರ್ಜಿ ಸಲ್ಲಿಕೆ
ಕೊಯಮತ್ತೂರಿನ ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಬೋಧನೆ ಮಾಡುತ್ತಿರುವ ಎಸ್ ಕಾಮರಾಜ್ ಅವರು ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಹೆಣ್ಣು ಮಕ್ಕಳ ತಲೆ ಕೆಡಿಸಿ ಅವರನ್ನು ಒತ್ತಾಯಪೂರ್ವಕವಾಗಿ ಈಶಾ ಯೋಗ ಕೇಂದ್ರದಲ್ಲಿ ಇರಿಸಿದ್ದಾರೆ. ತಮ್ಮ ಮಕ್ಕಳು ವಿಚಾರಣೆಗೆ ಖುದ್ದು ಹಾಜರುಪಡಿಸುವಂತೆ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಆದರೆ ಸೋಮವಾರ ಪ್ರಾಧ್ಯಾಪಕರ 42 ಮತ್ತು 39 ವರ್ಷದ ಪುತ್ರಿಯರು ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಸ್ವಂತ ಇಚ್ಛೆಯ ಮೇರೆಗೆ ಇಶಾ ಫೌಂಡೇಶನ್ನಲ್ಲಿ ವಾಸಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ತಮ್ಮನ್ನು ಬಲವಂತವಾಗಿ ಯಾರೂ ಕೂಡ ಇಟ್ಟುಕೊಂಡಿಲ್ಲ. ಈ ಹೇಳಿಕೆಯನ್ನು ಆಲಿಸಿದ ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಎಸ್ಎಂ ಸುಬ್ರಮಣ್ಯಂ ಮತ್ತು ವಿ ಶಿವಗಣಂ ಅವರ ಪೀಠವು ಇಶಾ ಫೌಂಡೇಶನ್ ಸಂಸ್ಥಾಪಕರನ್ನು ಪ್ರಶ್ನೆ ಮಾಡಿದೆ, 'ತನ್ನ ಮಗಳಿಗೆ ಮದುವೆ ಮಾಡಿಸಿ ಜೀವನದಲ್ಲಿ ಉತ್ತಮ ಸ್ಥಾನದಲ್ಲಿ ಇರುವಂತೆ ಮಾಡಿ ವ್ಯಕ್ತಿಯು ಇತರರನ್ನು ಏಕಾಂಗಿಯಾಗಿ ಇರಲು ಏಕೆ ಪ್ರೋತ್ಸಾಹಿಸುತ್ತಿದ್ದಾನೆ ಎಂದು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಇಂತವರ ಮಾತು ಕೇಳಿ ಹೆಣ್ಣುಮಕ್ಕಳು ಏಕಾಂತದ ಜೀವನ ನಡೆಸಬೇಕೆ?' ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ.

ಈಶಾ ಫೌಂಡೇಶನ್ ವಿರುದ್ಧ ಹಿಂದೊಮ್ಮೆ ದೂರು
ಈ ಹಿಂದೆ ಒಂದು ದಶಕದ ಹಳೆಯ ಪ್ರಕರಣದಲ್ಲಿ ಮಹಿಳೆಯರು ಇದೇ ರೀತಿಯ ಸಾಕ್ಷ್ಯವನ್ನು ನೀಡಿದ್ದರು. ಇಬ್ಬರು ಮಹಿಳೆಯರ ಪೋಷಕರು ತಮ್ಮ ಹೆಣ್ಣುಮಕ್ಕಳು ತಮ್ಮನ್ನು ತೊರೆದಿದ್ದಾರೆ, ನಂತರ ಅವರ ಜೀವನ 'ನರಕ'ವಾಗಿದೆ ಎಂದು ಹೇಳಿಕೊಂಡಿದ್ದರು. ಹೀಗಾಗಿ ನ್ಯಾಯಾಧೀಶರು ಪ್ರಕರಣದ ಮುಂದಿನ ತನಿಖೆಗೆ ಆದೇಶಿಸಿದ್ದಾರೆ ಮತ್ತು ಇಶಾ ಫೌಂಡೇಶನ್ಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಆದರೂ ಮಹಿಳೆಯರು ಸ್ವಯಂಪ್ರೇರಣೆಯಿಂದ ಅವರೊಂದಿಗೆ ವಾಸಿಸಲು ಇಚ್ಚಿಸಿದ್ದಾರೆ ಎಂದು ಇಶಾ ಫೌಂಡೇಶನ್ ಹೇಳಿಕೊಂಡಿದೆ.
ಈಶಾ ಫೌಂಡೇಶನ್ ಪ್ರತಿಕ್ರಿಯೆ
ಈಶಾ ಫೌಂಡೇಶನ್ ತನ್ನ ಪ್ರತಿಕ್ರಿಯೆಯನ್ನು ನೀಡಿದೆ. 'ಈ ಹೆಣ್ಣುಮಕ್ಕಳು ತಮ್ಮದೇ ಆದ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಮತ್ತು ವಿವೇಚನೆಯನ್ನು ಹೊಂದಿದ್ದಾರೆ ಎಂದು ನಾವು ನಂಬುತ್ತೇವೆ. ನಾವು ಮದುವೆಯಾಗಬಾರದು ಅಥವಾ ಸನ್ಯಾಸಿಯಾಗಬೇಕು ಎಂದು ಒತ್ತಾಯಿಸುವುದಿಲ್ಲ, ಏಕೆಂದರೆ ಇವು ವೈಯಕ್ತಿಕ ನಿರ್ಧಾರಗಳಾಗಿವೆ. ಈಶಾ ಯೋಗ ಕೇಂದ್ರವು ಸನ್ಯಾಸಿಗಳಲ್ಲದ ಸಾವಿರಾರು ಜನರನ್ನು ಹೊಂದಿದೆ, ಅದರಲ್ಲಿ ಕೆಲವರು ಬ್ರಹ್ಮಚಾರಿಗಳು ಅಥವಾ ಸನ್ಯಾಸಿಗಳಾಗಲು ನಿರ್ಧರಿಸುತ್ತಾರೆ. ಇದು ಅವರ ನಿರ್ಧಾರ ಹಾಗೂ ಅವರ ವಿವೇಚನೆಗೆ ಬಿಟ್ಟ ವಿಚಾರ' ಎಂದು ಈಶಾ ಫೌಂಡೇಶನ್ ಪ್ರತಿಕ್ರಿಯೆ ನೀಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications