ಸಲ್ಮಾನ್ ಜಾಮೀನು ಅರ್ಜಿಯ ತೀರ್ಪು ಮಧ್ಯಾಹ್ನ ಪ್ರಕಟ
ಬೆಂಗಳೂರು, ಏಪ್ರಿಲ್ 07: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ನಟ ಸಲ್ಮಾನ್ ಖಾನ್ ಜಾಮೀನು ಅರ್ಜಿಯ ತೀರ್ಪನ್ನು ಶನಿವಾರ ಮಧ್ಯಾಹ್ನಕ್ಕೆ ಕಾಯ್ದಿರಿಸಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಬೆಳಿಗ್ಗೆ 10.30ರ ಸುಮಾರಿಗೆ ಅರ್ಜಿ ವಿಚಾರಣೆ ಆರಂಭಿಸಿದ ನ್ಯಾಯಾಧೀಶ ರವೀಂದ್ರ ಕುಮಾರ್ ಜೋಶಿ, ತೀರ್ಪನ್ನು ಮಧ್ಯಾಹ್ನದ ಊಟದ ಬಳಿಕ ಪ್ರಕಟಿಸುವುದಾಗಿ ತಿಳಿಸಿದರು.
ನ್ಯಾಯಾಧೀಶರ ವರ್ಗಾವಣೆ: ಸಲ್ಮಾನ್ ಖಾನ್ ಜಾಮೀನು ಕಗ್ಗಂಟು?
ಸಲ್ಮಾನ್ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಮತ್ತು ಸಲ್ಮಾನ್ ಪರ ವಕೀಲರ ವಾದ ಮಂಡನೆ ಪೂರ್ಣಗೊಂಡಿದೆ.
ಜೋಧಪುರ ಜೆಎಂಸಿ ನ್ಯಾಯಾಲಯ ಸಲ್ಮಾನ್ ಖಾನ್ಗೆ ಗುರುವಾರ ಶಿಕ್ಷೆ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಸಲ್ಮಾನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಜೋಧಪುರ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ್ ಜೋಶಿ ತೀರ್ಪನ್ನು ಶನಿವಾರಕ್ಕೆ ಕಾಯ್ದಿರಿಸಿದ್ದರು.
ಸಲ್ಮಾನ್ ಜಾಮೀನು ಅರ್ಜಿ: ಬದಲಾಗದ ನ್ಯಾಯಾಧೀಶರು
ಸಹ ಆರೋಪಿಗಳಾಗಿದ್ದ ನಟರಾದ ಸೈಫ್ ಅಲಿಖಾನ್, ಸೊನಾಲಿ ಬೇಂದ್ರೆ, ಟಬು, ನೀಲಂ ಕೊಠಾರಿ ಮತ್ತು ಸ್ಥಳೀಯ ಪ್ರವಾಸಿ ಗೈಡ್ ವಿರುದ್ಧ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಅವರನ್ನು ಖುಲಾಸೆ ಮಾಡಲಾಗಿತ್ತು.