ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷ್ಣಮೃಗ ಬೇಟೆ: ಸಲ್ಮಾನ್ ಖಾನ್ ಅರ್ಜಿ ಭವಿಷ್ಯ ಸೋಮವಾರ ಪ್ರಕಟ

|
Google Oneindia Kannada News

ಜೈಪುರ, ಮೇ 6: ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ನಟ ಸಲ್ಮಾನ್ ಖಾನ್, ಸೋಮವಾರ ಜೋಧಪುರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ನ್ಯಾಯಾಲಯದ ವಿಚಾರಣೆಯಲ್ಲಿ ಪಾಲ್ಗೊಳ್ಳಲು ಸಲ್ಮಾನ್ ಖಾನ್ ಈಗಾಗಲೇ ಜೋಧಪುರಕ್ಕೆ ತೆರಳಿದ್ದಾರೆ.

ವನ್ಯಜೀವಿ ಅಪರಾಧ: ಕುಖ್ಯಾತರ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಹೆಸರು!ವನ್ಯಜೀವಿ ಅಪರಾಧ: ಕುಖ್ಯಾತರ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಹೆಸರು!

ಜೋಧಪುರದ ಹಳ್ಳಿಯೊಂದರಲ್ಲಿ ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಜೋಧಪುರ ನ್ಯಾಯಾಲಯ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದಾರೆ. ಸಲ್ಮಾನ್ ಮೇಲಿನ ಆರೋಪಗಳನ್ನು ಕೈಬಿಡುವಂತೆ ಅವರು ಕೋರಿದ್ದಾರೆ. ಈ ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ.

salman khan to appear in court on monday

ಸಲ್ಮಾನ್ ಸೇರಿದಂತೆ 6 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. 'ಹಮ್ ಸಾತ್ ಸಾತ್ ಹೈ' ಚಿತ್ರದ ಸಹ ಕಲಾವಿದರಾದ ಸೈಫ್ ಅಲಿ ಖಾನ್, ನೀಲಮ್, ಟಬು ಮತ್ತು ಸೊನಾಲಿ ಬೇಂದ್ರೆ ಹಾಗೂ ಜೋಧಪುರ ನಿವಾಸಿ ದುಷ್ಯಂತ್ ಸಿಂಗ್ ಅವರನ್ನು ನಿರಪರಾಧಿಗಳೆಂದು ಪ್ರಕಟಿಸಿದ್ದ ನ್ಯಾಯಾಲಯ, ಸಲ್ಮಾನ್‌ ಖಾನ್‌ ಅವರಿಗೆ ಶಿಕ್ಷೆ ವಿಧಿಸಿತ್ತು. ಎರಡು ದಿನ ಜೈಲಿನಲ್ಲಿ ಕಳೆದಿದ್ದ ಸಲ್ಮಾನ್, ಏಪ್ರಿಲ್ 7ರಂದು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು.

ನಟ ಸಲ್ಮಾನ್ ಖಾನ್‌ಗೆ ಐದು ವರ್ಷ ಜೈಲು ಶಿಕ್ಷೆ ಪ್ರಕಟನಟ ಸಲ್ಮಾನ್ ಖಾನ್‌ಗೆ ಐದು ವರ್ಷ ಜೈಲು ಶಿಕ್ಷೆ ಪ್ರಕಟ

English summary
Actor Salman Khan will appear in a Jodhpur court on Monday to hear his appeal against the sentence on blackbucks poaching case
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X