ಕೃಷ್ಣಮೃಗ ಬೇಟೆ ಪ್ರಕರಣದ ಪ್ರಮುಖ ಘಟನಾವಳಿಗಳು
ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜಸ್ಥಾನದ ಜೋದ್ಪುರ ಸಿಜೆಎಂ ಕೋರ್ಟ್ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪು ನೀಡಿದೆ.
20 ವರ್ಷಗಳ ಹಿಂದೆ ನಡೆದಿದ್ದ ಘಟನೆಗೆ ಇಂದು ಶಿಕ್ಷೆ ಪ್ರಕಟವಾಗಿದೆ. ಸಲ್ಮಾನ್ ಹೊರತು ಪಡಿಸಿ ಉಳಿದ ನಟರಾದ ಸೈಫ್ ಅಲಿ ಖಾನ್, ಟಬು, ಸೊನಾಲಿ ಬೇಂದ್ರೆ, ನೀಲಂ ಅವರುಗಳು ಆರೋಪದಿಂದ ಖುಲಾಸೆಗೊಂಡಿದ್ದಾರೆ.
ಏನಿದು ಕೃಷ್ಣಮೃಗ ಪ್ರಕರಣ ಈ 20 ವರ್ಷಗಳಲ್ಲಿ ಆದದ್ದು ಏನು, ಪ್ರಕರಣ ಹೇಗೆಲ್ಲಾ ತಿರುವು ಪಡೆಯಿತು. ತಿಳಿಯಲು ಮುಂದೆ ಓದಿ...
ಸೆಪ್ಟೆಂಬರ್ 1998: 'ಹಮ್ ಸಾಥ್ ಸಾಥ್ ಹೈ' ಚಿತ್ರದ ಶೂಟಿಂಗ್ ವೇಳೆ ಸಲ್ಮಾನ್ ಖಾನ್ ರಿಂದ ರಾಜಸ್ಥಾನದ ಕಂಕನಿ ಹಳ್ಳಿಯ ಬಳಿ ಕೃಷ್ಣಮೃಗ ಭೇಟೆ. ಸಲ್ಮಾನ್ ಜೊತೆಯಲ್ಲಿ ಸಹ ನಟರಾದ ಸೈಫ್ ಅಲಿ ಖಾನ್, ಟಬು, ನೀಲಂ,ಸೊನಾಲಿ ಬೇಂದ್ರೆ ಅವರು ಇದ್ದರು ಎಂಬ ಗುಮಾನಿ.

ಅಕ್ಟೋಬರ್ 2, 1998: ಕಂಕನಿ ಗ್ರಾಮಸ್ಥರಿಂದ ಸಲ್ಮಾನ್ ಖಾನ್ ಹಾಗೂ ಇತರ ನಟರ ವಿರುದ್ಧ ಪೊಲಿಸ್ ಠಾಣೆಯಲ್ಲಿ ದೂರು. ವನ್ಯಜೀವಿ ಸಂರಕ್ಷಣೆ ಕಾಯ್ದೆ 51 ಹಾಗೂ ದುಷ್ಟ ಕಾರ್ಯ ಮಾಡಲು ಗುಂಪು ಸೇರಿರುವ ಆರೋಪದ ಮೇಲೆ IPC ಸೆಕ್ಷನ್ 149 ಅಡಿ ಪ್ರ ಅಡಿ ಪ್ರಕರಣ ದಾಖಲು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಅಕ್ಟೋಬರ್ 12, 1998: ಕೃಷ್ಣಮೃಗ ಮತ್ತು ಇತರ ಒಂದು ಮೃಗದ ಭೇಟೆ ಆರೋಪದಡಿ ಪೊಲೀಸರಿಂದ ಸಲ್ಮಾನ್ ಖಾನ್ ಬಂಧನ ಮತ್ತು ಅಂದೇ ಜಾಮೀನಿನ ಮೇಲೆ ಬಿಡುಗಡೆ.
ಏಪ್ರಿಲ್ 10, 2006: ಕೃಷ್ಣಮೃಗ ಭೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ಗೆ 25,000 ದಂಡ ಮತ್ತು 5 ವರ್ಷಗಳ ಜೈಲುವಾಸದ ಶಿಕ್ಷೆ ತೀರ್ಪು, ಆದರೆ ಒಂದು ವಾರದ ಸೆರೆವಾಸದ ಬಳಿಕ ಜಾಮೀನು ಪಡೆದ ಸಲ್ಮಾನ್ ಖಾನ್.
ಆಗಸ್ಟ್ 31, 2006: ಸಲ್ಮಾನ್ ಖಾನ್ಗೆ ವಿಧಿಸಿದ್ದ ಶಿಕ್ಷೆ ರದ್ದು ಪಡಿಸಿದ ರಾಜಸ್ಥಾನ ಕೋರ್ಟ್, ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳದಂತೆ ತಾಕೀತು.
ಜುಲೈ 25, 2016: ರಾಜಸ್ಥಾನ ಹೈಕೋರ್ಟ್ನಲ್ಲಿ ಸಲ್ಮಾನ್ ಖಾನ್ ಮೇಲೆ ಹೊರಿಸಿದ್ದ ಆರೋಪಗಳಿಂದ ಖುಲಾಸೆ, ಸಲ್ಮಾನ್ ಖಾನ್ ಮೇಲಿನ ಆರೋಪವನ್ನು ರುಜುವಾತು ಮಾಡಲು ಸರಿಯಾದ ಸಾಕ್ಷ್ಯಗಳಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್. ಸತ್ತ ಮೃಗಗಳು ಸಲ್ಮಾನ್ ಖಾನ್ ಅವರ ಪರವಾನಗಿ ಹೊಂದಿದ ಗನ್ನಿಂದ ಕೊಂದದ್ದು ಎಂಬುದಕ್ಕೆ ಸಾಕ್ಷ್ಯಗಳಿಲ್ಲ ಎಂದ ಹೈಕೋರ್ಟ್.
ನವೆಂಬರ್ 11, 2016: ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜಸ್ಥಾನ ಸರ್ಕಾರದಿಂದ ಸುಪ್ರಿಂಕೋರ್ಟ್ಗೆ ಮೇಲ್ಮನವಿ. ಸುಪ್ರೀಂ ಕೋರ್ಟ್ನಿಂದ ಸಲ್ಮಾನ್ ಖಾನ್ಗೆ ನೊಟೀಸ್.
ಏಪ್ರಿಲ್ 05, 2018: ಜೋದ್ಪುರ ಕೋರ್ಟ್ನಿಂದ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪು, ಎರಡು ವರ್ಷ ಶಿಕ್ಷೆ ಪ್ರಕಟ. ಸಲ್ಮಾನ್ ಸಹಚರರಾದ ಸೈಫ್ ಅಲಿ ಖಾನ್, ಟಬು, ನೀಲಂ, ಸೊನಾಲಿ ಬೇಂದ್ರೆ ಅವರು ಆರೋಪ ಮುಕ್ತ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications