ಮೋದಿ ಕೆಂಡಾಮಂಡಲವಾಗುವಂತೆ ಸ್ಯಾಮ್ ಪಿತ್ರೋಡಾ ನೀಡಿದ ಹೇಳಿಕೆಯೇನು?
'ನಾಚಿಕೆಯಾಗಬೇಕು ನಿಮಗೆ...!' ಹಾಗಂತ ಸ್ವತಃ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ನ ಸಾಗರೋತ್ತರ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರಿಗೆ ಖಡಕ್ ಪ್ರತ್ಯುತ್ತರ ನೀಡಿದ್ದಾರೆ. ಅಷ್ಟಕ್ಕೂ ಮೋದಿ ಅವರಿಗೆ ಆ ಪರಿ ಕೋಪ ಬರುವಂತೆ ಸ್ಯಾಮ್ ಪಿತ್ರೊಡ ಹೇಳಿದ್ದೇನು?
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಎಎನ್ ಐ ನ್ಯೂಸ್ ಏಜೆನ್ಸಿಗೆ ಸಂದರ್ಶನ ನೀಡುವ ಸಂದರ್ಭದಲ್ಲಿ ಮಾತನಾಡುತ್ತಿದ್ದ ಸ್ಯಾಮ್ ಪಿತ್ರೋಡಾ, ಬಾಲಕೋಟ್ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಬಾಲಕೋಟ್ ದಾಳಿ ನಡೆದಿದ್ದೇ ಹೌದಾಗಿದ್ದರೆ ಸಾಕ್ಷಿ ಕೊಡುತ್ತೀರಾ ಎಂದು ಕೇಳಿದ ಪಿತ್ರೋಡಾ ಅವರಿಗೆ ಪ್ರತಿಕ್ರಿಯೆ ನೀಡಿದ್ದ ನರೇಂದ್ರ ಮೋದಿ, 'ಭಾರತೀಯ ಸೇನೆಯನ್ನು ನೀವು ಅವಮಾನಿಸುತ್ತಿದ್ದೀರಿ. ನಿಮಗೆ ನಾಚಿಕೆಯಾಗಬೇಕು' ಎಂದು ಮೋದಿ ಟ್ವೀಟ್ ಮಾಡಿದ್ದರು.
ಅಷ್ಟಕ್ಕೂ ಮೋದಿ ಅವರಿಗೆ ಆ ಪರಿ ಕೋಪ ಬರುವಂತೆ ಸ್ಯಾಮ್ ಪಿತ್ರೋಡಾ ನೀಡಿದ ಹೇಳಿಕೆ ಏನು? ಎಎನ್ ಐ ಗೆ ಅವರು ನೀಡಿದ ಸಂದರ್ಶನದಲ್ಲಿ ಪುಲ್ವಾಮಾ ಉಗ್ರದಾಳಿ, ಏರ್ ಸ್ಟ್ರೈಕ್ ಮುಂತಾದ ವಿಷಯಗಳ ಕುರಿತು ಅವರಾಡಿದ ಮಾತಿನ ಆಯ್ದ ಭಾಗ ಇಲ್ಲಿದೆ.

300 ಜನ ಸತ್ತಿದ್ದು ನಿಜಾನಾ?
"ನಾನು ನ್ಯಾಯಾರ್ಕ್ ಟೈಮ್ಸ್ ಮತ್ತಿತರ ಪತ್ರಿಕೆಗಳಲ್ಲಿ ಓದಿದಂತೆ, ಕೆಲವು ವಿಷಯಗಳನ್ನು ತಿಳಿದುಕೊಳ್ಳಬೇಕಿದೆ. ನಾವು ನಿಜಕ್ಕೂ ಯಾವುದರ ಮೇಲೆ ದಾಳಿ ಮಾಡಿದ್ದೇವೆ? ನಾವು ನಿಜಕ್ಕೂ 300 ಜನರನ್ನು ಕೊಂದೆವಾ? ನಿಜಕ್ಕೂ ಮುನ್ನೂರು ಜನರನ್ನು ಕೊಂದಿದ್ದರೆ ನಮಗೆ ಸಾಕ್ಷಿ ಕೊಡಿ. ಜಾಗತಿಕ ಮಾಧ್ಯಮಗಳು ಅಲ್ಲಿ ಯಾರೂ ಸತ್ತೇ ಇಲ್ಲ ಎನ್ನುತ್ತವೆ. ಆಗ ಭಾರತೀಯ ನಾಗರಿಕನಾಗಿ ನನಗೆ ನೋವಾಗುತ್ತದೆ!" ಎಂದು ಸ್ವಾಮ್ ಪಿತ್ರೋಡಾ ಹೇಳಿದ್ದರು.

ಎಂಟು ಜನರ ತಪ್ಪಿಗೆ ಇಡೀ ಪಾಕಿಸ್ತಾನಕ್ಕೂ ಶಿಕ್ಷೆ!
"26/11 ರ ಮುಂಬೈ ದಾಳಿಯನ್ನು ಮಾಡಿದ್ದು ಏಳೆಂಟು ಭಯೋತ್ಪಾದಕರು. ಹಾಗಂತ ಇಡೀ ಪಾಕಿಸ್ತಾನವನ್ನು ದೂರುವುದು ಸರಿಯೇ? ಆ ಏಳೆಂಟು ಜನರಿಗಾಗಿ ಇಡೀ ಪಾಕಿಸ್ತಾನದ ಮೇಲೆ ದಾಳಿ ಮಾಡುವುದು ಸರಿಯೇ? ಯಾರದೋ ತಪ್ಪಿಗಾಗಿ ಆ ದೇಶದ ಎಲ್ಲರನ್ನೂ ತೆಗಳುವುದು ಎಷ್ಟು ಸರಿ ಎಂಬುದು ನನ್ನ ಪ್ರಶ್ನೆ" -ಸ್ವಾಮ್ ಪಿತ್ರೋಡಾ

ಬಲಾಢ್ಯ ಎಂದರೆ ಅರ್ಥವೇನು?
ಪ್ರಧಾನಿ ಮೋದಿ ಬಲಾಢ್ಯ ಸರ್ಕಾರವನ್ನು ಸಂಕೇತಿಸುತ್ತಾರೆ ಎಂದು ಬಿಜೆಪಿ ಹೇಳುತ್ತದೆ. ಬಲಾಢ್ಯ ಎಂದರೆ ಏನು? ಭಾರತದ ಪ್ರಜಾಪ್ರಭುತ್ವಕ್ಕೆ ಬಲಾಢ್ಯತೆಯ ಅಗತ್ಯವಿಲ್ಲ ಎಂಬುದನ್ನು ಜನರು ತಿಳಿಯಬೇಕು. ಹಿಟ್ಲರ್ ಸಹ ಬಲಾಢ್ಯನಾಗಿದ್ದ. ಎಲ್ಲಾ ಸರ್ವಾಧಿಕಾರಿಗಳೂ ಬಲಾಢ್ಯರೇ! ಚೀನಾ ಮುಖಂಡರೂ ಬಹಳ ಬಲಾಢ್ಯರು! ಭಾರತಕ್ಕೆ ಇಂಥ ಬಲಾಢ್ಯತೆ ಬೇಕೆ?- ಸ್ಯಾಮ್ ಪಿತ್ರೋಡಾ

ಮಾಹಿತಿ ತಿಳಿಯುವುದು ನನ್ನ ಹಕ್ಕು
ಭಾರತದ ನಾಗರಿಕನಾಗಿ ಮಾಹಿತಿ ತಿಳಿಯುವುದು ನನ್ನ ಹಕ್ಕು. ಅದಕ್ಕೆಂದೇ ಏರ್ ಸ್ಟ್ರೈಕ್ ಬಗ್ಗೆ ಮಾಹಿತಿ ಕೇಳಿದೆ. ನಾನು ಯಾವುದೇ ಪಕ್ಷದ ಪರವಾಗಿ ಮಾತನಾಡುತ್ತಿಲ್ಲ, ಭಾರತದ ಒಬ್ಬ ನಾಗರಿಕನಾಗಿ ಅದನ್ನು ಕೇಳುವ ಹಕ್ಕು ನನಗಿದೆ - ಸ್ಯಾಮ್ ಪಿತ್ರೋಡಾ.

ಮೋದಿ ಟ್ವೀಟ್ ಗೆ ಪ್ರತಿಕ್ರಿಯೆ
ಸ್ಯಾಮ್ ಪಿತ್ರೋಡಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, 'ಏರ್ ಸ್ಟ್ರೈಕ್ ನಡೆದಿದ್ದರ ಬಗ್ಗೆ ಅನುಮಾನ ವ್ಯಕ್ತಪಡಿಸುವ ಮೂಲಕ ಭಾರತೀಯ ಸೇನೆಗೆ ಅವಮಾನ ಮಾಡಿದ್ದಾರೆ' ಎಂದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ಪಿತ್ರೋಡಾ, 'ನನ್ನ ಮಾತಿನಲ್ಲಿ ವಿವಾದ ಸೃಷ್ಟಿಸುವಂಥದ್ದು ಏನಿದೆ ಎಂಬುದೇ ಅರ್ಥವಾಗುತ್ತಿಲ್ಲ. ನಾನು ಒಬ್ಬ ನಾಗರಿಕನಾಗಿ, ಮಾಹಿತಿಗಾಗಿ ಪ್ರಶ್ನೆ ಕೇಳಿದ್ದೇನೆ. ಈ ಕ್ಷುಲ್ಲಕ ವಿಷಯಕ್ಕೆ ಹೀಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ' ಎಂದಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications