ಉತ್ತರ ಪ್ರದೇಶ: ಅಂಬೇಡ್ಕರ್ ಪುತ್ಥಳಿಗೂ ಕೇಸರಿ ಬಣ್ಣ!
ಲಖನೌ (ಉತ್ತರ ಪ್ರದೇಶ): ಬದೌನ್ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಪುಂಡಾಟಿಕೆಗೆ ಭಗ್ನಗೊಂಡಿದ್ದ ಅಂಬೇಡ್ಕರ್ ಪುತ್ಥಳಿಯ ಜಾಗಕ್ಕೆ ಅಲ್ಲಿನ ಜಿಲ್ಲಾಡಳಿತ ಹೊಸ ಪುತ್ಥಳಿ ಸ್ಥಾಪಿಸಿದೆ. ಆದರೆ ಅದರ ಬಣ್ಣ ಮತ್ತೊಂದು ವಿವಾದ ಸೃಷ್ಟಿಸಿದೆ.
ಅಂಬೇಡ್ಕರ್ ಕೇಸರಿ ಬಣ್ಣದ ಕೋಟು ಧರಿಸಿರುವ ಪುತ್ಥಳಿಯನ್ನು ಬದೌನ್ ಜಿಲ್ಲಾಡಳಿತ ಪ್ರತಿಷ್ಠಾಪಿಸಿದೆ.
ಜಿಲ್ಲೆಯ ದುಗ್ರಯ್ಯಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಅಂಬೇಡ್ಕರ್ ಅವರ ಪುತ್ಥಳಿಯನ್ನು ಹಾನಿಗೊಳಿಸಲಾಗಿತ್ತು. ಇದರ ವಿರುದ್ಧ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದರು. ಜಿಲ್ಲಾಡಳಿತ ಆಗ್ರಾದಿಂದ ಹೊಸ ಪುತ್ಥಳಿ ತರಿಸಿ ಭಾನುವಾರ ಅನಾವರಣಗೊಳಿಸಿತ್ತು.
ಕೇಸರಿ ಬಣ್ಣದಲ್ಲಿ ಹೊಸ ಪುತ್ಥಳಿ
Badaun: A BR Ambedkar statue which was vandalized recently has been rebuilt and painted saffron in colour pic.twitter.com/saW7U9BBUi
— ANI UP (@ANINewsUP) 10 April 2018
ಸಾಮಾನ್ಯವಾಗಿ ಅಂಬೇಡ್ಕರ್ ಅವರ ಪುತ್ಥಳಿಗಳು ನೀಲಿ ಬಣ್ಣದ್ದಾಗಿರುತ್ತವೆ. ಆದರೆ, ಇದು ಕೇಸರಿ ಬಣ್ಣ ಹೊಂದಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಪುತ್ಥಳಿ ಅನಾವರಣ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿಯ ಪ್ರಾದೇಶಿಕ ಮುಖ್ಯಸ್ಥ ಹೇಮೇಂದ್ರ ಗೌತಮ್ ಕೂಡ ತಮ್ಮ ಬೆಂಬಲಿಗರೊಂದಿಗೆ ಹಾಜರಿದ್ದರು.
ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಸಮಾಜವಾದಿ ಪಕ್ಷದ ಶಾಸಕ ಮತ್ತು ವಕ್ತಾರ ಸುನಿಲ್ ಸಿಂಗ್, ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಎಲ್ಲವನ್ನೂ ಕೇಸರೀಕರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
'ಸರ್ಕಾರ ಬಣ್ಣದ ರಾಜಕೀಯ ಮಾಡುತ್ತಿದೆ. ಕಟ್ಟಡಗಳು, ಗಡಿಗಳು, ಉದ್ಯಾನ ಮತ್ತು ಎಲ್ಲದ್ದಕ್ಕೂ ಕೇಸರಿ ಬಣ್ಣ ಬಳಿಯುವುದರಲ್ಲಿ ಬಿಜಿಯಾಗಿದ್ದಾರೆ. ಈಗ ಅಂಬೇಡ್ಕರ್ ಅವರ ಪುತ್ಥಳಿಯ ಬಣ್ಣವನ್ನು ಕೇಸರಿಮಯ ಮಾಡುವುದರ ಮೂಲಕ ತಮ್ಮನ್ನು ಬೆತ್ತಲೆಗೊಳಿಸಿಕೊಂಡಿದ್ದಾರೆ. ಇದು ಅವರಿಗೆ ಯಾವುದೇ ಸಹಾಯ ಮಾಡುವುದಿಲ್ಲ. ಬದಲಾಗಿ ಜನರು ಅವರ ಉದ್ದೇಶವನ್ನು ಇನ್ನಷ್ಟು ಚೆನ್ನಾಗಿ ಅರ್ಥಮಾಡಿಕೊಳ್ಳಲಿದ್ದಾರೆ' ಎಂದು ಹೇಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications