ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಶಿಕಲಾಗೆ ಸುಪ್ರೀಂಕೋರ್ಟಿನಿಂದ ಸಿಕ್ತು ತಾತ್ಕಾಲಿಕ ನೆಮ್ಮದಿ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ತ್ವರಿತವಾಗಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ ಹೇಳಿೆ

By Mahesh
|
Google Oneindia Kannada News

ನವದೆಹಲಿ, ಫೆಬ್ರವರಿ 10:ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಮುಂದೂಡಿದೆ.

ಈ ಅರ್ಜಿಯನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯು ಶಶಿಕಲಾ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಕ್ರಮವನ್ನು ಪ್ರಶ್ನಿಸಿದ ಪಟ್ಟ ಪಂಚಾಯತ್ ಇಯಕ್ಕಂ ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

Sasikala

ಈ ಅರ್ಜಿ ಶುಕ್ರವಾರ ಬೆಳಗ್ಗೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರಬೇಕಿತ್ತು. ಈಗಾಗಲೇ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಭೀತಿಯಿಂದ ತಾತ್ಕಾಲಿಕ ನೆಮ್ಮದಿ ಪಡೆದುಕೊಂಡಿರುವ ಶಶಿಕಲಾ ಅವರಿಗೆ ಈ ಪಿಐಎಲ್ ನಿಂದ ಸದ್ಯಕ್ಕೆ ಯಾವುದೇ ಭೀತಿ ಇಲ್ಲ. ಯಾವುದೇ ಕೇಸಿನಲ್ಲಿ ಶಶಿಕಲಾ ವಿರುದ್ದವಾಗಿ ತೀರ್ಪು ಹೊರಬಿದ್ದಿದ್ದೇ ಆದರೆ ಅವರು ಮುಖ್ಯಮಂತ್ರಿಯಾಗುವ ಕನಸು ಕನಸಾಗಿಯೇ ಉಳಿಯಲಿದೆ.

English summary
Supreme Court today (Feb 10) declined urgent hearing of PIL seeking to restrain V K Sasikala Natarajn from taking oath as CM
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X