2,000 ನೋಟು ಬದಲಾಯಿಸಬೇಕೆ?: ಗುರುತಿನ ಚೀಟಿ, ಅರ್ಜಿ ಭರ್ತಿ ಯಾವುದು ಬೇಡ, ಇಲ್ಲಿದೆ ಮಾಹಿತಿ
ನವದೆಹಲಿ, ಮೇ. 21: ಈಗೇನಿದ್ದರೂ ಎರಡು ಸಾವಿರ ನೋಟಿಗಳ ಬದಲಾವಣೆಯದ್ದೇ ಚಿಂತೆ. ಇದರ ಬೆನ್ನಲ್ಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಶಾಖೆಗಳಲ್ಲಿ 2000 ರೂಪಾಯಿ ನೋಟುಗಳ ವಿನಿಮಯದ ಕುರಿತು ಸೂಚನೆಯನ್ನು ನೀಡಿದೆ. ಎಸ್ಬಿಐನಲ್ಲಿ ಮೇ 23 ರಿಂದ ನೋಟು ಬದಲಾವನೆ ಪ್ರಾರಂಭವಾಗಲಿದ್ದು, 30 ಸೆಪ್ಟೆಂಬರ್ 2023 ರವರೆಗೆ ಕಾಲಾವಕಾಶವಿರಲಿದೆ.
SBI clarifies that the facility of exchange of Rs 2000 denomination bank notes upto a limit of Rs 20,000 at a time will be allowed without obtaining any requisition slip pic.twitter.com/TP6t2n9oeJ
— ANI (@ANI) May 21, 2023
ಯಾವುದೇ ಎಸ್ಬಿಐ ಶಾಖೆಯಲ್ಲಿ 20,000 ರೂಪಾಯಿ ಮಿತಿಯ 2000 ರೂಪಾಯಿ ನೋಟುಗಳನ್ನು ಒಮ್ಮೆಗೆ ಬದಲಾಯಿಸಲು ಸಾರ್ವಜನಿಕ ಸದಸ್ಯರು ಗುರುತಿನ ಪುರಾವೆಗಳನ್ನು ತೋರಿಸುವುದು ಅಥವಾ ರಿಕ್ವಿಸಿಷನ್ ಸ್ಲಿಪ್ ಅನ್ನು ಭರ್ತಿ ಮಾಡುವ ಅಗತ್ಯವಿಲ್ಲ ಎಂದು ಭಾರತದ ಅತಿದೊಡ್ಡ ರಾಷ್ಟ್ರೀಕೃತ ಬ್ಯಾಂಕ್ ಸೂಚನೆ ಹೊರಡಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ "ಸ್ವಚ್ಛ ನೋಟು ನೀತಿ' ಯ ಅನುಸಾರವಾಗಿ 2000 ರೂಪಾಯಿ ನೋಟುಗಳನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದೆ. 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸಾಮಾನ್ಯವಾಗಿ ವಹಿವಾಟುಗಳಿಗೆ ಬಳಸಲಾಗುತ್ತಿಲ್ಲ ಎಂದು ಅವಲೋಕನಗಳು ತೋರಿಸಿವೆ ಎಂದು ಆರ್ಬಿಐ ತಿಳಿಸಿದೆ. ಇತರ ಮುಖಬೆಲೆಯ ನೋಟುಗಳ ದಾಸ್ತಾನು ಸಾರ್ವಜನಿಕರ ಕರೆನ್ಸಿ ಅವಶ್ಯಕತೆಗಳನ್ನು ಪೂರೈಸಲು ಸಮರ್ಪಕವಾಗಿ ಮುಂದುವರಿಯುತ್ತದೆ ಎಂದು ಆರ್ಬಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಖಾತೆದಾರರಲ್ಲದವರು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಂದೇ ಬಾರಿಗೆ 20,000 ಮಿತಿಯವರೆಗೆ 2,000 ರೂಪಾಯಿ ಗಳ ನೋಟುಗಳನ್ನು ಬದಲಾಯಿಸಬಹುದು ಎಂಬುದನ್ನು ಆರ್ಬಿಐ ಹೇಳಿದೆ. ಖಾತೆದಾರರು ತಮ್ಮ ಬ್ಯಾಂಕ್ ಖಾತೆಗೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಅಥವಾ ನೇರವಾಗಿ ಠೇವಣಿ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. ಇದಕ್ಕೆ 20,000 ರೂಪಾಯಿಗಳ ಮಿತಿ ಇರುವುದಿಲ್ಲ.
ಎಸ್ಬಿಐ ತನ್ನ ನೋಟಿಸ್ನಲ್ಲಿ, "ರೂ.2000 ಮುಖಬೆಲೆಯ ಬ್ಯಾಂಕ್ ನೋಟುಗಳನ್ನು ಎಲ್ಲಾ ಸಾರ್ವಜನಿಕರಿಗೆ ರೂ.20000 ವರೆಗೆ ಒಂದು ಸಮಯದಲ್ಲಿ ಯಾವುದೇ ರಿಕ್ವಿಸಿಷನ್ ಸ್ಲಿಪ್ ಪಡೆಯದೆಯೇ ವಿನಿಮಯ ಮಾಡಿಕೊಳ್ಳಲು ಅನುಮತಿಸಲಾಗುವುದು. ಹಣ ಬದಲಾವಣೆಯ ಸಮಯದಲ್ಲಿ ಸಾರ್ವಜನಿಕರು ಯಾವುದೇ ಗುರುತಿನ ಪುರಾವೆಗಳನ್ನು ಸಲ್ಲಿಸುವ ಅಗತ್ಯವಿಲ್ಲ' ಎಂದು ಎಸ್ಬಿಐ ಹೇಳಿದೆ.

ನೋಟು ಅಮಾನ್ಯೀಕರಣದ ನಂತರ 2016 ರಲ್ಲಿ 2000 ರೂಪಾಯಿಯ ನೋಟುಗಳನ್ನು ಪರಿಚಯಿಸಲಾಯಿತು. 2000 ರೂಪಾಯಿಯ ನೋಟು ತನ್ನ ಕಾನೂನುಬದ್ಧ ಟೆಂಡರ್ ಸ್ಥಿತಿಯನ್ನು ಮುಂದುವರಿಸುತ್ತದೆ ಎಂದು ಆರ್ಬಿಐ ಹೇಳಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications