ಕಾವೇರಿ ನೀರು ಸ್ಕೀಂ: ರಾಜ್ಯಗಳ ಅಭಿಪ್ರಾಯ ಪಡೆಯಲು ಸುಪ್ರೀಂ ನಿರ್ಧಾರ
ನವದೆಹಲಿ, ಮೇ 17: ಕಾವೇರಿ ನೀರು ಸ್ಕೀಂ ಅನ್ನು ಅಂತಿಮಗೊಳಿಸುವ ಮುನ್ನ ಅದಕ್ಕೆ ಸಂಬಂಧಿಸಿದ ಎಲ್ಲ ರಾಜ್ಯಗಳ ಸಲಹೆಗಳನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ದಕ್ಷಿಣ ಭಾರತದ ಕಾವೇರಿ ನೀರು ಫಲಾನುಭವಿ ರಾಜ್ಯಗಳ ನಡುವೆ ನೀರು ಹಂಚಿಕೆ ಸೂತ್ರವನ್ನು ವಿವಾದಗಳಿಲ್ಲದಂತೆ ನಿರ್ವಹಿಸುವ ಸಲುವಾಗಿ ಸ್ಕೀಂ ಅಂತಿಮಗೊಳಿಸುವ ಕುರಿತ ತನ್ನ ಹಿಂದಿನ ಆದೇಶವನ್ನು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಬದಲಿಸಿದೆ.
ಎಲ್ಲ ಸಂಬಂಧಿತ ರಾಜ್ಯಗಳ ಸಲಹೆಯನ್ನು ಪರಿಗಣಿಸಿ ಸ್ಕೀಂಅನ್ನು ಅಂತಿಮಗೊಳಿಸುವುದಾಗಿ ನ್ಯಾಯಪೀಠ ಹೇಳಿತು. ನಾವು ತೀರ್ಪನ್ನು ನಾಳೆ (ಮೇ 18) ಪ್ರಕಟಿಸಲಿದ್ದೇವೆ. ಅದು ಸಾಧ್ಯವಾಗದಿದ್ದರೆ ಮೇ 22 ಅಥವಾ 23ರಂದು ಪ್ರಕಟಿಸಲಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ್ ಅವರನ್ನು ಒಳಗೊಂಡಿರುವ ಪೀಠ ತಿಳಿಸಿತು.

ರಾಜ್ಯದ ಪರ ವಾದ ಮಂಡಿಸಿದ ಶ್ಯಾಮ್ ದಿವಾನ್, ಕಾವೇರಿ ನೀರು ವಿವಾದ ನ್ಯಾಯಮಂಡಳಿಯು ನೀರಿನ ಸ್ಥಿರ ಹರಿವನ್ನು ನಿಭಾಯಿಸಲು ಜಲಾಶಯದಲ್ಲಿ ಕನಿಷ್ಠ ಮಟ್ಟದ ನೀರು ಉಳಿಸಿಕೊಳ್ಳಲು ಅವಕಾಶ ನೀಡಿತ್ತು. ಆದರೆ, ಈ ವಿಚಾರದ ಬಗ್ಗೆ ಕರಡಿನಲ್ಲಿ ಪ್ರಸ್ತಾಪವೇ ಇಲ್ಲ ಎಂದು ತಿಳಿಸಿದರು.
ನ್ಯಾಯಪೀಠದ ಸೂಚನೆಯಂತೆ ಕಾಲಕಾಲಕ್ಕೆ ನೀರು ಹಂಚಿಕೆಯ ನಿರ್ದೇಶನಗಳನ್ನು ನೀಡುವ ಅಧಿಕಾರವನ್ನು ತಾನೇ ಪಡೆದುಕೊಳ್ಳುವಂತೆ ಕರಡನ್ನು ಮಾರ್ಪಾಡು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಪೀಠಕ್ಕೆ ಮಾಹಿತಿ ನೀಡಿದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications