ಸೆಂಟ್ರಲ್ ವಿಸ್ಟಾ: ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧದ ಮೇಲ್ಮನವಿ ಸುಪ್ರೀಂನಿಂದ ವಜಾ
ನವದೆಹಲಿ, ಜೂ.29: ಕೊರೊನಾ ವೈರಸ್ನ ಸಂಕಷ್ಟದ ಸಂದರ್ಭದಲ್ಲಿ ಸೆಂಟ್ರಲ್ ವಿಸ್ಟಾ ಯೋಜನೆಯ ಕಾಮಗಾರಿಗೆ ತಡೆ ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಕೊರೊನಾ ವೈರಸ್ನ ಸಂಕಷ್ಟದ ಸಂದರ್ಭದಲ್ಲಿ ಸೆಂಟ್ರಲ್ ವಿಸ್ಟಾ ಯೋಜನೆಯ ಕಾಮಗಾರಿಗೆ ತಡೆ ನೀಡಲು ದೆಹಲಿ ಹೈಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹಾಗೆಯೇ ಇದೊಂದು ರಾಷ್ಟ್ರೀಯ ಅಗತ್ಯ ಯೋಜನೆ ಎಂದು ಹೇಳಿ, ಈ ಕಾಮಗಾರಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿದಾರರಿಗೆ ಒಂದು ಲಕ್ಷ ರೂಪಾಯಿ ದಂಡವನ್ನು ದೆಹಲಿ ಹೈಕೋರ್ಟ್ ವಿಧಿಸಿತ್ತು.
ಬಳಿಕ ಅರ್ಜಿದಾರರು ದೆಹಲಿ ಹೈಕೋರ್ಟ್ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿಯನ್ನು ಸಲ್ಲಿಸಿದ್ದು, ನ್ಯಾಯಾಮೂರ್ತಿಗಳಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಅನಿರುದ್ಧ ಬೋಸ್ ಇದ್ದ ನ್ಯಾಯಪೀಠ ಈ ಅರ್ಜಿಯನ್ನು ತಿರಸ್ಕರಿಸಿದೆ.

ಇದೇ ರೀತಿ ಬೇರೆ ಕಾಮಗಾರಿಗಳು ಪ್ರಗತಿಯಲ್ಲಿದೆ, ಹಾಗಿರುವಾಗ ಅರ್ಜಿದಾರರು ಕೋವಿಡ್ ನೆಪ ಹೇಳಿ ಸೆಂಟ್ರಲ್ ವಿಸ್ತಾ ಯೋಜನೆಯೊಂದನ್ನೇ ಸ್ಥಗಿತಗೊಳಿಸಬೇಕು ಎಂದು ಯಾಕೆ ಮನವಿ ಮಾಡಿದ್ದಾರೆ ಎಂದು ಪ್ರಶ್ನಿಸಿರುವ ನ್ಯಾಯಪೀಠ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ರೀತಿಯ ಹಲವು ಕಾಮಗಾರಿಗಳು ನಡೆಯುತ್ತಿದೆ, ಆ ಬಗ್ಗೆ ಮೇಲ್ಮನವಿದಾರರು ಯಾವುದಾದರೂ ಪ್ರಾಮಾಣಿಕ ಸಂಶೋಧನೆ ನಡೆಸಿದ್ದಾರೆಯೇ, ಅದು ಈ ಅರ್ಜಿಯಲ್ಲಿ ಒಳಗೊಂಡಿದೆಯೇ ಎಂದು ಕೇಳಿದೆ.
ಈ ಸಂದರ್ಭದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ ಸಿದ್ಧಾರ್ಥ್ ಲೂತ್ರಾ, ಅರ್ಜಿಯಲ್ಲಿರುವ ಅನುಬಂಧಗಳನ್ನು ಉಲ್ಲೇಖಿಸಿ ಸಂಶೋಧನೆ ನಡೆಸಿರುವ ಮಾಹಿತಿ ಒದಗಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಮಾರ್ಗಸೂಚಿಗಳಿಗೆ ಅನುಸಾರವಾಗಿಯೇ ಯೋಜನೆಯ ಚಟುವಟಿಕೆಗಳನು ನಡೆಯುತ್ತಿದೆ ಎಂದು ನ್ಯಾಯಾಲಯ ಹೇಳಿದೆ.
ನಿಮಗೆ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಯೋಜನೆ ಇಲ್ಲ ಎಂಬ ಆತಂಕವಿತ್ತು. ಆದರೆ ಅದನ್ನು ಪಾಲಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಹಾಗಿರುವಾಗ ಅರ್ಜಿಯನ್ನು ಹೇಗೆ ಮುಂದುವರೆಸುವುದು?. ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಹೇಳಿ ಮೇಲ್ಮನವಿಯನ್ನು ವಜಾಗೊಳಿಸಿದೆ.
(ಒನ್ಇಂಡಿಯಾ ಸುದ್ದಿ)
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications