ಕೃಷ್ಣಮೃಗ ಬೇಟೆ ಪ್ರಕರಣದ ಪ್ರಮುಖ ಘಟನಾವಳಿಗಳು
ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜಸ್ಥಾನದ ಜೋದ್ಪುರ ಸಿಜೆಎಂ ಕೋರ್ಟ್ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪು ನೀಡಿದೆ.
20 ವರ್ಷಗಳ ಹಿಂದೆ ನಡೆದಿದ್ದ ಘಟನೆಗೆ ಇಂದು ಶಿಕ್ಷೆ ಪ್ರಕಟವಾಗಿದೆ. ಸಲ್ಮಾನ್ ಹೊರತು ಪಡಿಸಿ ಉಳಿದ ನಟರಾದ ಸೈಫ್ ಅಲಿ ಖಾನ್, ಟಬು, ಸೊನಾಲಿ ಬೇಂದ್ರೆ, ನೀಲಂ ಅವರುಗಳು ಆರೋಪದಿಂದ ಖುಲಾಸೆಗೊಂಡಿದ್ದಾರೆ.
ಏನಿದು ಕೃಷ್ಣಮೃಗ ಪ್ರಕರಣ ಈ 20 ವರ್ಷಗಳಲ್ಲಿ ಆದದ್ದು ಏನು, ಪ್ರಕರಣ ಹೇಗೆಲ್ಲಾ ತಿರುವು ಪಡೆಯಿತು. ತಿಳಿಯಲು ಮುಂದೆ ಓದಿ...
ಸೆಪ್ಟೆಂಬರ್ 1998: 'ಹಮ್ ಸಾಥ್ ಸಾಥ್ ಹೈ' ಚಿತ್ರದ ಶೂಟಿಂಗ್ ವೇಳೆ ಸಲ್ಮಾನ್ ಖಾನ್ ರಿಂದ ರಾಜಸ್ಥಾನದ ಕಂಕನಿ ಹಳ್ಳಿಯ ಬಳಿ ಕೃಷ್ಣಮೃಗ ಭೇಟೆ. ಸಲ್ಮಾನ್ ಜೊತೆಯಲ್ಲಿ ಸಹ ನಟರಾದ ಸೈಫ್ ಅಲಿ ಖಾನ್, ಟಬು, ನೀಲಂ,ಸೊನಾಲಿ ಬೇಂದ್ರೆ ಅವರು ಇದ್ದರು ಎಂಬ ಗುಮಾನಿ.

ಅಕ್ಟೋಬರ್ 2, 1998: ಕಂಕನಿ ಗ್ರಾಮಸ್ಥರಿಂದ ಸಲ್ಮಾನ್ ಖಾನ್ ಹಾಗೂ ಇತರ ನಟರ ವಿರುದ್ಧ ಪೊಲಿಸ್ ಠಾಣೆಯಲ್ಲಿ ದೂರು. ವನ್ಯಜೀವಿ ಸಂರಕ್ಷಣೆ ಕಾಯ್ದೆ 51 ಹಾಗೂ ದುಷ್ಟ ಕಾರ್ಯ ಮಾಡಲು ಗುಂಪು ಸೇರಿರುವ ಆರೋಪದ ಮೇಲೆ IPC ಸೆಕ್ಷನ್ 149 ಅಡಿ ಪ್ರ ಅಡಿ ಪ್ರಕರಣ ದಾಖಲು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಅಕ್ಟೋಬರ್ 12, 1998: ಕೃಷ್ಣಮೃಗ ಮತ್ತು ಇತರ ಒಂದು ಮೃಗದ ಭೇಟೆ ಆರೋಪದಡಿ ಪೊಲೀಸರಿಂದ ಸಲ್ಮಾನ್ ಖಾನ್ ಬಂಧನ ಮತ್ತು ಅಂದೇ ಜಾಮೀನಿನ ಮೇಲೆ ಬಿಡುಗಡೆ.
ಏಪ್ರಿಲ್ 10, 2006: ಕೃಷ್ಣಮೃಗ ಭೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ಗೆ 25,000 ದಂಡ ಮತ್ತು 5 ವರ್ಷಗಳ ಜೈಲುವಾಸದ ಶಿಕ್ಷೆ ತೀರ್ಪು, ಆದರೆ ಒಂದು ವಾರದ ಸೆರೆವಾಸದ ಬಳಿಕ ಜಾಮೀನು ಪಡೆದ ಸಲ್ಮಾನ್ ಖಾನ್.
ಆಗಸ್ಟ್ 31, 2006: ಸಲ್ಮಾನ್ ಖಾನ್ಗೆ ವಿಧಿಸಿದ್ದ ಶಿಕ್ಷೆ ರದ್ದು ಪಡಿಸಿದ ರಾಜಸ್ಥಾನ ಕೋರ್ಟ್, ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳದಂತೆ ತಾಕೀತು.
ಜುಲೈ 25, 2016: ರಾಜಸ್ಥಾನ ಹೈಕೋರ್ಟ್ನಲ್ಲಿ ಸಲ್ಮಾನ್ ಖಾನ್ ಮೇಲೆ ಹೊರಿಸಿದ್ದ ಆರೋಪಗಳಿಂದ ಖುಲಾಸೆ, ಸಲ್ಮಾನ್ ಖಾನ್ ಮೇಲಿನ ಆರೋಪವನ್ನು ರುಜುವಾತು ಮಾಡಲು ಸರಿಯಾದ ಸಾಕ್ಷ್ಯಗಳಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್. ಸತ್ತ ಮೃಗಗಳು ಸಲ್ಮಾನ್ ಖಾನ್ ಅವರ ಪರವಾನಗಿ ಹೊಂದಿದ ಗನ್ನಿಂದ ಕೊಂದದ್ದು ಎಂಬುದಕ್ಕೆ ಸಾಕ್ಷ್ಯಗಳಿಲ್ಲ ಎಂದ ಹೈಕೋರ್ಟ್.
ನವೆಂಬರ್ 11, 2016: ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜಸ್ಥಾನ ಸರ್ಕಾರದಿಂದ ಸುಪ್ರಿಂಕೋರ್ಟ್ಗೆ ಮೇಲ್ಮನವಿ. ಸುಪ್ರೀಂ ಕೋರ್ಟ್ನಿಂದ ಸಲ್ಮಾನ್ ಖಾನ್ಗೆ ನೊಟೀಸ್.
ಏಪ್ರಿಲ್ 05, 2018: ಜೋದ್ಪುರ ಕೋರ್ಟ್ನಿಂದ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪು, ಎರಡು ವರ್ಷ ಶಿಕ್ಷೆ ಪ್ರಕಟ. ಸಲ್ಮಾನ್ ಸಹಚರರಾದ ಸೈಫ್ ಅಲಿ ಖಾನ್, ಟಬು, ನೀಲಂ, ಸೊನಾಲಿ ಬೇಂದ್ರೆ ಅವರು ಆರೋಪ ಮುಕ್ತ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications