ಕಾಶ್ಮೀರ-ಕನ್ಯಾಕುಮಾರಿ ಒಂದು ಮಾಡಿದ ಶಕ್ತಿಗೆ ನಮಿಸಿದ ಪ್ರಧಾನಿ
ನವದೆಹಲಿ, ಅಕ್ಟೋಬರ್, 31: ಭಾರತದ ಉಕ್ಕಿನ ಮನುಪ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ದಿವ್ಯ ಚೇತನಕ್ಕೆ ನಮನ ಸಲ್ಲಿಸಿದರು.
ಪಟೇಲ್ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿವಸ್ಗೆ ಚಾಲನೆ ನೀಡಿದ ನರೇಂದ್ರ ಮೋದಿ, ಸಂಸತ್ ಬಳಿ ಇರುವ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ರಾಜಪಥ್ನ ವಿಜಯ ಚೌಕದ ಬಳಿ ಏರ್ಪಡಿಸಿದ ಏಕತೆಗಾಗಿ ಓಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಏಕತೆಯ ಪ್ರತಿಜ್ಞೆ ಬೋಧಿಸಿದರು.[ನರೇಂದ್ರ ಮೋದಿಯ ಕೋಟಿ ಆಫರ್ ಬೇಡ ಎಂದ ಈಧಿ]
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ನರೇಂದ್ರ ಮೋದಿ ಭಾಷಣದ ಹೈಲೈಟ್ಸ್ಗೆ ಮುಂದಿನ ಸ್ಲೈಡ್ಸ್ ಕ್ಲಿಕ್ ಮಾಡಿ...

ರಾಷ್ಟ್ರೀಯ ಏಕತೆ ದಿನವಾಗಲಿ
ಏಕತೆ ನಮ್ಮ ದೊಡ್ಡ ಶಕ್ತಿ. ಅದನ್ನು ಕಾಪಾಡಿಕೊಳ್ಳುವುದು ಹೇಗೆ ಎಂಬುದನ್ನು ಪಟೇಲರು ಕಲಿಸಿಕೊಟ್ಟಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಮುಂದೆ ನಡೆದರೆ ದೇಶದ ಸಮಗ್ರ ಅಭಿವೃದ್ಧಿ ಸುಲಭ.

ಇಂದಿರಾ ನೆನೆದ ಪ್ರಧಾನಿ
ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ದೇಶಕ್ಕೆ ನೀಡಿದ ಸೇವೆ ಮರೆಯುವಂತಿಲ್ಲ. ಅವರ ಪುಣ್ಯ ತಿಥಿ ದಿನ ಇಡೀ ದೇಶವೇ ಅವರನ್ನು ಮತ್ತೆ ನೆನಪು ಮಾಡಿಕೊಳ್ಳಬೇಕಿದೆ.

ಕಾಶ್ಮೀರ-ಕನ್ಯಾಕುಮಾರಿ ಒಂದು ಮಾಡಿದ ಶಕ್ತಿ
ಸ್ವಾತಂತ್ರ್ಯಾನಂತರ ದೇಶದಲ್ಲಿ ಹರಿದು ಹಂಚಿ ಹೋಗಿದ್ದ ಸಂಸ್ಥಾನಗಳನ್ನು ಒಂದು ಮಾಡಿದ ಪಟೇಲರ ಸಾಧನೆ ಇತಿಹಾಸವಾಗಿದೆ. ಕಾಶ್ಮೀರ-ಕನ್ಯಾಕುಮಾರಿ ಒಂದು ಮಾಡಿದ ಶಕ್ತಿಯನ್ನು ಬೇರೆ ಯಾರೊಂದಿಗೂ ಹೋಲಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ.

ಸ್ವಚ್ಛ ಭಾರತದ ಕಲ್ಪನೆ
ಪಟೇಲರು ಅಹಮದಾಬಾದಿನ ಮೇಯರ್ ಆಗಿದ್ದಾಗಲೇ ಸ್ವಚ್ಛ ಭಾರತ ಕಲ್ಪನೆ ಆರಂಭಿಸಿದ್ದರು. ಅವರ ಆಡಳಿತದಲ್ಲಿ 222 ದಿನಗಳ ಕಾಲ ನಡೆದ ಸ್ವಚ್ಛತಾ ಜಾಗೃತಿ ಅಭಿಯಾನವೇ ಇದಕ್ಕೆ ಸಾಕ್ಷಿ.

ಮಹಿಳಾ ಮೀಸಲಾತಿಗೆ ನಾಂದಿ
ಪಟೇಲರು ಅಂದೆಯೇ ಮಹಿಯರ ಸ್ವಾವಲಂಬನೆಗೆ ನಾಂದಿ ಹಾಡಿದ್ದರು. ಎಲ್ಲ ಕ್ಷೇತ್ರಗಳಲ್ಲಿ ಶೇ. 50 ಮೀಸಲಾತಿ ಕಲ್ಪಿಸಬೇಕು ಎಂದು ವಾದ ಮುಂದಿಟ್ಟಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications