ಕೋಟಿ ಕೋಟಿ ಗಳಿಸಿದ ಸಲ್ಮಾನ್ ಖಾನ್ ಚಿತ್ರ ಮೋದಿಗೆ ಅರ್ಪಣೆ!
Recommended Video

ನವದೆಹಲಿ, ಡಿ 30 (ಎಎನ್ಐ) : ಬಾಲಿವುಡ್ ಚಿತ್ರ ಜಗತ್ತಿನ ಬಾಕ್ಸ್ ಆಫೀಸ್ ಕಿಂಗ್ ಸಲ್ಮಾನ್ ಖಾನ್ ಪ್ರಮುಖ ಭೂಮಿಕೆಯಲ್ಲಿರುವ 'ಟೈಗರ್ ಜಿಂದಾ ಹೇ' ಚಿತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅರ್ಪಿಸಲು ಚಿತ್ರತಂಡ ನಿರ್ಧರಿಸಿದೆ.
ಕಳೆದ ವಾರ ಬಿಡುಗಡೆಗೊಂಡು ಈಗಾಗಲೇ ಇನ್ನೂರು ಕೋಟಿಗೂ ಮೇಲೆ ವಹಿವಾಟು ನಡೆಸಿರುವ ಈ ಚಿತ್ರದ ಪ್ರಮುಖ ತಾರಾಗಣದಲ್ಲಿ ಸಲ್ಮಾನ್ ಖಾನ್, ಕತ್ರಿನಾ ಕೈಫ್, ಪರೇಶ್ ರಾವಲ್, ಅಂಗದ್ ಬೇಡಿ ಮುಂತಾದವರಿದ್ದಾರೆ. ಚಿತ್ರವನ್ನು ಆಲಿ ಅಬ್ಬಾಸ್ ಜಫರ್ ನಿರ್ದೇಶಿಸಿದ್ದರು.

ನೈಜಕಥೆಯನ್ನಾಧರಿಸಿದ ಚಿತ್ರವಿದು ಎಂದು ಹೇಳಿರುವ ನಿರ್ದೇಶಕ ಜಫರ್, ಈ ಚಿತ್ರವನ್ನು ನಾವು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಖಾತೆಯ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಅರ್ಪಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.
ಪ್ರಧಾನಿಯವರ ಕಾರ್ಯಕ್ಷಮತೆಯ ಬಗ್ಗೆ ಚಿತ್ರದಲ್ಲೇ ಉಲ್ಲೇಖಿಸಲು ನಾವು ನಿರ್ಧರಿಸಿದ್ದೆವು, ಆದರೆ ಅದಕ್ಕೆ ಸೆನ್ಸಾರ್ ಮಂಡಳಿ ಅನುಮತಿ ನೀಡಿರಲಿಲ್ಲ ಎಂದು ನಿರ್ದೇಶಕರು ಹೇಳಿದ್ದಾರೆ. ಐಸಿಎಸ್ ಉಗ್ರರು ಭಾರತೀಯ ನರ್ಸುಗಳನ್ನು ಒತ್ತೆಯಾಗಿರಿಸಿಕೊಂಡಿದ್ದ ಕಥಾಹಂದರವನ್ನು ಚಿತ್ರ ಹೊಂದಿದೆ.
2014ರಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿಕೊಂಡ ನಂತರ ನಡೆದ ಘಟನೆಯೊಂದರಲ್ಲಿ, ಸುಮಾರು 46 ಭಾರತೀಯ ನರ್ಸುಗಳನ್ನು ಐಸಿಎಸ್ ಉಗ್ರರು ಇರಾಕ್ ನಲ್ಲಿ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದರು.
ತುಂಬಾ ಸೂಕ್ಷ್ಮವಾಗಿದ್ದ ಈ ವಿಚಾರವನ್ನು ಪ್ರಧಾನಿ ಮೋದಿ, ಸಚಿವೆ ಸುಷ್ಮಾ ಸ್ವರಾಜ್ ಮತ್ತು ನಮ್ಮ ವಿದೇಶಾಂಗ ಸಚಿವಾಲಯ, ಹತ್ತು ದಿನಗಳ ನಿರಂತರ ಪ್ರಯತ್ನದಿಂದ ಅಚ್ಚುಕಟ್ಟಾಗಿ ನಿಭಾಯಿಸಿತ್ತು. ಎಲ್ಲಾ ಒತ್ತೆಯಾಳುಗಳನ್ನು ಬಿಡಿಸಿಕೊಂಡು ಬರುವಲ್ಲಿ ನಮ್ಮ ಸರಕಾರ ಯಶಸ್ವಿಯಾಗಿತ್ತು ಎಂದು ನಿರ್ದೇಶಕ ಜಫರ್ ಹೇಳಿದ್ದಾರೆ.
ಈ ಘಟನೆಯನ್ನೇ ಸ್ಪೂರ್ತಿಯಾಗಿಸಿಕೊಂಡು ಟೈಗರ್ ಜಿಂದಾ ಹೇ ಚಿತ್ರವನ್ನು ನಿರ್ದೇಶಿಸಿದ್ದೇನೆ ಮತ್ತು ಈ ಚಿತ್ರ ಪ್ರಧಾನಿ ಮೋದಿಗೆ ಅರ್ಪಣೆ ಎಂದು ನಿರ್ದೇಶಕರು ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications