ಹೈಕೋರ್ಟ್ ಜಡ್ಜ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ
ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಕರ್ಣನ್ ಅವರು ತಮ್ಮ ಸಹೋದ್ಯೋಗಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ತಾವು ದಲಿತನಾಗಿರುವುದರಿಂದ ತಮ್ಮನ್ನು ಗುರಿಯನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದರು.
ನವದೆಹಲಿ, ಫೆಬ್ರವರಿ 08 : ಭಾರತೀಯ ನ್ಯಾಯಾಂಗದ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿಯ ವಿರುದ್ಧ ಸರ್ವೋಚ್ಚ ನ್ಯಾಯಾಲಯ ನ್ಯಾಯಾಂಗ ನಿಂದನೆಯ ನೋಟೀಸ್ ಜಾರಿ ಮಾಡಿದೆ.
ಕೋಲ್ಕತಾ ಹೈಕೋರ್ಟ್ನ ನ್ಯಾಯಮೂರ್ತಿ ಸಿಎಸ್ ಕರ್ಣನ್ ವಿರುದ್ಧ ನ್ಯಾಯಾಂಗ ನಿಂದನೆಯ ನೋಟೀಸ್ ಜಾರಿ ಮಾಡಲಾಗಿದೆ. ಫೆಬ್ರವರಿ 13ರಂದು ಖುದ್ದಾಗಿ ಹಾಜರಾಗಿ, ತಮ್ಮ ವಿರುದ್ಧ ಕೋರ್ಟ್ ನಿಂದನೆಯ ಕ್ರಮವನ್ನು ಏಕೆ ಜರುಗಿಸಬಾರದು ಎಂಬುದರ ವಿವರಣೆ ನೀಡಬೇಕೆಂದು ಹೇಳಿದೆ.

ನ್ಯಾ. ಆರ್ ಕರ್ಣನ್ ಅವರಿಂದ ನ್ಯಾಯಾಂಗಕ್ಕೆ ಸಂಬಂಧಿಸಿದ ಎಲ್ಲ ಕೆಲಸಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದು, ಅವರು ವಿಚಾರಣೆ ನಡೆಸುತ್ತಿದ್ದ ಎಲ್ಲ ಕೇಸ್ ಫೈಲುಗಳನ್ನು ವಾಪಸ್ ಮಾಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಅವರ ನೇತೃತ್ವದ 7 ಸದಸ್ಯರಿರುವ ನ್ಯಾಯಪೀಠ, ಸಿಎಸ್ ಕರ್ಣನ್ ಅವರ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ನಡೆಸಲಿದೆ. ಕರ್ಣನ್ ಅವರು ತಮ್ಮ ಸಹೋದ್ಯೋಗಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪ ಮಾಡಿದ್ದರು.
ತಾವು ದಲಿತನಾಗಿರುವುದರಿಂದ ತಮ್ಮನ್ನು ಗುರಿಯನ್ನಾಗಿ ಮಾಡಲಾಗುತ್ತಿದೆ. ಅವರನ್ನು ಮದ್ರಾಸ್ ಹೈಕೋರ್ಟ್ ನಿಂದ ಕೋಲ್ಕತಾ ಹೈಕೋರ್ಟಿಗೆ ವರ್ಗಾವಣೆ ಮಾಡಿದ ಸರ್ವೋಚ್ಚ ನ್ಯಾಯಾಲಯದ ಸಮಿತಿಯ ನಿರ್ಧಾರವನ್ನು ಕೂಡ ಪ್ರಶ್ನಿಸಿದ್ದರು.
ಹೈಕೋರ್ಟಿನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ನ್ಯಾ. ಕರ್ಣನ್ ಅವರು ಜನವರಿ 23ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ತಾವು ಮಾಡಿರುವ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಂಡು ಭ್ರಷ್ಟಾಚಾರಿಗಳ ವಿರುದ್ಧ ತನಿಖೆ ನಡೆಸಬೇಕೆಂದೂ ಆಗ್ರಹಿಸಿದ್ದರು.
ಹಿಂದೆ ಕೂಡ ಸರ್ವೋಚ್ಚ ನ್ಯಾಯಾಲಯದ ಹಿಂದಿನ ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್ ಅವರು ಕರ್ಣನ್ ಅವರನ್ನು ಮುಂದೆ ನಿಲ್ಲಿಸಿಕೊಂಡು, ಕೋಲ್ಕತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ವಿರುದ್ಧ ಅನಗತ್ಯ ಆರೋಪ ಮಾಡುತ್ತಿರುವುದಕ್ಕೆ ಛೀಮಾರಿ ಹಾಕಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications