Get Updates
Get notified of breaking news, exclusive insights, and must-see stories!

Bus Accident: ಆಂಧ್ರಪ್ರದೇಶದಲ್ಲಿ ಮತ್ತೊಂದು ಬಸ್ ಬೆಂಕಿ ಅವಘಡ

ಆಂಧ್ರಪ್ರದೇಶ: ದೇಶದಲ್ಲಿ ಮತ್ತೊಂದು ಬಸ್ ಬೆಂಕಿ ಅವಘಡ ಸಂಭವಿಸಿದ್ದು, ಖಾಸಗಿ ಬಸ್ ಬೆಂಕಿಗೆ ಸಂಪೂರ್ಣವಾಗಿ ಭಸ್ಮವಾಗಿದೆ. ನೆರೆಯ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಕೊವ್ವೂರು ಗ್ರಾಮ ಸೇತುವೆ ಬಳಿ ಟ್ರಾವೆಲ್ಸ್ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣ ಬಸ್ ಸುಟ್ಟು ಕರಕಲಾಗಿದೆ. ಈ ಬಸ್ ಖಮ್ಮಂನಿಂದ ವಿಶಾಖಪಟ್ಟಣ ಮಾರ್ಗವಾಗಿ ಸಂಚರಿಸುತ್ತಿತ್ತು ಎಂದು ಹೇಳಲಾಗಿದೆ.

ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಸ್ ಬೆಂಕಿ ಅವಘಡ, ಬಸ್ ಅಪಘಾತ ಸೇರಿದಂತೆ ಖಾಸಗಿ ಬಸ್‌ಗಳಲ್ಲಿ ಕೆಲವೊಂದು ಅಹಿತಕರ ಘಟನೆಗಳು ಸಂಭವಿಸುತ್ತಿವೆ. ಇದೀಗ ಆಂಧ್ರಪ್ರದೇಶದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಕೊವ್ವುರು ಗ್ರಾಮ ಸೇತುವೆ ಬಳಿ ಆರ್‌ಆರ್‌ಆರ್ ಟ್ರಾವೆಲ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬಸ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಚಾಲಕ ತಿಳಿಸಿದ್ದಾರೆ.

Sankranti Rush Travel Bus Catches Fire Near Kovvuru Bridge in Andhra Pradesh

ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಣೆ

ಇನ್ನು ಆರ್‌ಆರ್‌ಆರ್ ಖಾಸಗಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಬೆನ್ನಲ್ಲೇ ಪ್ರಯಾಣಿಕರನ್ನು ಬಸ್‌ನಿಂದ ಹೊರಕ್ಕೆ ಕಳುಹಿಸಲಾಗಿದೆ. ಪ್ರಾಥಮಿಕ ವರದಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ 10ಕ್ಕೂ ಹೆಚ್ಚು ಜನರ ಜೀವ ಉಳಿದಿದೆ. ಬುಧವಾರ ಮುಂಜಾನೆ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಘಟನೆಯ ಹಿನ್ನೆಲೆ ಏನು

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕೊವ್ವೂರ್‌ನಲ್ಲಿ ಟ್ರಾವೆಲ್ ಬಸ್ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದಾರೆ. ಬಸ್‌ಗೆ ತಗುಲಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಖಮ್ಮಮ್‌ನಿಂದ ವಿಶಾಖಪಟ್ಟಣಂಗೆ ಹೋಗುತ್ತಿದ್ದ ಆರ್‌ಆರ್‌ಆರ್ ಟ್ರಾವೆಲ್ಸ್ ಬಸ್ ಇದಾಗಿದ್ದು. ಕೊವ್ವೂರು-ರಾಜಮಂಡ್ರಿ ಸೇತುವೆ ತಲುಪುತ್ತಿದ್ದಂತೆಯೇ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸೆಲ್ಫ್ ಮೋಟಾರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಪಘಾತ ಸಂಭವಿಸಿದೆ ಎಂದು ಡಿಎಸ್‌ಪಿ ದೇವಕುಮಾರ್ ಮತ್ತು ಸಿಐ ವಿಶ್ವಂ ಅವರು ತಿಳಿಸಿದ್ದಾರೆ. ಎಂಜಿನ್ ಮತ್ತು ಡ್ಯಾಶ್‌ಬೋರ್ಡ್‌ನಿಂದ ಹೊಗೆ ಬರುತ್ತಿದ್ದರಿಂದ ಚಾಲಕ ಎಚ್ಚೆತ್ತುಕೊಂಡು ಪ್ರಯಾಣಿಕರನ್ನು ಬಸ್‌ನಿಂದ ಕೆಳಗೆ ಇಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೆಚ್ಚುತ್ತಿದೆ ಖಾಸಗಿ ಬಸ್‌ಗಳ ಬೆಂಕಿ ಅವಘಡ

ಇನ್ನು ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಬಸ್ ಬೆಂಕಿ ಅವಘಡ ಹಾಗೂ ಬಸ್ ಅಪಘಾತಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಇನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿವೆ. ಈಚೆಗೆ ಕರ್ನೂಲ್ ಬಳಿ ಕಾವೇರಿ ಟ್ರಾವೆಲ್ಸ್ ಬಸ್ ಅಪಘಾತದಲ್ಲಿ 42 ಪ್ರಯಾಣಿಕರು ಜೀವಂತ ದಹನವಾಗಿದ್ದರು.

ಚೆವೆಲ್ಲಾ ಬಳಿ ಟಿಜಿಎಸ್‌ಆರ್‌ಟಿಸಿ ಬಸ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು 18 ಜನರು ಸಾವನ್ನಪ್ಪಿದ್ದರು. ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿತು. ಈ ಘಟನೆಯಲ್ಲಿ ಅನೇಕರು ಸಾವನ್ನಪ್ಪಿದರು. ಪದೇ ಪದೇ ಖಾಸಗಿ ಬಸ್‌ಗಳ ಅಪಘಾತ ಸಂಭವಿಸುತ್ತಿದ್ದು ಸರ್ಕಾರ ತುರ್ತು ಕ್ರಮ ತೆಗೆದುಕೊಳ್ಳಬೇಕು ಹಾಗೂ ಖಾಸಗಿ ಬಸ್‌ಗಳ ಸಂಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ರೂಪಿಸಬೇಕು ಎನ್ನುವ ಆಗ್ರಹ ಹೆಚ್ಚಳವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+