ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೇಜ್ ಬಹದ್ದೂರ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಮೇ 09: ವಾರಾಣಸಿ ಲೋಕಸಭೆ ಚುನಾವಣಾ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಎರಡೆರಡು ಬಾರಿ ಅರ್ಜಿ ಸಲ್ಲಿಸಿ ವಿಫಲರಾಗಿದ್ದ ಬಿಎಸ್ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಅವರು ತಮ್ಮ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಬಹಾದ್ದೂರ್​ ಯಾದವ್ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ಮಂಗಳವಾರದಂದು ತಿರಸ್ಕರಿಸಿದೆ.

ಮೋದಿ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಸೈನಿಕನ ನಾಮಪತ್ರ ತಿರಸ್ಕೃತಮೋದಿ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಸೈನಿಕನ ನಾಮಪತ್ರ ತಿರಸ್ಕೃತ

ತೇಜ್​ಬಹಾದ್ದೂರ್​ಯಾದವ್​ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಪ್ರಮುಖ ಅಂಶಗಳಿಲ್ಲ ಎಂದು ಸುಪ್ರೀಂಕೋರ್ಟೀನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ಅವರು ಯಾದವ್​ ಅವರ ಅರ್ಜಿಯನ್ನು ತಿರಸ್ಕರಿಸಿದರು.

SC dismisses Tej Bahadur Yadav’s plea against rejection of his candidature in Varanasi

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ಸಿನಿಂದ ಅಜಯ್​ ರಾಯ್ ಕಣದಲ್ಲಿದ್ದಾರೆ. ಎಸ್​ಪಿ-ಬಿಎಸ್​ಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಯೋಧ ತೇಜ್​ಬಹಾದ್ದೂರ್ ಯಾದವ್ ಉಮೇದುವಾರಿಕೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ಪಕ್ಷೇತರರಾಗಿ ಕೂಡಾ ನಾಮಪತ್ರ ಸಲ್ಲಿಸಿದ್ದರು.

ಚುನಾವಣೆಗೆ ಸ್ಪರ್ಧಿಸಲು ಅಗತ್ಯ ದಾಖಲಾತಿಗಳನ್ನು ಸಲ್ಲಿಸದ ಕಾರಣ ಚುನಾವಣಾ ಆಯೋಗ ಇವರ ನಾಮಪತ್ರವನ್ನು ತಿರಸ್ಕರಿಸಿತ್ತು.

ಮೋದಿ ಎದುರಾಳಿ ತೇಜ್ ಬಹದೂರ್ ಯಾದವ್ ಆಸ್ತಿ ವಿವರ ಮೋದಿ ಎದುರಾಳಿ ತೇಜ್ ಬಹದೂರ್ ಯಾದವ್ ಆಸ್ತಿ ವಿವರ

2017ರಲ್ಲಿ ಯೋಧರಿಗೆ ನೀಡುವ ಅಹಾರದ ಗುಣಮಟ್ಟವನ್ನು ಟೀಕಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್​ ಹಾಕಿದ ಯಾದವ್ ಅವರು ನಂತರ ತಮ್ಮ ಕೆಲಸ ಕಳೆದುಕೊಂಡಿದ್ದರು.

English summary
The Supreme Court on Thursday dismissed plea of former BSF constable and SP candidate Tej Bahadur Yadav against rejection of his nomination from Varanasi LS constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X