ದೇಶ ವಿಭಜನೆಗೆ ಜಿನ್ನಾ ಜೊತೆ ಸಾವರ್ಕರ್ ಒಪ್ಪಿಗೆ ಇತ್ತು: ಸಿಎಂ ಭೂಪೇಶ್ ಬಘೇಲ್
ಛತ್ತೀಸ್ಘಡ, ಆಗಸ್ಟ್ 15: ವಿನಾಯಕ ದಾಮೋದರ್ ಸಾವರ್ಕರ್ ಹಾಗೂ ಮಹಮ್ಮದ್ ಅಲಿ ಜಿನ್ನಾ ನಡುವೆ ದೇಶ ವಿಭಜನೆಗೆ ಸಂಬಂಧಿಸಿದಂತೆ ಒಮ್ಮತದ ಅಭಿಪ್ರಯವಿತ್ತು ಎಂದು ಹೇಳುವ ಮೂಲಕ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ವಿವಾದ ಎಬ್ಬಿಸಿದ್ದಾರೆ.
ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಸಾವರ್ಕರ್ ಕೂಡಾ ಪ್ರಸ್ತಾಪಿಸಿದ್ದರು ಅದಕ್ಕೆ ಜಿನ್ನಾ ಬೆಂಬಲಿಸಿದರು ಎಂದು ಕಾಂಗ್ರೆಸ್ ನಾಯಕ, ಮುಖ್ಯಮಂತ್ರಿ ಭೂಪೇಶ್ ಬಘೇಲ್ ಆರೋಪಿಸಿದ್ದಾರೆ. ದ್ವಿರಾಷ್ಟ್ರ ಸಿದ್ಧಾಂತವನ್ನು ಸಾವರ್ಕರ್ ಪ್ರಸ್ತಾಪಿಸಿದರು ಮತ್ತು ಜಿನ್ನಾ ಅದನ್ನು ಬೆಂಬಲಿಸಿದರು. ಈ ಜನರು ದೇಶದ ವಿಭಜಕರಾಗಿದ್ದಾರೆ. ದೇಶದ ಸ್ವಾತಂತ್ರ್ಯದಲ್ಲಿ ಅವರ ಪಾತ್ರವೇನು? ಆರ್ಎಸ್ಎಸ್ 1925 ರಲ್ಲಿ ರಚನೆಯಾಯಿತು. ಅವರು (ಬಿಜೆಪಿ) ಇನ್ನೂ ಬ್ರಿಟಿಷರನ್ನು ಟೀಕಿಸುವುದಿಲ್ಲ, ಅವರು ಬದಲಿಗೆ ಗಾಂಧಿಗಳನ್ನು ಟೀಕಿಸುತ್ತಾರೆ ಎಂದು ಬಘೇಲ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದರು.
Breaking: ಜಾಹೀರಾತಲ್ಲಿ ನೆಹರು ಹೆಸರು ಕೈ ಬಿಟ್ಟ ಕರ್ನಾಟಕ ಸರ್ಕಾರ
ಇದಕ್ಕೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಳೆಯ ಪಕ್ಷವು ಯಾವುದೇ ಆಧಾರ ಮತ್ತು ಪುರಾವೆಗಳಿಲ್ಲದೆ ಹೊಸ ಇತಿಹಾಸವನ್ನು ನಿರ್ಮಿಸುತ್ತಿದೆ ಎಂದು ಹೇಳಿದೆ. ವಿಭಜನೆಯ ಸಮಯದಲ್ಲಿ ಎಷ್ಟು ಜನರು ಸತ್ತರು ಎಂಬುದಕ್ಕೆ ಕಾಂಗ್ರೆಸ್ ಬಳಿ ಉತ್ತರವಿಲ್ಲ ಎಂದು ಬಿಜೆಪಿ ವಕ್ತಾರ ಸರ್ದಾರ್ ಆರ್ಪಿ ಸಿಂಗ್ ಹೇಳಿದ್ದಾರೆ.
ಸಾವರ್ಕರ್ ದ್ವಿರಾಷ್ಟ್ರಕ್ಕೆ ಒಪ್ಪಿಸಿದರು
ಹಿರಿಯ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಬಘೇಲ್ ಹೇಳಿಕೆಯನ್ನು ಬೆಂಬಲಿಸಿದ್ದು, ಅವರು ಹೇಳಿದ್ದು ಇತಿಹಾಸ. ಸಾವರ್ಕರ್ ಅವರು ದ್ವಿರಾಷ್ಟ್ರ ಸಿದ್ಧಾಂತವನ್ನು ನೀಡಿದರು. ಜಿನ್ನಾ ಕುರಿತಾದ ಪತ್ರದಲ್ಲಿ ಇದು ಇದೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಇದು ಇತಿಹಾಸದ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.
ಜಾಹೀರಾತಿನಲ್ಲಿ ನೆಹರು ಹೆಸರು ಕೈ ಬಿಟ್ಟ ಸರಕಾರ; ಜನರ ಆಕ್ರೋಶ
ಸಿದ್ದರಾಮಯ್ಯ ಅವರಿಂದ ಸರಣಿ ಟ್ವೀಟ್
ಕರ್ನಾಟಕ ಸರ್ಕಾರದ ಪತ್ರಿಕೆಯ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಕೈಬಿಟ್ಟಿದ್ದಕ್ಕಾಗಿ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತರಾಟೆಗೆ ತೆಗೆದುಕೊಂಡಿತು. ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ಗಳಲ್ಲಿ ವಿ ಡಿ ಸಾವರ್ಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರದ ಜಾಹೀರಾತಿನಲ್ಲಿ ಸಾವರ್ಕರ್ ಅವರ ಚಿತ್ರ ಇದಕ್ಕೆ ಆಕ್ಷೇಪಿಸಿ ಅವರು ಅವರ ಉಳಿವಿಗಾಗಿ ಬ್ರಿಟಿಷ್ ಅಧಿಕಾರಿಗಳ ಪರ ಇದ್ದರು ಎಂದು ಆರೋಪಿಸಿದರು.
ಆರ್ಎಸ್ಎಸ್ನ ಗುಲಾಮಗಿರಿ ಎಂದು ತೋರಿಸಿದ್ದಾರೆ
ಬ್ರಿಟಿಷರು ಹೋದ ಮೇಲೆ ಗುಲಾಮಗಿರಿ ಕೊನೆಗೊಂಡಿತು ಎಂದು ನಾವು ಭಾವಿಸಿರುವಾಗ, ಕರ್ನಾಟಕದ ಸಿಎಂ ಬೊಮ್ಮಾಯಿ ಅವರು ಅವರ ಕುರ್ಚಿಯನ್ನು ಉಳಿಸಲು ಹೋಗಿ ಆರ್ಎಸ್ಎಸ್ನ ಗುಲಾಮಗಿರಿ ಎಂದು ತೋರಿಸಿ ಇದು ತಪ್ಪು ಎಂದು ಸಾಬೀತುಪಡಿಸಿದ್ದಾರೆ. ಇಂದಿನ ಸರ್ಕಾರದ ಜಾಹೀರಾತಿನಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಅವರನ್ನು ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಸೇರಿಸದಿರುವುದು ಸಿಎಂ ಎಷ್ಟು ಕೀಳು ಎಂಬುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು.
ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು
ಬಸವರಾಜ ಬೊಮ್ಮಾಯಿ ಅವರೇ, ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?. ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ. ಡಿ. ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.