ಆಧಾರ್ ಜೊತೆ ಮೊಬೈಲ್ ಲಿಂಕ್ : ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ
ನವದೆಹಲಿ, ನವೆಂಬರ್ 03 : ಆಧಾರ್ ಜೊತೆಗೆ ಬ್ಯಾಂಕ್ ಖಾತೆ ಮತ್ತು ಮೊಬೈಲ್ ಸಂಖ್ಯೆಯನ್ನು ಜೋಡಿಸುವುದನ್ನು ತಡೆಯಬೇಕೆಂದು ಕೋರಲಾಗಿದ್ದ ಅರ್ಜಿಯಲ್ಲಿ ಮಧ್ಯಂತರ ಆದೇಶವನ್ನು ನೀಡಲು ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ.
ಈ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯದ ಸಾಂವಿಧಾನಿಕ ಪೀಠ ನವೆಂಬರ್ ಕೊನೆಯ ವಾರದಲ್ಲಿ ತೆಗೆದುಕೊಳ್ಳಲಿದ್ದು, ಈ ವಿಷಯವನ್ನು ಅದಕ್ಕೇ ಬಿಡಲಾಗುವುದು ಎಂದು ನ್ಯಾಯಮೂರ್ತಿ ಎಕೆ ಸಿಕ್ರಿ ಅವರು ಹೇಳಿದರು.
ಇದೇ ಸಮಯದಲ್ಲಿ, ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆ ಮತ್ತು ಮೊಬೈಲ್ ಜೊತೆ ಜೋಡಿಸಲೇಬೇಕೆಂದು ಬ್ಯಾಂಕ್ ಮತ್ತು ಮೊಬೈಲ್ ಕಂಪನಿಗಳು ಒತ್ತಾಯಿಸಿ ಗ್ರಾಹಕರಲ್ಲಿ ಗೊಂದಲ ಮೂಡಿಸುತ್ತಿರುವುದಕ್ಕೆ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ಅಥವಾ ಮೊಬೈಲ್ ಸಂಖ್ಯೆಯನ್ನು ಡಿಸೆಂಬರ್ 31ರೊಳಗೆ ಆಧಾರ್ ಜೊತೆಗೆ ಜೋಡಿಸಲಿದ್ದರೆ ನಿಮ್ಮ ಖಾತೆ ಅಥವಾ ಮೊಬೈಲ್ ಚಲಾವಣೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಎಫ್ಎಂ ಸೇರಿದಂತೆ ಎಲ್ಲೆಂದರಲ್ಲಿ ಜಾಹೀರಾತುಗಳು ಬಂದು ಗ್ರಾಹಕರನ್ನು ಕಂಗೆಡಿಸಿವೆ.
ಇಂಥ ಸಂದೇಶಗಳು ತಮಗೂ ಬರುತ್ತಿವೆ ಎಂದು ನ್ಯಾಯಮೂರ್ತಿ ಸಿಕ್ರಿ ತಿಳಿಸಿದರು. ಆದರೆ ಈ ರೀತಿ ಸಂದೇಶಗಳನ್ನು ಕಳಿಸಿ ಗ್ರಾಹಕರಿಗೆ ಧಮ್ಕಿ ಹಾಕುತ್ತಿರುವುದನ್ನು ಕೇಂದ್ರ ನಿರಾಕರಿಸಿದೆ. ಈ ಸಂಸ್ಥೆಗಳು ತಕ್ಷಣ ಗ್ರಾಹಕರಿಗೆ ಇಂಥ ಸಂದೇಶ ರವಾನಿಸುವುದನ್ನು ನಿಲ್ಲಿಸಬೇಕು ಎಂದು ನ್ಯಾ. ಸಿಕ್ರಿ ಆದೇಶಿಸಿದರು.
ಆಧಾರ್ ಕಾರ್ಡ್ ದೇಶದ ನಾಗರಿಕರ ಖಾಸಗಿತನದ ಮೇಲೆ ಲಗ್ಗೆ ಹಾಕಿದೆ ಎಂದು ದೂರಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಇದರ ವಾದ ಪ್ರತಿವಾದವನ್ನು ಸಾಂವಿಧಾನಿಕ ಪೀಠ ನವೆಂಬರ್ ಕೊನೆಯ ವಾರದಲ್ಲಿ ತೆಗೆದುಕೊಳ್ಳಲಿದೆ.
ಇ-ಕೆವೈಸಿ ಅಡಿಯಲ್ಲಿ ಫೆಬ್ರವರಿ 6ರೊಳಗೆ ಎಲ್ಲ ಮೊಬೈಲ್ ಬಳಕೆದಾರರು ಆಧಾರ್ ಸಂಖ್ಯೆಯ ಜೊತೆ ಲಿಂಕ್ ಮಾಡಬೇಕೆಂದು ಗುರುವಾರವೇ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ. ಇದಕ್ಕೆ ಸರ್ವೋಚ್ಚ ನ್ಯಾಯಾಲಯದ ಅನುಮತಿಯನ್ನು ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications