Bus Accident: ಆಂಧ್ರಪ್ರದೇಶದಲ್ಲಿ ಮತ್ತೊಂದು ಬಸ್ ಬೆಂಕಿ ಅವಘಡ
ಆಂಧ್ರಪ್ರದೇಶ: ದೇಶದಲ್ಲಿ ಮತ್ತೊಂದು ಬಸ್ ಬೆಂಕಿ ಅವಘಡ ಸಂಭವಿಸಿದ್ದು, ಖಾಸಗಿ ಬಸ್ ಬೆಂಕಿಗೆ ಸಂಪೂರ್ಣವಾಗಿ ಭಸ್ಮವಾಗಿದೆ. ನೆರೆಯ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಕೊವ್ವೂರು ಗ್ರಾಮ ಸೇತುವೆ ಬಳಿ ಟ್ರಾವೆಲ್ಸ್ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣ ಬಸ್ ಸುಟ್ಟು ಕರಕಲಾಗಿದೆ. ಈ ಬಸ್ ಖಮ್ಮಂನಿಂದ ವಿಶಾಖಪಟ್ಟಣ ಮಾರ್ಗವಾಗಿ ಸಂಚರಿಸುತ್ತಿತ್ತು ಎಂದು ಹೇಳಲಾಗಿದೆ.
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಸ್ ಬೆಂಕಿ ಅವಘಡ, ಬಸ್ ಅಪಘಾತ ಸೇರಿದಂತೆ ಖಾಸಗಿ ಬಸ್ಗಳಲ್ಲಿ ಕೆಲವೊಂದು ಅಹಿತಕರ ಘಟನೆಗಳು ಸಂಭವಿಸುತ್ತಿವೆ. ಇದೀಗ ಆಂಧ್ರಪ್ರದೇಶದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಕೊವ್ವುರು ಗ್ರಾಮ ಸೇತುವೆ ಬಳಿ ಆರ್ಆರ್ಆರ್ ಟ್ರಾವೆಲ್ಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬಸ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಚಾಲಕ ತಿಳಿಸಿದ್ದಾರೆ.

ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಣೆ
ಇನ್ನು ಆರ್ಆರ್ಆರ್ ಖಾಸಗಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಬೆನ್ನಲ್ಲೇ ಪ್ರಯಾಣಿಕರನ್ನು ಬಸ್ನಿಂದ ಹೊರಕ್ಕೆ ಕಳುಹಿಸಲಾಗಿದೆ. ಪ್ರಾಥಮಿಕ ವರದಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ 10ಕ್ಕೂ ಹೆಚ್ಚು ಜನರ ಜೀವ ಉಳಿದಿದೆ. ಬುಧವಾರ ಮುಂಜಾನೆ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಘಟನೆಯ ಹಿನ್ನೆಲೆ ಏನು
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕೊವ್ವೂರ್ನಲ್ಲಿ ಟ್ರಾವೆಲ್ ಬಸ್ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದಾರೆ. ಬಸ್ಗೆ ತಗುಲಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಮ್ಮಮ್ನಿಂದ ವಿಶಾಖಪಟ್ಟಣಂಗೆ ಹೋಗುತ್ತಿದ್ದ ಆರ್ಆರ್ಆರ್ ಟ್ರಾವೆಲ್ಸ್ ಬಸ್ ಇದಾಗಿದ್ದು. ಕೊವ್ವೂರು-ರಾಜಮಂಡ್ರಿ ಸೇತುವೆ ತಲುಪುತ್ತಿದ್ದಂತೆಯೇ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸೆಲ್ಫ್ ಮೋಟಾರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅಪಘಾತ ಸಂಭವಿಸಿದೆ ಎಂದು ಡಿಎಸ್ಪಿ ದೇವಕುಮಾರ್ ಮತ್ತು ಸಿಐ ವಿಶ್ವಂ ಅವರು ತಿಳಿಸಿದ್ದಾರೆ. ಎಂಜಿನ್ ಮತ್ತು ಡ್ಯಾಶ್ಬೋರ್ಡ್ನಿಂದ ಹೊಗೆ ಬರುತ್ತಿದ್ದರಿಂದ ಚಾಲಕ ಎಚ್ಚೆತ್ತುಕೊಂಡು ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೆಚ್ಚುತ್ತಿದೆ ಖಾಸಗಿ ಬಸ್ಗಳ ಬೆಂಕಿ ಅವಘಡ
ಇನ್ನು ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಬಸ್ ಬೆಂಕಿ ಅವಘಡ ಹಾಗೂ ಬಸ್ ಅಪಘಾತಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಇನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿವೆ. ಈಚೆಗೆ ಕರ್ನೂಲ್ ಬಳಿ ಕಾವೇರಿ ಟ್ರಾವೆಲ್ಸ್ ಬಸ್ ಅಪಘಾತದಲ್ಲಿ 42 ಪ್ರಯಾಣಿಕರು ಜೀವಂತ ದಹನವಾಗಿದ್ದರು.
ಚೆವೆಲ್ಲಾ ಬಳಿ ಟಿಜಿಎಸ್ಆರ್ಟಿಸಿ ಬಸ್ಗೆ ಟಿಪ್ಪರ್ ಡಿಕ್ಕಿ ಹೊಡೆದು 18 ಜನರು ಸಾವನ್ನಪ್ಪಿದ್ದರು. ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿತು. ಈ ಘಟನೆಯಲ್ಲಿ ಅನೇಕರು ಸಾವನ್ನಪ್ಪಿದರು. ಪದೇ ಪದೇ ಖಾಸಗಿ ಬಸ್ಗಳ ಅಪಘಾತ ಸಂಭವಿಸುತ್ತಿದ್ದು ಸರ್ಕಾರ ತುರ್ತು ಕ್ರಮ ತೆಗೆದುಕೊಳ್ಳಬೇಕು ಹಾಗೂ ಖಾಸಗಿ ಬಸ್ಗಳ ಸಂಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ರೂಪಿಸಬೇಕು ಎನ್ನುವ ಆಗ್ರಹ ಹೆಚ್ಚಳವಾಗಿದೆ.
-
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್












Click it and Unblock the Notifications