ಶಶಿಕಲಾಗೆ ಸುಪ್ರೀಂಕೋರ್ಟಿನಿಂದ ಸಿಕ್ತು ತಾತ್ಕಾಲಿಕ ನೆಮ್ಮದಿ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ತ್ವರಿತವಾಗಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ ಹೇಳಿೆ

ನವದೆಹಲಿ, ಫೆಬ್ರವರಿ 10:ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಮುಂದೂಡಿದೆ.

ಈ ಅರ್ಜಿಯನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯು ಶಶಿಕಲಾ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಕ್ರಮವನ್ನು ಪ್ರಶ್ನಿಸಿದ ಪಟ್ಟ ಪಂಚಾಯತ್ ಇಯಕ್ಕಂ ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

Sasikala

ಈ ಅರ್ಜಿ ಶುಕ್ರವಾರ ಬೆಳಗ್ಗೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರಬೇಕಿತ್ತು. ಈಗಾಗಲೇ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಭೀತಿಯಿಂದ ತಾತ್ಕಾಲಿಕ ನೆಮ್ಮದಿ ಪಡೆದುಕೊಂಡಿರುವ ಶಶಿಕಲಾ ಅವರಿಗೆ ಈ ಪಿಐಎಲ್ ನಿಂದ ಸದ್ಯಕ್ಕೆ ಯಾವುದೇ ಭೀತಿ ಇಲ್ಲ. ಯಾವುದೇ ಕೇಸಿನಲ್ಲಿ ಶಶಿಕಲಾ ವಿರುದ್ದವಾಗಿ ತೀರ್ಪು ಹೊರಬಿದ್ದಿದ್ದೇ ಆದರೆ ಅವರು ಮುಖ್ಯಮಂತ್ರಿಯಾಗುವ ಕನಸು ಕನಸಾಗಿಯೇ ಉಳಿಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+