ಹಲವು ಯಾತ್ರಿಗಳ ಪ್ರಾಣ ಉಳಿಸಿದ ಬಸ್ ಚಾಲಕ ಸಲೀಂ
ಶ್ರೀನಗರ, ಜುಲೈ 11: ಅಮರನಾಥ ಯಾತ್ರೆ ಮುಗಿಸಿಕೊಂಡು ಹಿಂತಿರುಗುತ್ತಿದ್ದ ಬಸ್ ಮೇಲೆ ಉಗ್ರರ ದಾಳಿ ಕಹಿ ಘಟನೆಗೆ ಎಲ್ಲೆಡೆಯಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.
ಸೋಮವಾರ ರಾತ್ರಿ ಅನಂತ್ ನಾಗ್ ಜಿಲ್ಲೆಯ ಸೂಕ್ಷ್ಮ ಪ್ರದೇಶದಲ್ಲಿ ವಾಹನ ಚಲಾಯಿಸಿದ್ದು ತಪ್ಪು ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಉಗ್ರರ ದಾಳಿಯನ್ನು ಎದುರಿಸಿ ಪ್ರಯಾಣಿಕರನ್ನು ಸುರಕ್ಷಿತಾ ತಾಣಕ್ಕೆ ಕೊಂಡೊಯ್ದ ಚಾಲಕ ಸಲೀಂ ಈಗ ಹೀರೋ ಆಗಿ ಕಾಣುತ್ತಿದ್ದಾನೆ.

'ನಾನು ಪ್ರಯಾಣಿಕರೊಂದಿಗೆ ಮಾತನಾಡಿದೆ. ಈ ದಾಳಿ ನಡೆದಾಗ ಹಲವಾರು ಮಂದಿ ನಿದ್ದೆ ಮಾಡುತ್ತಿದ್ದರು. ಬಸ್ ನ ಎರಡು ಕಡೆಗಳಿಂದ ದಾಳಿ ಶುರುವಾಗುತ್ತಿದ್ದಂತೆ ಸಲೀಂ, ವಾಹನದ ವೇಗ ಹೆಚ್ಚಿಸಿಕೊಂಡು ಮುಂದಕ್ಕೆ ಸಾಗಿದ್ದಾನೆ. ಮುಂದೆ ಆರ್ಮಿ ಕ್ಯಾಂಪ್ ಸಿಗುವ ತನಕ ಬಸ್ ನಿಲ್ಲಿಸಿಲ್ಲ. ಒಂದು ವೇಳೆ ದಾಳಿ ನಡೆದಾಗ ಬಸ್ ನಿಲ್ಲಿಸಿದ್ದರೆ ಹಲವಾರು ಮಂದಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯಿತ್ತು' ಎಂದು ಕಾಶ್ಮೀರದ ಐಜಿಪಿ ಮುನೀರ್ ಖಾನ್ ಅವರು ಒನ್ಇಂಡಿಯಾಕ್ಕೆ ತಿಳಿಸಿದ್ದಾರೆ.
ಗುಜರಾತಿನಲ್ಲಿ ಹರ್ಷ: ಗುಜರಾತಿನ ವಲ್ಸದ್ ನಲ್ಲಿ ಸಲೀಂ ಕುಟುಂಬದಲ್ಲಿ ಸಂತಸ ಮೇರೆ ಮೀರಿದೆ. ಉಗ್ರರ ಗುಂಡಿನ ದಾಳಿಯ ನಡುವೆ ಯಾತ್ರಾರ್ಥಿಗಳನ್ನು ಬಚಾವ್ ಮಾಡಿದ ಸಲೀಂ ಧೈರ್ಯ ಮೆಚ್ಚಬೇಕು. ಏಳು ಜನರ ಪ್ರಾಣವನ್ನು ಉಳಿಸಲಾಗಲಿಲ್ಲ. 50 ಮಂದಿಯನ್ನು ಸುರಕ್ಷಿತ ತಾಣಕ್ಕೆ ತಲುಪಿಸಿ ನಂತರ ನಮಗೆ ಫೋನ್ ಕರೆ ಮಾಡಿದ ಎಂದು ಸಲೀಂ ಅವರ ಕಸೀನ್ ಹೇಳಿದ್ದಾರೆ.
ನೋಂದಣಿಯಾಗಿತ್ತು: ಗುಜರಾತ್ ಮೂಲದ ಈ ಬಸ್ ಈ ಮಾರ್ಗದಲ್ಲಿ ಸಂಚರಿಸಲು ಪರವಾನಗಿ ಪಡೆದಿರಲಿಲ್ಲ. ಅಮರನಾಥ್ ಯಾತ್ರೆ ಸಮಿತಿಯ ಅನುಮತಿ ಪಡೆದಿರಲಿಲ್ಲ ಎಂಬ ಸುದ್ದಿಯನ್ನು ಕಾಶ್ಮೀರದ ಪೊಲೀಸರು ಅಲ್ಲಗೆಳೆದಿದ್ದಾರೆ. ದರ್ಶನ ಮುಗಿಸಿಕೊಂಡು ಪೂರ್ವ ನಿಗದಿತ ಮಾರ್ಗದಲ್ಲೇ ಬಸ್ ಸಂಚರಿಸುತ್ತಿತ್ತು. ಆದರೆ, ಮಾರ್ಗಮಧ್ಯದಲ್ಲಿ ಇತರೆ ಯಾತ್ರಾ ಸ್ಥಳಗಳನ್ನು ನೋಡಬೇಕಿದ್ದರಿಂದ ಬದಲಿ ಮಾರ್ಗದಲ್ಲಿ ಹೋಗಿ ಮುಂದೆ ಮುಖ್ಯರಸ್ತೆಗೆ ಸಂಪರ್ಕ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications