ಮೋದಿ ಕೊಡುಗೆ: ಹಜ್ ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಳ
Recommended Video

ನವದೆಹಲಿ, ಜನವರಿ 10: ಪ್ರತಿ ವರ್ಷ ಪವಿತ್ರ ಹಜ್ ಯಾತ್ರೆಗೆ ಭಾರತದಿಂದ ತೆರಳುವ ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಳಕ್ಕೆ ಬೇಡಿಕೆ ಬರುತ್ತಿತ್ತು. ಮೋದಿ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿದ್ದು, ಭಾರತದಿಂದ ಪ್ರತಿ ವರ್ಷ ಹಜ್ ಯಾತ್ರೆಗೆ ತೆರಳುವ ಭಾರತೀಯರ ಸಂಖ್ಯಾ ಮಿತಿ ಏರಿಕೆ ಮಾಡಿದೆ. ಇತ್ತೀಚಿನ ಮನ್ ಕಿ ಬಾತ್ ನಲ್ಲಿ ಮೋದಿ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದರು. ಮಹಿಳೆಯರಿಗೆ ಹಜ್ ಯಾತ್ರೆ ಕೈಗೊಳ್ಳುವ ಅವಕಾಶವನ್ನು ಸರ್ಕಾರ ನೀಡುತ್ತಿದೆ.
5,000 ಹೆಚ್ಚುವರಿ ಹಜ್ ಯಾತ್ರಿಕರಿಗೆ ಮೆಕ್ಕಾಗೆ ಪ್ರಯಾಣ ಭಾಗ್ಯ ಒದಗಿಸಲು ಮುಂದಾಗಿರುವ ಭಾರತ ಸರ್ಕಾರದ ಕ್ರಮಕ್ಕೆ ಸೌದಿ ಅರೇಬಿಯಾ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ, ಹಜ್ ಯಾತ್ರಾರ್ಥಿಗಳ ಕೋಟಾ ಈಗ 1,75,025ಕ್ಕೇರಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ಭಾರತೀಯ ಹಜ್ ಯಾತ್ರಿಕರ ಕೋಟಾದಲ್ಲಿ ಭಾರಿ ಏರಿಕೆಗೆ ಅವಕಾಶ ಸಿಕ್ಕಿದೆ ಎಂದು ನಖ್ವಿ ತಿಳಿಸಿದರು. ಹಜ್ ಮತ್ತು ಉಮ್ರಾ ಸಚಿವರೊಂದಿಗೆ ಮೆಕ್ಕಾದಲ್ಲಿ ಸಚಿವ ನಖ್ವಿ ದ್ವಿಪಕ್ಷೀಯ ವಾರ್ಷಿಕ ಹಜ್ ಒಪ್ಪಂದಕ್ಕೆ ಸಹಿ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಳೆದ ಎರಡು ವರ್ಷಗಳಲ್ಲಿ 40,000ಕ್ಕೂ ಹೆಚ್ಚಿನ ಹಜ್ ಯಾತ್ರಿಕರಿಗೆ ಕೇಂದ್ರ ಸರ್ಕಾರದ ಮನವಿ ಮೇರೆಗೆ ಸೌದಿ ಅವಕಾಶ ಕಲ್ಪಿಸಿದೆ. ಸೌದಿಯ ರಾಜ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಜತೆ ಪ್ರಧಾನಿ ಮೋದಿ ಅವರು ಒಪ್ಪಂದ ಸ್ನೇಹ ಸಂಬಂಧ ಹೊಂದಿರುವುದರಿಂದ ಇದೆಲ್ಲ ಸಾಧ್ಯವಾಗಿದೆ ಎಂದು ಸಚಿವ ನಖ್ವಿ ಹೇಳಿದರು.
ಮಹಿಳಾ ಯಾತ್ರಿಗಳು: 2018ರಲ್ಲಿ ಹಜ್ ಯಾತ್ರೆಗಾಗಿ 3,55,000 ಅರ್ಜಿಗಳು ಬಂದಿವೆ. ಈ ಬಾರಿ ಭಾರತದಿಂದ 1,300 ಮಹಿಳೆಯರು ಮಹ್ರಾಮ್(ಪುರುಷರ ಸಂಗಾತಿಯ ನೆರವಿಲ್ಲದೆ) ಇಲ್ಲದೆ ಹಜ್ ಯಾತ್ರೆ ಕೈಗೊಳ್ಳುವ ಅವಕಾಶವೂ ಲಭಿಸಲಿದೆ. ಸಮುದ್ರಯಾನದ ಮೂಲಕ ಸೌದಿಗೆ ಪ್ರಯಾಣ ಭಾಗ್ಯ ನೀಡುವ ಬಗ್ಗೆ ಕೂಡಾ ಮಾತುಕತೆ ನಡೆಯುತ್ತಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications