ಶಾಲೆಗಳಲ್ಲಿ ಹಿಂದಿ ಕಡ್ಡಾಯಗೊಳಿಸುವಂತೆ ಕೋರಿದ್ದ ಅರ್ಜಿ ವಜಾ!
ಒಂದನೇ ತರಗತಿಯಿಂದ ಎಂಟನೇ ತರಗತಿ ತನಕ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಿದರೆ ದೇಶದ ಏಕತೆಗೆ ಪೂರಕವಾಗಲಿದೆ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ನವದೆಹಲಿ, ಮೇ 05: ಒಂದನೇ ತರಗತಿಯಿಂದ ಎಂಟನೇ ತರಗತಿ ತನಕ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಿದರೆ ದೇಶದ ಏಕತೆಗೆ ಪೂರಕವಾಗಲಿದೆ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಸುಪ್ರೀಂಕೋರ್ಟ್ ಆದೇಶಕ್ಕೆ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯದಲ್ಲಿ ಭಾರಿ ಸ್ವಾಗತ ಸಿಕ್ಕಿದೆ.
ದೇಶದಾದ್ಯಂತ ಎಲ್ಲಾ ಶಾಲೆಗಳಲ್ಲಿ 1ರಿಂದ 8ನೇ ತರಗತಿಯವರೆಗೆ ಹಿಂದಿ ಕಲಿಕೆ ಕಡ್ಡಾಯಗೊಳಿಸುವಂತೆ ಸರಕಾರಕ್ಕೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಕೂಡಾ ಸುಪ್ರೀಂಕೋರ್ಟ್ ನಿರಾಕರಿಸಿದೆ.

ಶಾಲೆಗಳಲ್ಲಿ ಹಿಂದಿ ಕಲಿಕೆ ಕಡ್ಡಾಯಗೊಳಿಸುವಂತೆ ಕೇಂದ್ರ ಸರಕಾರ, ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಬೇಕೆಂದು ಬಿಜೆಪಿಯ ದಿಲ್ಲಿ ಘಟಕದ ವಕ್ತಾರ ಅಶ್ವಿನಿ ಕುಮಾರ್ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.
ಸಂವಿಧಾನದಲ್ಲಿ ನೀಡಲಾಗಿರುವ ಅವಕಾಶ ಮತ್ತು 1968ರ ರಾಷ್ಟ್ರೀಯ ನೀತಿ ಗೊತ್ತುವಳಿಯಲ್ಲಿ ತಿಳಿಸಲಾಗಿರುವ ತ್ರಿಭಾಷಾ ಸೂತ್ರವನ್ನು ತಮ್ಮ ಅರ್ಜಿಯಲ್ಲಿ ಉಪಾಧ್ಯಾಯ ಉಲ್ಲೇಖಿಸಿದ್ದರು
ಜೆ.ಎಸ್.ಖೇಹರ್ ನೇತೃತ್ವದ ಪೀಠವೊಂದು, ನೀವು ಆಡಳಿತ ಪಕ್ಷಕ್ಕೆ ಸೇರಿದವರು. ನೀವೇ ನಿಮ್ಮ ಪಕ್ಷವನ್ನು ಕೇಳಿಕೊಳ್ಳಬಹುದಲ್ಲವೇ ಎಂದು ಪ್ರಶ್ನಿಸಿತು.
ನಾಳೆ ಇತರ ಭಾಷೆಗಳನ್ನು ಮಾತನಾಡುವ ಜನರೂ ಅರ್ಜಿ ಸಲ್ಲಿಸಬಹುದು. ನ್ಯಾಯಾಲಯ ಇಂತಹ ವಿಷಯಗಳಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈಗ ನೀವು ಹಿಂದಿಯ ಬಗ್ಗೆ ಹೇಳುತ್ತಿದ್ದೀರಿ. ನಾಳೆ ಇನ್ನೊಬ್ಬರು ಮುಂದೆ ಬಂದು ಸಂಸ್ಕೃತ ಕಡ್ಡಾಯಗೊಳಿಸಿ ಎನ್ನಬಹುದು. ನಾನು ಮತ್ತು ನೀವು ಪಂಜಾಬಿ ಭಾಷೆಯ ಬಗ್ಗೆ ಅಹವಾಲು ಮಂಡಿಸಬಹುದು. ಆದ್ದರಿಂದ ನಾವೇನೂ ಹೇಳಲು ಸಾಧ್ಯವಿಲ್ಲ. ನಿಮ್ಮ ಅರ್ಜಿಯನ್ನು ವಾಪಾಸು ಪಡೆಯಿರಿ ಎಂದು ನ್ಯಾಯಪೀಠ ತಿಳಿಸಿತು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications