ಪತ್ರಕರ್ತರ ಮೇಲೆ ಹಲ್ಲೆ, ಸಂಜಯ್ ದತ್ ವಿರುದ್ಧ ದೂರು
ನಟ ಸಂಜಯ್ ದತ್ ಅವರು ಜೈಲಿನಿಂದ ಹೊರ ಬಂದ ಮೇಲೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ. ಭೂಮಿ ಚಿತ್ರದ ಶೂಟಿಂಗ್ ವೇಳೆ ಸಂಜಯ್ ದತ್ ಅವರ ಬೌನ್ಸರ್ ಗಳು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಆಗ್ರಾ, ಮಾರ್ಚ್ 03: ನಟ ಸಂಜಯ್ ದತ್ ಅವರು ಜೈಲಿನಿಂದ ಹೊರ ಬಂದ ಮೇಲೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ. ಭೂಮಿ ಚಿತ್ರದ ಶೂಟಿಂಗ್ ವೇಳೆ ಸಂಜಯ್ ದತ್ ಅವರ ಬೌನ್ಸರ್ ಗಳು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಆಗ್ರಾದ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆ ನಡೆದ ವೇಳೆಯಲ್ಲಿ ಸಂಜಯ್ ದತ್ ಕೂಡಾ ಇದ್ದರು ಎಂದು ತಿಳಿದು ಬಂದಿದೆ.

ಐದಾರು ಮಂದಿ ಪತ್ರಕರ್ತರಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸಂಜಯ್ ದತ್ ಅವರು ಕ್ಷಮೆಯಾಚಿಸಿದ್ದಾರೆ.
ಆಗ್ರಾದಲ್ಲಿ ಶೂಟಿಂಗ್ ವೇಳೆ ಗದ್ದಲ ಏರ್ಪಟ್ಟು ಶೂಟಿಂಗ್ ಗೆ ತೊಂದರೆ ಉಂಟಾಗಿತ್ತು. ಇದನ್ನು ಚಿತ್ರೀಕರಿಸಿ ವರದಿ ಮಾಡಲು ಬಂದ ಸ್ಥಳೀಯ ವರದಿಗಾರರಿಗೆ ಸಂಜಯ್ ದತ್ ಅವರ ಬಾಡಿಗಾರ್ಡ್ ಗಳು ಗೂಸಾ ಕೊಟ್ಟಿದ್ದಾರೆ. ಸಾಲದ್ದಕ್ಕೆ ಸಾರ್ವಜನಿಕರನ್ನು ಚದುರಿಸಲು ಪೊಲೀಸರು ಬೀಸಿದ ದೊಣ್ಣೆ ಪತ್ರಕರ್ತರಿಗೂ ಬಿದ್ದಿದೆ ಎನ್ನಲಾಗಿದೆ.
#Breakingnews @duttsanjay's bodyguards beat up media during #bhoomi shoot!#sanjaydutt pic.twitter.com/nKyRLoOdvg
— India Forums (@indiaforums) March 3, 2017
ಅಮೀರ್ ಖಾನ್ ಅವರ ಪಿಕೆ ಚಿತ್ರದಲ್ಲಿ ನಟಿಸಿದ್ದ ಸಂಜಯ್ ಅವರು ಈಗ ಭೂಮಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಂಜಯ್ ಜತೆಗೆ ಅದಿತಿ ರಾವ್ ಹೈದರಿ, ಶೇಖರ್ ಸುಮನ್ ಕೂಡಾ ತಾರಾಗಣದಲ್ಲಿದ್ದಾರೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪ ಸಾಬೀತಾಗಿ ಜೈಲು ಸೇರಿದ್ದ ಬಾಲಿವುಡ್ ನಟ 57 ವರ್ಷ ವಯಸ್ಸಿನ ಸಂಜಯ್ ದತ್ ಅವರು 42 ತಿಂಗಳು ಶಿಕ್ಷೆ ಅನುಭವಿಸಿ ಪುಣೆಯ ಯೆರವಾಡ ಜೈಲಿನಿಂದ ಬಿಡುಗಡೆಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications