ಕಾಶ್ಮೀರ-ಕನ್ಯಾಕುಮಾರಿ ಒಂದು ಮಾಡಿದ ಶಕ್ತಿಗೆ ನಮಿಸಿದ ಪ್ರಧಾನಿ
ನವದೆಹಲಿ, ಅಕ್ಟೋಬರ್, 31: ಭಾರತದ ಉಕ್ಕಿನ ಮನುಪ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ದಿವ್ಯ ಚೇತನಕ್ಕೆ ನಮನ ಸಲ್ಲಿಸಿದರು.
ಪಟೇಲ್ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿವಸ್ಗೆ ಚಾಲನೆ ನೀಡಿದ ನರೇಂದ್ರ ಮೋದಿ, ಸಂಸತ್ ಬಳಿ ಇರುವ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ರಾಜಪಥ್ನ ವಿಜಯ ಚೌಕದ ಬಳಿ ಏರ್ಪಡಿಸಿದ ಏಕತೆಗಾಗಿ ಓಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಏಕತೆಯ ಪ್ರತಿಜ್ಞೆ ಬೋಧಿಸಿದರು.[ನರೇಂದ್ರ ಮೋದಿಯ ಕೋಟಿ ಆಫರ್ ಬೇಡ ಎಂದ ಈಧಿ]
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ನರೇಂದ್ರ ಮೋದಿ ಭಾಷಣದ ಹೈಲೈಟ್ಸ್ಗೆ ಮುಂದಿನ ಸ್ಲೈಡ್ಸ್ ಕ್ಲಿಕ್ ಮಾಡಿ...

ರಾಷ್ಟ್ರೀಯ ಏಕತೆ ದಿನವಾಗಲಿ
ಏಕತೆ ನಮ್ಮ ದೊಡ್ಡ ಶಕ್ತಿ. ಅದನ್ನು ಕಾಪಾಡಿಕೊಳ್ಳುವುದು ಹೇಗೆ ಎಂಬುದನ್ನು ಪಟೇಲರು ಕಲಿಸಿಕೊಟ್ಟಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಮುಂದೆ ನಡೆದರೆ ದೇಶದ ಸಮಗ್ರ ಅಭಿವೃದ್ಧಿ ಸುಲಭ.

ಇಂದಿರಾ ನೆನೆದ ಪ್ರಧಾನಿ
ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ದೇಶಕ್ಕೆ ನೀಡಿದ ಸೇವೆ ಮರೆಯುವಂತಿಲ್ಲ. ಅವರ ಪುಣ್ಯ ತಿಥಿ ದಿನ ಇಡೀ ದೇಶವೇ ಅವರನ್ನು ಮತ್ತೆ ನೆನಪು ಮಾಡಿಕೊಳ್ಳಬೇಕಿದೆ.

ಕಾಶ್ಮೀರ-ಕನ್ಯಾಕುಮಾರಿ ಒಂದು ಮಾಡಿದ ಶಕ್ತಿ
ಸ್ವಾತಂತ್ರ್ಯಾನಂತರ ದೇಶದಲ್ಲಿ ಹರಿದು ಹಂಚಿ ಹೋಗಿದ್ದ ಸಂಸ್ಥಾನಗಳನ್ನು ಒಂದು ಮಾಡಿದ ಪಟೇಲರ ಸಾಧನೆ ಇತಿಹಾಸವಾಗಿದೆ. ಕಾಶ್ಮೀರ-ಕನ್ಯಾಕುಮಾರಿ ಒಂದು ಮಾಡಿದ ಶಕ್ತಿಯನ್ನು ಬೇರೆ ಯಾರೊಂದಿಗೂ ಹೋಲಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ.

ಸ್ವಚ್ಛ ಭಾರತದ ಕಲ್ಪನೆ
ಪಟೇಲರು ಅಹಮದಾಬಾದಿನ ಮೇಯರ್ ಆಗಿದ್ದಾಗಲೇ ಸ್ವಚ್ಛ ಭಾರತ ಕಲ್ಪನೆ ಆರಂಭಿಸಿದ್ದರು. ಅವರ ಆಡಳಿತದಲ್ಲಿ 222 ದಿನಗಳ ಕಾಲ ನಡೆದ ಸ್ವಚ್ಛತಾ ಜಾಗೃತಿ ಅಭಿಯಾನವೇ ಇದಕ್ಕೆ ಸಾಕ್ಷಿ.

ಮಹಿಳಾ ಮೀಸಲಾತಿಗೆ ನಾಂದಿ
ಪಟೇಲರು ಅಂದೆಯೇ ಮಹಿಯರ ಸ್ವಾವಲಂಬನೆಗೆ ನಾಂದಿ ಹಾಡಿದ್ದರು. ಎಲ್ಲ ಕ್ಷೇತ್ರಗಳಲ್ಲಿ ಶೇ. 50 ಮೀಸಲಾತಿ ಕಲ್ಪಿಸಬೇಕು ಎಂದು ವಾದ ಮುಂದಿಟ್ಟಿದ್ದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications