ಚಿಟ್ ಫಂಡ್ ಹಗರಣ : ನಟ ಮಿಥುನ್ ಹಣ ವಾಪಸ್ ಮಾಡಿದ್ದೇಕೆ?
ಕೋಲ್ಕತ್ತಾ, ಜೂ.16: ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಸಿಲುಕಿರುವ ನಟ, ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ಮಂಗಳವಾರ ಜಾರಿ ನಿರ್ದೇಶನಾಲಯಕ್ಕೆ 1.19 ಕೋಟಿ ರು ಹಿಂದಕ್ಕೆ ನೀಡಿ ಸುದ್ದಿಯಾಗಿದ್ದಾರೆ.
ಶಾರಾದಾ ಸಮೂಹದ ಆಯೋಜನೆಯ ಚಾಟ್ ಶೋ ನಡೆಸಿಕೊಡಲು ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸಂಸದ, ನಟ ಮಿಥುನ್ ಚಕ್ರವರ್ತಿ ಅವರು ಭಾರಿ ಮೊತ್ತದ ಸಂಭಾವನೆ ಪಡೆದಿದ್ದರು. ಅದರೆ, ಸುದಿಪ್ತೋ ಸೇನ್ ಮಾಲೀಕತ್ವದ ಶಾರದಾ ಸಮೂಹದ ಚಿಟ್ ಫಂಡ್ ಅವ್ಯವಹಾರ ಬಯಲಿಗೆ ಬಂದ ಮೇಲೆ ಮಿಥುನ್ ಅವರ ಮೇಲೆ ಜಾರಿ ನಿರ್ದೇಶನಾಲಯದ ಕಣ್ಣು ಬಿದ್ದಿತ್ತು.
ಸುಮಾರು 20,000 ಕೋಟಿ ರು ಮೌಲ್ಯ ಹಗರಣದ ರುವಾರಿಗಳಾದ ಪಶ್ಚಿಮ ಬಂಗಾಳದ ಬ್ಲೇಡ್ ಕಂಪನಿ ಸ್ಥಾಪಕರು ಸದ್ಯ ಜೈಲಿನಲ್ಲಿದ್ದಾರೆ. ತನಿಖೆ ಮುಂದುವರೆದಿದೆ.[ಭಾರತವನ್ನು ತಲ್ಲಣಗೊಳಿಸಿದ ಟಾಪ್ 7 ಹಗರಣಗಳು]

ನುಡಿದಂತೆ ನಡೆದ ಮಿಥುನ್
ಕಳೆದ ತಿಂಗಳು ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಪಟ್ಟಿದ್ದ ಮಿಥುನ್ ಅವರು, ತಾವು ಪಡೆದ ಅಷ್ಟು ಮೊತ್ತವನ್ನು ಹಿಂತಿರುಗಿಸುವುದಾಗಿ ಹೇಳಿದ್ದರು. ಅದರಂತೆ, ಮೊತ್ತವನ್ನು ನೀಡಿ ಕ್ಲೀನ್ ಚಿಟ್ ಪಡೆದುಕೊಂಡಿದ್ದಾರೆ. [ವಂಚನೆ: ಅಪರ್ಣಾ ಸೇನ್ ವಿಚಾರಣೆ]
ಇಷ್ಟಕ್ಕೂ ಅಷ್ಟು ದೊಡ್ಡ ಮೊತ್ತ ನೀಡಿದ್ದೇಕೆ ಎಂಬುದಕ್ಕೆ ಉತ್ತರಿಸಿರುವ ಮಿಥುನ್, ಶಾರದಾ ಸಂಸ್ಥೆಯಿಂದ ಅನೇಕ ಮಂದಿ ವಂಚಿತರಾಗಿದ್ದಾರೆ. ನಾನು ನೀಡುವ ಮೊತ್ತದಿಂದ ಅವರಿಗೆ ಅಲ್ಪಮಟ್ಟದ ರಿಲೀಫ್ ಸಿಗುತ್ತದೆ ಎಂದಿದ್ದಾರೆ.
ನಾನು ರಾಜಕೀಯ ಆಧಾರಿತ ಚಾಟ್ ಶೋ ನಡೆಸಿಕೊಡಲು ಒಪ್ಪಿದ್ದೆ ಅದಕ್ಕಾಗಿ ಹಣ ಪಡೆದಿದ್ದೆ ಅಷ್ಟು ಬಿಟ್ಟರೆ ಯಾರನ್ನೂ ವಂಚಿಸುವ ಉದ್ದೇಶ ನನಗಿಲ್ಲ ಎಂದಿದ್ದಾರೆ.ಜಾರಿ ನಿರ್ದೇಶನಾಲಯದ ತನಿಖೆಗೆ ಸಹಕರಿಸಿ ಸೂಕ್ತ ದಾಖಲೆಗಳನ್ನು ಒದಗಿಸಿದ್ದರು. ಮಿಥುನ್ ನೀಡಿದ ಹೇಳಿಕೆ, ದಾಖಲೆ ಹಾಗೂ ಈಗ ನೀಡಿರುವ ಮೊತ್ತ ಎಲ್ಲವನ್ನು ಪರಿಶೀಲಿಸಿದ ಜಾರಿ ನಿರ್ದೇಶನಾಲಯ ನಟ ಮಿಥುನ್ ಗೆ ದೊಡ್ಡ ರಿಲೀಫ್ ನೀಡಿದೆ. (ಒನ್ ಇಂಡಿಯಾ ಸುದ್ದಿ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications