ಮೋದಿ ಕೊಡುಗೆ: ಹಜ್ ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಳ
Recommended Video

ನವದೆಹಲಿ, ಜನವರಿ 10: ಪ್ರತಿ ವರ್ಷ ಪವಿತ್ರ ಹಜ್ ಯಾತ್ರೆಗೆ ಭಾರತದಿಂದ ತೆರಳುವ ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಳಕ್ಕೆ ಬೇಡಿಕೆ ಬರುತ್ತಿತ್ತು. ಮೋದಿ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿದ್ದು, ಭಾರತದಿಂದ ಪ್ರತಿ ವರ್ಷ ಹಜ್ ಯಾತ್ರೆಗೆ ತೆರಳುವ ಭಾರತೀಯರ ಸಂಖ್ಯಾ ಮಿತಿ ಏರಿಕೆ ಮಾಡಿದೆ. ಇತ್ತೀಚಿನ ಮನ್ ಕಿ ಬಾತ್ ನಲ್ಲಿ ಮೋದಿ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದರು. ಮಹಿಳೆಯರಿಗೆ ಹಜ್ ಯಾತ್ರೆ ಕೈಗೊಳ್ಳುವ ಅವಕಾಶವನ್ನು ಸರ್ಕಾರ ನೀಡುತ್ತಿದೆ.
5,000 ಹೆಚ್ಚುವರಿ ಹಜ್ ಯಾತ್ರಿಕರಿಗೆ ಮೆಕ್ಕಾಗೆ ಪ್ರಯಾಣ ಭಾಗ್ಯ ಒದಗಿಸಲು ಮುಂದಾಗಿರುವ ಭಾರತ ಸರ್ಕಾರದ ಕ್ರಮಕ್ಕೆ ಸೌದಿ ಅರೇಬಿಯಾ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ, ಹಜ್ ಯಾತ್ರಾರ್ಥಿಗಳ ಕೋಟಾ ಈಗ 1,75,025ಕ್ಕೇರಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ಭಾರತೀಯ ಹಜ್ ಯಾತ್ರಿಕರ ಕೋಟಾದಲ್ಲಿ ಭಾರಿ ಏರಿಕೆಗೆ ಅವಕಾಶ ಸಿಕ್ಕಿದೆ ಎಂದು ನಖ್ವಿ ತಿಳಿಸಿದರು. ಹಜ್ ಮತ್ತು ಉಮ್ರಾ ಸಚಿವರೊಂದಿಗೆ ಮೆಕ್ಕಾದಲ್ಲಿ ಸಚಿವ ನಖ್ವಿ ದ್ವಿಪಕ್ಷೀಯ ವಾರ್ಷಿಕ ಹಜ್ ಒಪ್ಪಂದಕ್ಕೆ ಸಹಿ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಳೆದ ಎರಡು ವರ್ಷಗಳಲ್ಲಿ 40,000ಕ್ಕೂ ಹೆಚ್ಚಿನ ಹಜ್ ಯಾತ್ರಿಕರಿಗೆ ಕೇಂದ್ರ ಸರ್ಕಾರದ ಮನವಿ ಮೇರೆಗೆ ಸೌದಿ ಅವಕಾಶ ಕಲ್ಪಿಸಿದೆ. ಸೌದಿಯ ರಾಜ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಜತೆ ಪ್ರಧಾನಿ ಮೋದಿ ಅವರು ಒಪ್ಪಂದ ಸ್ನೇಹ ಸಂಬಂಧ ಹೊಂದಿರುವುದರಿಂದ ಇದೆಲ್ಲ ಸಾಧ್ಯವಾಗಿದೆ ಎಂದು ಸಚಿವ ನಖ್ವಿ ಹೇಳಿದರು.
ಮಹಿಳಾ ಯಾತ್ರಿಗಳು: 2018ರಲ್ಲಿ ಹಜ್ ಯಾತ್ರೆಗಾಗಿ 3,55,000 ಅರ್ಜಿಗಳು ಬಂದಿವೆ. ಈ ಬಾರಿ ಭಾರತದಿಂದ 1,300 ಮಹಿಳೆಯರು ಮಹ್ರಾಮ್(ಪುರುಷರ ಸಂಗಾತಿಯ ನೆರವಿಲ್ಲದೆ) ಇಲ್ಲದೆ ಹಜ್ ಯಾತ್ರೆ ಕೈಗೊಳ್ಳುವ ಅವಕಾಶವೂ ಲಭಿಸಲಿದೆ. ಸಮುದ್ರಯಾನದ ಮೂಲಕ ಸೌದಿಗೆ ಪ್ರಯಾಣ ಭಾಗ್ಯ ನೀಡುವ ಬಗ್ಗೆ ಕೂಡಾ ಮಾತುಕತೆ ನಡೆಯುತ್ತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications