ಪತ್ರಕರ್ತರ ಮೇಲೆ ಹಲ್ಲೆ, ಸಂಜಯ್ ದತ್ ವಿರುದ್ಧ ದೂರು
ನಟ ಸಂಜಯ್ ದತ್ ಅವರು ಜೈಲಿನಿಂದ ಹೊರ ಬಂದ ಮೇಲೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ. ಭೂಮಿ ಚಿತ್ರದ ಶೂಟಿಂಗ್ ವೇಳೆ ಸಂಜಯ್ ದತ್ ಅವರ ಬೌನ್ಸರ್ ಗಳು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಆಗ್ರಾ, ಮಾರ್ಚ್ 03: ನಟ ಸಂಜಯ್ ದತ್ ಅವರು ಜೈಲಿನಿಂದ ಹೊರ ಬಂದ ಮೇಲೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ. ಭೂಮಿ ಚಿತ್ರದ ಶೂಟಿಂಗ್ ವೇಳೆ ಸಂಜಯ್ ದತ್ ಅವರ ಬೌನ್ಸರ್ ಗಳು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಆಗ್ರಾದ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆ ನಡೆದ ವೇಳೆಯಲ್ಲಿ ಸಂಜಯ್ ದತ್ ಕೂಡಾ ಇದ್ದರು ಎಂದು ತಿಳಿದು ಬಂದಿದೆ.

ಐದಾರು ಮಂದಿ ಪತ್ರಕರ್ತರಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸಂಜಯ್ ದತ್ ಅವರು ಕ್ಷಮೆಯಾಚಿಸಿದ್ದಾರೆ.
ಆಗ್ರಾದಲ್ಲಿ ಶೂಟಿಂಗ್ ವೇಳೆ ಗದ್ದಲ ಏರ್ಪಟ್ಟು ಶೂಟಿಂಗ್ ಗೆ ತೊಂದರೆ ಉಂಟಾಗಿತ್ತು. ಇದನ್ನು ಚಿತ್ರೀಕರಿಸಿ ವರದಿ ಮಾಡಲು ಬಂದ ಸ್ಥಳೀಯ ವರದಿಗಾರರಿಗೆ ಸಂಜಯ್ ದತ್ ಅವರ ಬಾಡಿಗಾರ್ಡ್ ಗಳು ಗೂಸಾ ಕೊಟ್ಟಿದ್ದಾರೆ. ಸಾಲದ್ದಕ್ಕೆ ಸಾರ್ವಜನಿಕರನ್ನು ಚದುರಿಸಲು ಪೊಲೀಸರು ಬೀಸಿದ ದೊಣ್ಣೆ ಪತ್ರಕರ್ತರಿಗೂ ಬಿದ್ದಿದೆ ಎನ್ನಲಾಗಿದೆ.
#Breakingnews @duttsanjay's bodyguards beat up media during #bhoomi shoot!#sanjaydutt pic.twitter.com/nKyRLoOdvg
— India Forums (@indiaforums) March 3, 2017
ಅಮೀರ್ ಖಾನ್ ಅವರ ಪಿಕೆ ಚಿತ್ರದಲ್ಲಿ ನಟಿಸಿದ್ದ ಸಂಜಯ್ ಅವರು ಈಗ ಭೂಮಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಂಜಯ್ ಜತೆಗೆ ಅದಿತಿ ರಾವ್ ಹೈದರಿ, ಶೇಖರ್ ಸುಮನ್ ಕೂಡಾ ತಾರಾಗಣದಲ್ಲಿದ್ದಾರೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪ ಸಾಬೀತಾಗಿ ಜೈಲು ಸೇರಿದ್ದ ಬಾಲಿವುಡ್ ನಟ 57 ವರ್ಷ ವಯಸ್ಸಿನ ಸಂಜಯ್ ದತ್ ಅವರು 42 ತಿಂಗಳು ಶಿಕ್ಷೆ ಅನುಭವಿಸಿ ಪುಣೆಯ ಯೆರವಾಡ ಜೈಲಿನಿಂದ ಬಿಡುಗಡೆಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications