ಶಾಲೆಗಳಲ್ಲಿ ಹಿಂದಿ ಕಡ್ಡಾಯಗೊಳಿಸುವಂತೆ ಕೋರಿದ್ದ ಅರ್ಜಿ ವಜಾ!
ಒಂದನೇ ತರಗತಿಯಿಂದ ಎಂಟನೇ ತರಗತಿ ತನಕ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಿದರೆ ದೇಶದ ಏಕತೆಗೆ ಪೂರಕವಾಗಲಿದೆ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ನವದೆಹಲಿ, ಮೇ 05: ಒಂದನೇ ತರಗತಿಯಿಂದ ಎಂಟನೇ ತರಗತಿ ತನಕ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಿದರೆ ದೇಶದ ಏಕತೆಗೆ ಪೂರಕವಾಗಲಿದೆ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಸುಪ್ರೀಂಕೋರ್ಟ್ ಆದೇಶಕ್ಕೆ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯದಲ್ಲಿ ಭಾರಿ ಸ್ವಾಗತ ಸಿಕ್ಕಿದೆ.
ದೇಶದಾದ್ಯಂತ ಎಲ್ಲಾ ಶಾಲೆಗಳಲ್ಲಿ 1ರಿಂದ 8ನೇ ತರಗತಿಯವರೆಗೆ ಹಿಂದಿ ಕಲಿಕೆ ಕಡ್ಡಾಯಗೊಳಿಸುವಂತೆ ಸರಕಾರಕ್ಕೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಕೂಡಾ ಸುಪ್ರೀಂಕೋರ್ಟ್ ನಿರಾಕರಿಸಿದೆ.

ಶಾಲೆಗಳಲ್ಲಿ ಹಿಂದಿ ಕಲಿಕೆ ಕಡ್ಡಾಯಗೊಳಿಸುವಂತೆ ಕೇಂದ್ರ ಸರಕಾರ, ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಬೇಕೆಂದು ಬಿಜೆಪಿಯ ದಿಲ್ಲಿ ಘಟಕದ ವಕ್ತಾರ ಅಶ್ವಿನಿ ಕುಮಾರ್ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.
ಸಂವಿಧಾನದಲ್ಲಿ ನೀಡಲಾಗಿರುವ ಅವಕಾಶ ಮತ್ತು 1968ರ ರಾಷ್ಟ್ರೀಯ ನೀತಿ ಗೊತ್ತುವಳಿಯಲ್ಲಿ ತಿಳಿಸಲಾಗಿರುವ ತ್ರಿಭಾಷಾ ಸೂತ್ರವನ್ನು ತಮ್ಮ ಅರ್ಜಿಯಲ್ಲಿ ಉಪಾಧ್ಯಾಯ ಉಲ್ಲೇಖಿಸಿದ್ದರು
ಜೆ.ಎಸ್.ಖೇಹರ್ ನೇತೃತ್ವದ ಪೀಠವೊಂದು, ನೀವು ಆಡಳಿತ ಪಕ್ಷಕ್ಕೆ ಸೇರಿದವರು. ನೀವೇ ನಿಮ್ಮ ಪಕ್ಷವನ್ನು ಕೇಳಿಕೊಳ್ಳಬಹುದಲ್ಲವೇ ಎಂದು ಪ್ರಶ್ನಿಸಿತು.
ನಾಳೆ ಇತರ ಭಾಷೆಗಳನ್ನು ಮಾತನಾಡುವ ಜನರೂ ಅರ್ಜಿ ಸಲ್ಲಿಸಬಹುದು. ನ್ಯಾಯಾಲಯ ಇಂತಹ ವಿಷಯಗಳಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈಗ ನೀವು ಹಿಂದಿಯ ಬಗ್ಗೆ ಹೇಳುತ್ತಿದ್ದೀರಿ. ನಾಳೆ ಇನ್ನೊಬ್ಬರು ಮುಂದೆ ಬಂದು ಸಂಸ್ಕೃತ ಕಡ್ಡಾಯಗೊಳಿಸಿ ಎನ್ನಬಹುದು. ನಾನು ಮತ್ತು ನೀವು ಪಂಜಾಬಿ ಭಾಷೆಯ ಬಗ್ಗೆ ಅಹವಾಲು ಮಂಡಿಸಬಹುದು. ಆದ್ದರಿಂದ ನಾವೇನೂ ಹೇಳಲು ಸಾಧ್ಯವಿಲ್ಲ. ನಿಮ್ಮ ಅರ್ಜಿಯನ್ನು ವಾಪಾಸು ಪಡೆಯಿರಿ ಎಂದು ನ್ಯಾಯಪೀಠ ತಿಳಿಸಿತು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications