Get Updates
Get notified of breaking news, exclusive insights, and must-see stories!

ಭ್ರಷ್ಟಾಚಾರವನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ: ಬಿಜೆಪಿ ವಕ್ತಾರ ಸಂಬಿತ್ ಪಾತ್ರ

ರಾಯ್‌ಪುರ, ಜುಲೈ 26: ಕಾಂಗ್ರೆಸ್‌ ಪಕ್ಷದವರು ತಮಗೆ ಲೂಟಿ ಮಾಡಲು ಅಧಿಕಾರ ಇದೆ ಎಂದು ಭಾವಿಸಿದ್ದಾರೆ. ಲೂಟಿ ಮಾಡಿದರೂ ಅವರನ್ನು ಯಾರೂ ಪ್ರಶ್ನಿಸಬಾರದು ಎಂದು ಕಾಂಗ್ರೆಸ್ ಮುಖಂಡರು ಅಂದುಕೊಳ್ಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮಂಗಳಾರ ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಕಿಡಿಕಾರಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಪ್ರಶ್ನಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಸತ್ಯಾಗ್ರಹದ ವಿರುದ್ಧ ಸಂಬಿತ್ ಪಾತ್ರ ವಾಗ್ದಾಳಿ ನಡೆಸಿದ್ದಾರೆ. ಎರಡನೇ ಸುತ್ತಿನ ವಿಚಾರಣೆಗಾಗಿ ಸೋನಿಯಾ ಗಾಂಧಿ ಮಂಗಳವಾರ ದೆಹಲಿಯಲ್ಲಿ ಇಡಿ ಮುಂದೆ ಹಾಜರಾಗಿದ್ದರು.

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಬಿಜೆಪಿ ಕಚೇರಿ ಕುಶಾಬೌ ಠಾಕ್ರೆ ಪರಿಸರದಲ್ಲಿ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾತ್ರಾ, "ಕಾಂಗ್ರೆಸ್‌ ಇ.ಡಿ ಎಂದರೆ 'ಡಕಾಯಿತಿ ಮಾಡಲು ಅನುಮತಿ' (entitlement for dacoity) ಎಂದು ಭಾವಿಸಿದೆ ಎನಿಸುತ್ತದೆ. ಮತ್ತು ಅವರು ಮಾಡುವ ಡಕಾಯಿತಿ ಬಗ್ಗೆ ಯಾರೂ ಪ್ರಶ್ನೆ ಮಾಡಬಾರದು ಎಂದು ಕಾಂಗ್ರೆಸ್ ಭಾವಿಸುತ್ತದೆ" ಎಂದು ಅವರು ಹೇಳಿದರು.

 ಬಿಜೆಪಿ ಎಂದಿಗೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ

ಬಿಜೆಪಿ ಎಂದಿಗೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ

ಭ್ರಷ್ಟಾಚಾರವನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಮುಂದೆ ಸೋನಿಯಾ ಗಾಂಧಿ ತನಿಖೆಗೆ ಹಾಜರಾದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸತ್ಯಾಗ್ರಹದ ನಾಟಕ ಮಾಡುತ್ತಿರುವ ರೀತಿಯನ್ನು ಇಡೀ ದೇಶ ಗಮನಿಸುತ್ತಿದೆ,'' ಎಂದು ಹೇಳಿದರು.

ತಪ್ಪಿತಸ್ಥರ ವಿರುದ್ಧ ತನಿಖೆ ಮಾಡುವುದು ಸರಿಯಾದ ಕ್ರಮವಾಗಿದೆ. ನೆಲದ ಕಾನೂನು ಅದರ ಬಗ್ಗೆ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತದೆ. ಇದೇ ಭಾರತದ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಅವರು ಬಣ್ಣಿಸಿದರು.

 ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಸಂಬಿತ್ ಪಾತ್ರ ಕಿಡಿ

ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಸಂಬಿತ್ ಪಾತ್ರ ಕಿಡಿ

ಸತ್ಯಾಗ್ರಹ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ಸಂಬಿತ್ ಪಾತ್ರ ವಾಗ್ದಾಳಿ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರೇ ನಮಗೆ ನಿಮ್ಮ ತಪ್ಪೊಪ್ಪಿಗೆ ಬೇಕೆ ಹೊರತು, ಗದ್ದಲ ಮಾಡುವುದಲ್ಲ ಎಂದು ಹೇಳಿದ್ದಾರೆ.

ಸೋನಿಯಾ ಗಾಂಧಿ ವಿಚಾರಣೆ ಮಾಡುವುದರ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಏನರ್ಥ. ತಪ್ಪು ಮಾಡಿದವರನ್ನು ವಿಚಾರಿಸುವುದು ಬೇಡವೇ, ಕಾನೂನು ಪ್ರಕಾರವೇ ವಿಚಾರಣೆ ನಡೆಯುತ್ತಿರುವಾಗ ಇವರು ವಿರೋಧಿಸುತ್ತಿರುವುದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

 ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ಪ್ರಸ್ತಾಪ

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ಪ್ರಸ್ತಾಪ

ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿರುವ ಶಿಕ್ಷಕರ ನೇಮಕಾತಿ ಪ್ರಕರಣದ ಬಗ್ಗೆಯೂ ಅವರು ಪ್ರಸ್ತಾಪ ಮಾಡಿದರು. "ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಅವರಿಂದ 21 ಕೋಟಿ ರುಪಾಯಿ ವಶಪಡಿಸಿಕೊಳ್ಳಲಾಗಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ಅವರಿಂದ ಕೂಡ ನಗದು ಹಣ ವಶಪಡಿಸಿಕೊಳ್ಳಲಾಗಿದೆ, ಸೋನಿಯಾ ಗಾಂಧಿ ವಿಚಾರಣೆ ಎದುರಿಸುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣ 5000 ಕೋಟಿ ರುಪಾಯಿ ವಂಚನೆಯದ್ದು" ಎಂದು ಅವರು ಆರೋಪಿಸಿದ್ದಾರೆ.
ಹಾಗಾದರೆ ಈ ಪ್ರಕರಣಗಳಲ್ಲಿ ತನಿಖೆ ನಡೆಸಬಾರದು ಎಂದು ಅವರು ಹೇಳುತ್ತಾರಾ, ಪ್ರತಿಪಕ್ಷಗಳಿಗೆ ತನಿಖೆ ನಡೆಸುವುದು ಇಷ್ಟವಿಲ್ಲ ಎಂದರೆ ಸುಮ್ಮನಾಗಬೇಕೆ? ಅವರ ಅರ್ಹತೆಯ ಪ್ರಜ್ಞೆಯಿಂದ ತನಿಖೆಯನ್ನು ನಿಲ್ಲಿಸಬೇಕೇ? ಎಂದು ಪ್ರಶ್ನಿಸಿದ್ದಾರೆ.

 ಆರೋಪಗಳು ಬಂದಾಗ ಪ್ರಶ್ನಿಸುವುದು ಅನಿವಾರ್ಯ

ಆರೋಪಗಳು ಬಂದಾಗ ಪ್ರಶ್ನಿಸುವುದು ಅನಿವಾರ್ಯ

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ 5,000 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಬಂದಾಗ, ಸಹಜವಾಗಿಯೇ ಇ.ಡಿ ಅವರನ್ನು ಪ್ರಶ್ನಿಸಿದೆ.

ಸ್ವಾತಂತ್ಯ್ರ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದವರಿಗೆ ಸೇರಿದ ಆಸ್ತಿಯನ್ನು ಅಕ್ರಮವಾಗಿ ಕಬಳಿಸಲಾಗಿದೆ ಎಂದು ಆರೋಪವಿದೆ. ಇದಕ್ಕಾಗಿ ಅವರು ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಸಂಬಿತ್ ಪಾತ್ರ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+