ಗೋವಾ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಮೇಘಾಲಯಕ್ಕೆ ವರ್ಗಾವಣೆ
ನವದೆಹಲಿ, ಆಗಸ್ಟ್ 18: ಮೇಘಾಲಯದ ರಾಜ್ಯಪಾಲ ತಥಾಗತ ರಾಯ್ ಅವರ ಐದು ವರ್ಷದ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಅವರ ಸ್ಥಾನಕ್ಕೆ ಗೋವಾದ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರನ್ನು ನೇಮಿಸಲಾಗಿದೆ.
ಗೋವಾದ ರಾಜ್ಯಪಾಲರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಸತ್ಯ ಪಾಲ್ ಮಲಿಕ್ ಅವರನ್ನು ಮೇಘಾಲಯಕ್ಕೆ ವರ್ಗಾವಣೆ ಮಾಡಿ ರಾಷ್ಟ್ರಪತಿ ಭವನ ಮಂಗಳವಾರ ಆದೇಶ ಹೊರಡಿಸಿದೆ.
ಸತ್ಯಪಾಲ್ ಮಲಿಕ್ ಅವರ ವರ್ಗಾವಣೆಯಿಂದ ತೆರವಾಗುತ್ತಿರುವ ಗೋವಾ ರಾಜ್ಯಪಾಲರ ಹುದ್ದೆಗೆ ಯಾವುದೇ ಹೊಸಬರನ್ನು ನೇಮಿಸಿಲ್ಲ. ಬದಲಾಗಿ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಈಗಿನ ಜವಾಬ್ದಾರಿಯೊಂದಿಗೆ ಹೆಚ್ಚುವರಿ ಹೊಣೆಗಾರಿಕೆ ನಿಭಾಯಿಸುವಂತೆ ಸೂಚಿಸಲಾಗಿದೆ.

ಗೋವಾಕ್ಕೆ ಹೊಸ ರಾಜ್ಯಪಾಲರ ನೇಮಕ ಮಾಡುವವರೆಗೂ ಕೋಶ್ಯಾರಿ ಅವರೇ ಅಲ್ಲಿನ ರಾಜ್ಯಪಾಲರ ಕರ್ತವ್ಯ ನಿಭಾಯಿಸಲಿದ್ದಾರೆ. ತಥಾಗತ ರಾಯ್ ಅವರು ರಾಜ್ಯಪಾಲರಾಗಿ ಐದು ವರ್ಷದ ಗರಿಷ್ಠ ಅವಧಿ ಪೂರ್ಣಗೊಳಿಸಿದ್ದಾರೆ. ಮೊದಲ ಮೂರು ವರ್ಷ ತ್ರಿಪುರದ ರಾಜ್ಯಪಾಲರಾಗಿದ್ದ ಅವರು, ಕೊನೆಯ ಎರಡು ವರ್ಷಗಳನ್ನು ಮೇಘಾಲಯದ ರಾಜ್ಯಪಾಲರಾಗಿ ಕಳೆದಿದ್ದರು. ಅವರ ಅಧಿಕಾರಾವಧಿಯನ್ನು ಮುಂದುವರಿಸಲು ಸರ್ಕಾರ ಮುಂದಾಗಿಲ್ಲ.
ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸತ್ಯಪಾಲ್ ಸಿಂಗ್ ಅವರನ್ನು 2019ರ ಅಕ್ಟೋಬರ್ನಲ್ಲಿ ಗೋವಾ ರಾಜ್ಯಪಾಲರಾಗಿ ನೇಮಿಸಲಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications