ಸೈಫ್ ಅಲಿ ಖಾನ್ಗೆ ಇರಿತ ಪ್ರಕರಣದ ಪ್ರಮುಖ ಆರೋಪಿ ಬಂಧನ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಹಲವು ಬಾರಿ ಚಾಕುವಿನಿಂದ ಇರಿದಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಛತ್ತೀಸ್ಗಢದಲ್ಲಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂಬೈ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಇದೀಗ ಛತ್ತೀಸ್ಗಢದತ್ತ ದೌಡಾಯಿಸಿದ್ದಾರೆ.
ಗುರುವಾರ ಮುಂಜಾನೆ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ವಾಸವಿದ್ದ ಅಪಾರ್ಟ್ಮೆಂಟ್ಗೆ ನುಗ್ಗಿದ ವ್ಯಕ್ತಿಯೊಬ್ಬ, ಸೈಫ್ ಅಲಿ ಖಾನ್ರ ಕುತ್ತಿಗೆ, ಬೆನ್ನುಮೂಳೆ ಬಳಿ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿದಿದ್ದ. ಸೈಫ್ ಅಲಿ ಖಾನ್ರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಬಂಧನ
ಬಂಧಿತ ಆರೋಪಿಯನ್ನು 31 ವರ್ಷದ ಕೈಲಾಶ್ ಕನ್ನೋಜಿಯಾ ಎಂದು ಗುರುತಿಸಲಾಗಿದೆ. ಛತ್ತಿಸ್ಗಢದ ದುರ್ಗ್ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಪೊಲೀಸರು ಆತನ ಗುರುತನ್ನು ದೃಢಪಡಿಸಬೇಕಿದ್ದು, ಅವರು ಈಗಾಗಲೇ ಛತ್ತಿಸ್ಗಢದ ಕಡೆ ಹೋಗಿದ್ದಾರೆ.
ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಮುಂಬೈ ಪೊಲೀಸರ ಮಾರ್ಗದರ್ಶನದಲ್ಲಿ ಮುಂಬೈ-ಹೌರಾ ಜ್ಞಾನೇಶ್ವರಿ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದ ಶಂಕಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆಗೆ ರೈಲು ದುರ್ಗ ನಿಲ್ದಾಣಕ್ಕೆ ತಲುಪಿದ್ದು ಆರೋಪಿಯನ್ನು ಕೆಳಗಿಳಿಸಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.
ಮುಂಬೈ ಪೊಲೀಸರು ಶಂಕಿತನ ಫೋಟೊ, ರೈಲು ಸಂಖ್ಯೆ ಮತ್ತು ಸ್ಥಳದ ಮಾಹಿತಿಯನ್ನು ಆರ್ ಪಿಎಫ್ಗೆ ಕಳಿಸಿದ್ದರು. ಈ ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಶಂಕಿತನ ಜೊತೆ ಮುಂಬೈ ಪೊಲೀಸ್ ಅಧಿಕಾರಿಗಳು ವಿಡಿಯೋ ಕರೆಯಲ್ಲಿ ಮಾತನಾಡಿದ್ದಾರೆ. ಬಂಧಿತ ವ್ಯಕ್ತಿಯೇ ಘಟನೆಯಲ್ಲಿ ಭಾಗಿದ್ದಾನೆಯೇ ಅಥವಾ ಈತ ಬೇರೆಯವನೇ ಎಂದು ಖಚಿತಪಡಿಸಿಕೊಳ್ಳಲು ಮುಂಬೈನಿಂದ ಪೊಲೀಸ್ ಅಧಿಕಾರಿಗಳ ತಂಡವೊಂದು ಛತ್ತಿಸ್ಗಢಕ್ಕೆ ತಲುಪಿದೆ. ಆರೋಪಿಯು ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ಹೇಳಲಾಗಿದೆ.
ರೈಲ್ವೆ ಸಿಬ್ಬಂದಿ ವಿಚಾರಣೆಯಲ್ಲಿ ಆತ ನಾಗ್ಪುರಕ್ಕೆ ಹೋಗುತ್ತಿದ್ದ ಎನ್ನುವ ವಿಚಾರ ತಿಳಿದುಬಂದಿದೆ. ನಾಗ್ಪುರದಿಂದ ಬಿಲಾಸ್ಪುರಕ್ಕೆ ಹೋಗಲು ಯೋಜಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿಸಲಾಗಿರುವ ಆರೋಪಿಯುವ ಪ್ರಕರಣದ ಪ್ರಮುಖ ಶಂಕಿತನನ್ನು ಹೋಲುತ್ತಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಆತ ತೆಗೆದುಕೊಂಡು ಹೋಗುತ್ತಿದ್ದ ಅದೇ ಚೀಲ ಆತನ ಬಳಿ ಇತ್ತು ಎನ್ನುವ ಮಾಹಿತಿ ಸಿಕ್ಕಿದೆ.
ಚೇತರಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್
ಚಾಕುವಿನಿಂದ ದಾಳಿಗೊಳಗಾದ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಸೈಫ್ ಅಲಿ ಖಾನ್ ಬೆನ್ನು ಮೂಳೆಯಿಂದ 2.5 ಇಂಚಿನ ಚಾಕುವಿನ ತುಂಡನ್ನು ಹೊರತೆಗೆಯಲಾಗಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications