Salman Khan: ಸಲ್ಮಾನ್ ಖಾನ್ಗೆ 5 ಕೋಟಿ ಬೇಡಿಕೆ ಇಟ್ಟಿದ್ದ ತರಕಾರಿ ಮಾರಾಟಗಾರ ಅರೆಸ್ಟ್!
ಮುಂಬೈ ಅಕ್ಟೋಬರ್ 24: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಜೆಮ್ಶೆಡ್ಪುರದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶೇಖ್ ಹುಸೇನ್ ಶೇಖ್ ಮೌಸಿನ್ (24) ಎಂದು ಗುರುತಿಸಲಾಗಿದ್ದು, ಈತ ಜೆಮ್ಶೆಡ್ಪುರದ ತರಕಾರಿ ವ್ಯಾಪಾರಿಯಾಗಿದ್ದಾನೆ.
ಕಳೆದ ವಾರ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ನಟನಿಂದ 5 ಕೋಟಿ ರೂಪಾಯಿ ಕೊಡಿಸುವಂತೆ ಬೆದರಿಕೆ ಸಂದೇಶ ಈತನಿಂದ ಬಂದಿತ್ತು. ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಆರೋಪಿಯ ಬಂಧನದ ನಂತರ, ಈಗ ವರ್ಲಿ ಪೊಲೀಸರು ಆರೋಪಿಯನ್ನು ಟ್ರಾನ್ಸಿಟ್ ರಿಮಾಂಡ್ಗಾಗಿ ಜಾರ್ಖಂಡ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ರಿಮಾಂಡ್ ಪಡೆದ ನಂತರ ಆರೋಪಿಯನ್ನು ಮುಂಬೈಗೆ ಕರೆತರಲಾಗುವುದು.

ಬೆದರಿಕೆಯ ನಂತರ ಕ್ಷಮೆ ಸಂದೇಶ
ಪೊಲೀಸರು ಈ ಸಂಖ್ಯೆಯನ್ನು ಜಾರ್ಖಂಡ್ನಲ್ಲಿ ಪತ್ತೆಹಚ್ಚಿದ್ದರು. ಈ ಆರೋಪಿಯನ್ನು ಹಿಡಿಯಲು ತಂಡಗಳನ್ನು ಕಳುಹಿಸಿದ್ದರು. ಮತ್ತೊಂದು ತಂಡವನ್ನು ಗುವಾಹಟಿಗೆ ಕಳುಹಿಸಲಾಗಿತ್ತು. ಹೀಗೆ ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚಲು ಪೊಲೀಸರು ತಮ್ಮ ತನಿಖೆಯನ್ನು ಪ್ರಾರಂಭಿಸಿದ್ದರು. ಆದರೆ ಮುಂಬೈ ಟ್ರಾಫಿಕ್ ಪೊಲೀಸರು ಅದೇ ಮೊಬೈಲ್ ಫೋನ್ ಸಂಖ್ಯೆಯಿಂದ ಕ್ಷಮೆ ಸಂದೇಶವನ್ನು ಸ್ವೀಕರಿಸಿದ್ದು, ಅದನ್ನು ತಪ್ಪಾಗಿ ಕಳುಹಿಸಲಾಗಿದೆ ಎಂದು ಆರೋಪಿ ಮತ್ತೊಮ್ಮೆ ಸಂದೇಶವನ್ನು ಕಳುಹಿಸಿದ್ದಾನೆ.
ಆದರೂ ಮುಂಬೈ ಪೊಲೀಸರು ಜೆಮ್ಶೆಡ್ಪುರದ ಸ್ಥಳೀಯ ಪೊಲೀಸರ ಸಹಾಯದಿಂದ ತನಿಖೆ ನಡೆಸಿ, ಬಳಿಕ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈಗ ಅವರನ್ನು ಮುಂಬೈಗೆ ಕರೆತರಲಾಗುತ್ತಿದೆ.
ಸಲ್ಮಾನ್ಗೆ ನಿರಂತರವಾಗಿ ಬೆದರಿಕೆ ಸಂದೇಶ
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ಗೆ ಈ ಹಿಂದೆ ಕೊಲೆ ಬೆದರಿಕೆಗಳು ಬಂದಿದ್ದವು ಎಂಬುದು ಗಮನಾರ್ಹ. ಈ ವರ್ಷದ ಏಪ್ರಿಲ್ನಲ್ಲಿ ಸಲ್ಮಾನ್ ಖಾನ್ ಅವರ ಬಾಂದ್ರಾ ಮನೆಯ ಹೊರಗೆ ಶಂಕಿತ ಗ್ಯಾಂಗ್ ಸದಸ್ಯರು ಗುಂಡಿನ ದಾಳಿ ನಡೆಸಿದ್ದರು. ಕೆಲವು ತಿಂಗಳ ಹಿಂದೆ, ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಬಿಷ್ಣೋಯ್ ಗ್ಯಾಂಗ್ ನಡೆಸಿದ ಪಿತೂರಿಯನ್ನು ಬಹಿರಂಗಪಡಿಸಿದ್ದರು, ನಂತರ ನಟನ ಭದ್ರತೆಯನ್ನು ಹೆಚ್ಚಿಸಲಾಯಿತು.
-
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications